Home / ಜಿಲ್ಲೆ / ಬೆಳಗಾವಿ (page 263)

ಬೆಳಗಾವಿ

ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ

ಬೆಳಗಾವಿ-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ ಪಡೆದುಕೊಂಂಡಿದೆ,ಎಂದಿಗೂ ಪಿಪಿಇ ಕಿಟ್ ಧರಿಸದ,ಕೋವೀಡ್ ವಾರ್ಡು ಎಲ್ಲಿದೆ ಅಂತಾ ಕಣ್ಣೆತ್ತಿಯೂ ನೋಡದ ಭೀಮ್ಸ್ ಅಧಿಕಾರಿಗಳು ಇವತ್ತು ಪಿಪಿಇ ಕಿಟ್ ಧರಿಸಿ ಭೀಮ್ಸ್ ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕಿದ್ದಾರೆ. ಭೀಮ್ಸ್ ಪ್ರಭಾರಿ ನಿರ್ದೇಶಕ,ಉಮೇಶ ಕುಲಕರ್ಣಿ,ಅಡಳಿತಾಧಿಕಾರಿ ಸಯೀದಾ ಆಫ್ರೀನ್ ಬಳ್ಳಾರಿ,ಡಿಸ್ಟಿಕ್ ಸರ್ಜನ್ ಡಾ. ಸುಧಾಕರ,ಮೆಡಿಕಲ್ ಸುಪ್ರಿಡೆಂಟ್ ದಂಡಗಿ ಸೇರಿದಂತೆ ಬಹುತೇಕ ಭೀಮ್ಸ್ ಆಡಳಿತ ಮಂಡಳಿಯೇ ಇವತ್ತು ಭೀಮ್ಸ್ ಆಸ್ಪತ್ರೆಯಲ್ಲಿ ಹೆಜ್ಜೆ ಇಟ್ಟಿದೆ. ಸರ್ಕಾರ ಭೀಮ್ಸ್ …

Read More »

ಶವ ಪಡೆಯುವ‌ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ

ಬೆಳಗಾವಿ-ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿ ಶವ ಪಡೆಯುವ‌ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಮುಂಭಾಗ ಬಿಮ್ಸ್ ಸಿಬ್ಬಂದ್ಧಿ- ಸಂಬಂಧಿಗಳ ನಡುವೆ ಒಂದು ಘಂಟೆಗೂ ಹೆಚ್ವು ಕಾಲ ಗಲಾಟೆ,ಗದ್ದಲ,ಮುಂದುವರೆದಿತ್ತು.ಕೊರೊನಾದಿಂದ ಸುರೇಶ ಮೇತ್ರಿ(51) ಕೊರೊನಾದಿಂದ ಸಾವನೊಪ್ಪದ್ದು ಮೃತದೇಹ ಹಸ್ತಾಂತರ ಮಾಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿ ‌ನಿವಾಸಿ …

Read More »

ಬೆಳಗಾವಿ | ವರ್ತುಲ ರಸ್ತೆ: ರಾಜ್ಯ ಸರ್ಕಾರದಿಂದ ₹ 140 ಕೋಟಿ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 4ಎನಲ್ಲಿನ ಝಾಡಶಹಾಪುರ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಬೆನ್ನಾಳಿ ಗ್ರಾಮದವರೆಗೆ ನಿರ್ಮಿಸಲಿರುವ ನಾಲ್ಕು ಪಥಗಳ ರಿಂಗ್‌ (ವರ್ತುಲ) ರಸ್ತೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ರಾಜ್ಯದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧ್ಯಕ್ಷ ಡಾ.ಸುಖ್‌ಬಿರ್ ಸಿಂಗ್ ಸಂಧು ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ಸಮಗ್ರ ಯೋಜನಾ ವರದಿ ಅಂತಿಮ …

Read More »

ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ

  ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.     ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

ಪೈಲಟ್ ತರಬೇತಿ ಕೇಂದ್ರ: 2 ಸಂಸ್ಥೆಗಳಿಗೆ ಒಪ್ಪಿಗೆ -ಮಂಗಲಾ ಅಂಗಡಿ

ಬೆಳಗಾವಿ: ‘ವಿಮಾನ ಹಾರಾಟ ಕ್ಷೇತ್ರದಲ್ಲಿ ಅಗತ್ಯ ತರಬೇತಿ ನೀಡುವ ಸಂಸ್ಥೆ ಅಥವಾ ಕೇಂದ್ರವನ್ನು (‍ಪೈಲಟ್ ತರಬೇತಿ ಕೇಂದ್ರ) ನಗರದ ಸಮೀಪದಲ್ಲಿ ಪ್ರಾರಂಭಿಸಲು 2 ಖಾಸಗಿ ತರಬೇತಿ ಸಂಸ್ಥೆಗಳಿಗೆ ಕೇಂದ್ರ ವಿಮಾನಯಾನ ಸಚಿವಾಲಯವು ಇತ್ತೀಚೆಗೆ ಒಪ್ಪಿಗೆ ಸೂಚಿಸಿದೆ’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆಯ್ಕೆಯಾದ ಈ ಎರಡು ಸಂಸ್ಥೆಗಳಿಗೆ ತಲಾ 5ಸಾವಿರ ಚ.ಮೀ. ಅಳತೆಯಂತೆ ಒಟ್ಟು 10ಸಾವಿರ ಚ.ಮೀ. …

Read More »

ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?

ಬೆಳಗಾವಿ: ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಯಸ್ಸಿನ ಅಂತರ ಎರಡು ವರ್ಷವಷ್ಟೇ. ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಲಾಗುವುದು ಎಂದು ಈಗಾಗಲೇ ಸರ್ಕಾರ ತಿಳಿಸಿದೆ. ಅಂದ ಮೇಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರವು ಸಿಬಿಎಸ್ಇ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಪಡಿಸಿದೆ. ಕೇಂದ್ರದಿಂದ ಒಂದು ನಿರ್ಧಾರ ರಾಜ್ಯದಿಂದ ಒಂದು ನಿರ್ಧಾರ ಸರಿಯಲ್ಲ. …

Read More »

ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ: ಸತೀಶ ಜಾರಕಿಹೊಳಿ

ಬೆಳಗಾವಿ: ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಸುಮ್ಮನೆ ಪ್ಯಾಕೇಜ್ ಘೋಷಣೆ ಮಾಡುವುದರಿಂದ ಪ್ರಯೋಜನವಿಲ್ಲ. ಅರ್ಹರಿಗೆ ಆ ಹಣ ತಲುಪಬೇಕು. ಕಳೆದ ಬಾರಿ ಘೋಷಣೆ ಮಾಡಿದ ಹಣ ಇನ್ನುವರೆಗೂ ಕೂಡ ಜನರಿಗೆ ತಲುಪಿಲ್ಲ. ಹೀಗಾಗಿ, ನಮಗೆ ಆತಂಕವಿದೆ. …

Read More »

ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ

ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ …

Read More »

ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು,ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ …

Read More »