Breaking News
Home / ಜಿಲ್ಲೆ / ಬೆಳಗಾವಿ (page 251)

ಬೆಳಗಾವಿ

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ‌ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …

Read More »

ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ‌ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …

Read More »

ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.: ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.   ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್‌ವಾರು ಕರಡು ಮತದರಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಾನಗರ ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್.ತಿಳಿಸಿದ್ದಾರೆ. ಮಹಾನಗರ ಪಾಲಿಕೆಗೆ 2011 ರ ಸಾಲಿನ ಜನಗಣತಿಯನ್ನು ಆಧರಿಸಿ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್‌ 19 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ …

Read More »

ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ಮೇದಾರ ಓಣಿ ಬೆಳಗಾವಿಯ ಸತೀಶ ಕಾಕತಿಕರ ನೇಮಕ..!

ಬೆಳಗಾವಿ ಮಹಾನಗರ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಹಾಗೂ ಯುವ ಮುಖಂಡರಾದ ಸತೀಶ ಕಾಕತಿಕರ ಅವರನ್ನು ರಾಜ್ಯ ಸರ್ಕಾರ ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ (nominate) ಮಾಡಿ ಆದೇಶ ಜಾರಿಗೊಳಿಸಿದೆ. ಮಾನ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಮುಜರಾಯಿ) ಇವರ ಆದೇಶ ಅನುಸಾರ ಕಳೆದ ವಾರದಲ್ಲಿ ಬೆಳಗಾವಿ ತಹಶಿಲ್ದಾರ ಕಚೇರಿಯಿಂದ ಸತೀಶ ಕಾಕತಿಕರ ಅವರಿಗೆ ಆದೇಶ ಪತ್ರವನ್ನು ಅಂಚೆ ಇಲಾಖೆ …

Read More »

ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …

Read More »

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »

ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್

ಬೆಳಗಾವಿ- ಬೆಳಗಾವಿ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ವಿಪರೀತವಾಗಿದೆ.ಪ್ರತಿಯೊಂದು ಬಡವಾಣೆಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ನಗರದಲ್ಲಿ ಭೌ…ಬೌ..ಚಳುವಳಿ ಶುರುವಾಗಿದೆ. ಪ್ರಾಣಿ ದಯಾಮಯಿಗಳ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯಲ್ಲಿ ಬೀದಿ ನಾಯಿಗಳ ಸಂತತಿ ಹೆಚ್ಚಾಗಿದ್ದು.ಮಕ್ಕಳು ಮನೆಯ ಅಂಗಳದಲ್ಲಿ ಆಟ ಆಡುವದೇ ಕನಸಿನ ಮಾತಾಗಿದೆ.ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್ ಬಿದ್ದಿದೆ. ನಾಯಿಗಳ ಸಂತತಿ ಕಂಟ್ರೋಲ್ ಮಾಡಲು,ಬೆಳಗಾವಿ ಮಹಾನಗರ ಪಾಲಿಕೆ ಪ್ರತಿ ವರ್ಷ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ …

Read More »

ಲಾಕ್ ಡೌನ್, ನೌಕರರ ಮುಷ್ಕರದಿಂದ ಕೆಎಸ್ ಆರ್ ಟಿಸಿಗೆ 4,000ಕೋಟಿ ರೂ ನಷ್ಟ- ಲಕ್ಷ್ಮಣ ಸವದಿ

ಬೆಳಗಾವಿ: ಲಾಕ್ ಡೌನ್ ಮತ್ತು ನೌಕರರ ಮಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕಳೆದ 15 ತಿಂಗಳಲ್ಲಿ 4,000 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೊದಲನೇ ಅಲೆ ನಂತರ ಕೆಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಇಳಿದರು. ಮುಷ್ಕರ ಕೊನೆಗೊಳಿಸುತ್ತಿದ್ದಂತೆ ಸಾಂಕ್ರಾಮಿಕದ ಎರಡನೇ ಅಲೆ ಆರಂಭವಾಯಿತು. ಇಲಾಖೆ …

Read More »

ವಾರದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾಯಿಸಲಾಗುವುದು. ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು – ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುವುದು. ವಾರದೊಳಗೆ ಈ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಮುಖರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಕಡೆ 3 ವರ್ಷ ಪೂರ್ಣಗೊಂಡಿದೆ. ಕೆಲವು ಕಡೆ ಬದಲಾವಣೆ ಬೇಡಿಕೆ ಇದೆ. ಕೆಲವರು ಸ್ವಯಂ ಪ್ರೇರಿತರಾಗಿ ಸ್ಥಾನ ಬಿಟ್ಟುಕೊಡಲು ಮುಂದಾಗಿದ್ದಾರೆ. ಅಂತಹ ಕಡೆಗಳಲ್ಲಿ ಜಿಲ್ಲಾವಾರು ಸಭೆ ನಡೆಸಿ …

Read More »

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು …

Read More »