Home / ಜಿಲ್ಲೆ / ಬೆಳಗಾವಿ (page 244)

ಬೆಳಗಾವಿ

ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ …

Read More »

ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ …

Read More »

ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಆರಂಭವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿ ಸೇತುವೆಗಳು ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಕೃಷ್ಣಾ ನದಿಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯ ಕಲ್ಲೋಳ – ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸದ್ಯ 56 ಸಾವಿರ ಕ್ಯೂಸೇಕ್ ನಷ್ಟು …

Read More »

ಬೆಳಗಾವಿಯ ಹೊರ ವಲಯದಲ್ಲಿ ಕಂಟೇನರ್​ಗೆ ಲಾರಿ ಡಿಕ್ಕಿ

ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ …

Read More »

ಬೆಳಗಾವಿ, ಕಾಗವಾಡ, ಬೈಲಹೊಂಗಲ, ಖಾನಾಪುರ ತಾಲೂಕುಗಳಲ್ಲಿ ಹಲವು ಹುದ್ದೆ

ಬೆಳಗಾವಿ : ಕಾಗವಾಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬ ಸಹಾಯಕಿಯರ ಆಯ್ಕೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಜು.೧೩ ರಂದು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಜು.೧೪ ರಂದು ಪ್ರಾರಂಭ ದಿನಾಂಕವಾಗಿದ್ದು, ಅಗಸ್ಟ್.೧೪ ರಂದು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು  anganwadirecruit.kar.nic.in  ವೆಬ್ ಸೈಟ್ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …

Read More »

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:   ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …

Read More »

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ, ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಕ್ಕಳಾದ 8 ವರ್ಷದ ಅಂಜಲಿ ಹಾಗೂ 4 ವರ್ಷದ ಅನನ್ಯಾ ಮೃತಪಟ್ಟಿದ್ದು, ತಂದೆ ಅನಿಲ್ ಸ್ಥಿತಿ ಗಂಭೀರವಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು …

Read More »

ಮಹಾರಾಷ್ಟ್ರ ಕಡೆಯಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು‌ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ …

Read More »

ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ …

Read More »