Breaking News
Home / ಜಿಲ್ಲೆ / ಬೆಳಗಾವಿ (page 254)

ಬೆಳಗಾವಿ

ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ

ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’. – ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. …

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :

ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »

ಬೆಳಗಾವಿ| 18 ವರ್ಷದ ಎಲ್ಲರಿಗೂ ಇಲ್ಲ, 45 ವರ್ಷ ಮೇಲಿನವರಿಗಷ್ಟೆ ಕೋವಿಡ್‌ ಲಸಿಕೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದಂತೆ ಉಚಿತ ಲಸಿಕಾ ಕಾರ್ಯಕ್ರಮದ ಅನ್ವಯ ಜಿಲ್ಲೆಯಾದ್ಯಂತ ಸೋಮವಾರದಿಂದ ಕೋವಿಡ್ ನಿರೋಧಕ ಲಸಿಕೆ ಮೇಳ ಆರಂಭವಾಗಿದೆ. ಆದರೆ, 45 ವರ್ಷ ಮೇಲಿನವರಿಗಷ್ಟೆ ಕೊಡಲಾಗುತ್ತಿದೆ. 18ರಿಂದ 44 ವರ್ಷದ ಎಲ್ಲರಿಗೂ ಲಸಿಕೆ ದೊರೆಯಲಿಲ್ಲ. ಆದ್ಯತಾ ಗುಂಪಿನಲ್ಲಿರುವ 18ರಿಂದ 44 ವರ್ಷದವರಿಗೆ ಯಥಾಪ್ರಕಾರ ಲಸಿಕಾ ಕಾರ್ಯಕ್ರಮ ನಡೆಯಿತು. ಸರ್ಕಾರದ ಘೋಷಣೆ ಆಧರಿಸಿ ಆಸ್ಪತ್ರೆಗಳಿಗೆ ಬಂದಿದ್ದ 18 ವರ್ಷ ಮೇಲಿನ ಯುವಜನರು ಲಸಿಕೆ ದೊರೆಯದೆ ಬರಿಗೈಲಿ ವಾಪಸಾಗಬೇಕಾಯಿತು. …

Read More »

ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

ಗೋಕಾಕ  ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ.   • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »