Home / ಜಿಲ್ಲೆ / ಬೆಳಗಾವಿ (page 264)

ಬೆಳಗಾವಿ

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಮಾಜಿ ಶಾಸಕ ಎನ್.ಎಸ್.ಖೇಡ ನಿಧನ

ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …

Read More »

ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಬೆಳಗಾವಿ: ಮದುವೆ ಬಳಿಕವೂ ಪ್ರೀತಿ​ ಮುಂದುವರಿಸಿದ್ದ ಜೋಡಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಒಂದೇ ಮರಕ್ಕೆ ಅಕ್ಕಪಕ್ಕ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಪಂಚಪ್ಪ ಕಣವಿ (25 ವ) ಹಾಗೂ ಸಕ್ಕೂಬಾಯಿ ಕರಿಗಾರ (23 ವ) ಮೃತ ಪ್ರೇಮಿಗಳು. ಪಂಚಪ್ಪ ಹಾಗೂ ಸಕ್ಕೂಬಾಯಿ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಉಭಯ ಕುಟುಂಬಸ್ಥರು ಅವಕಾಶ ನೀಡದ್ದಕ್ಕೆ ನಾಲ್ಕು ವರ್ಷಗಳ ಹಿಂದೆ ಪಂಚಪ್ಪ …

Read More »

ಮಹಾರಾಷ್ಟ್ರದಿಂದ ಕಳ್ಳ ಮಾರ್ಗವಾಗಿ ಬೆಳಗಾವಿ ಜಿಲ್ಲೆಗೆ ಸಂಚಾರ ಮಾಡುತ್ತಿದ್ದ ರಸ್ತೆಯನ್ನ ಬಂದ್ ಮಾಡಿಸಿದ ಜಿಲ್ಲಾಡಳಿತ

ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರದಿಂದ ಕಳ್ಳ ಮಾರ್ಗವಾಗಿ ಬೆಳಗಾವಿ ಜಿಲ್ಲೆಗೆ ಸಂಚಾರ ಮಾಡುತ್ತಿದ್ದ ರಸ್ತೆಯನ್ನ ಬಂದ್ ಮಾಡಿಸಿದೆ. ಮಹಾರಾಷ್ಟ್ರದ ನಾಗನೂರು ಹಾಗೂ ಕರ್ನಾಟಕ ರಾಜ್ಯದ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಕಳ್ಳ ಮಾರ್ಗವನ್ನ ಪೊಲೀಸರು ಗುಂಡಿ ತೋಡುವುದರ ಮೂಲಕ ಬಂದ್ ಮಾಡಿಸಿದ್ದಾರೆ. ಆರ್‌ಟಿಪಿಸಿಆರ್‌ ವರದಿ ನೆಗೆಟಿವ್ ಇದ್ದರೆ ಮಾತ್ರ ರಾಜ್ಯ ಪ್ರವೇಶ ಹಿನ್ನೆಲೆಯಲ್ಲಿ ಕಳ್ಳ ಮಾರ್ಗದ ಮೂಲಕ ಜನ ಸಂಚಾರ ಮಾಡುತ್ತಿದ್ದರು. ಕೊರೊನಾ ವರದಿ ಇಲ್ಲದೇ ಜನ ಸಂಚಾರ …

Read More »

“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆ

ಬೆಳಗಾವಿ: ಕರ್ನಾಟಕದ ಚರಿತ್ರೆಯಲ್ಲೇ ಮೊದಲ ಬಾರಿ ಜೂನ್ 10ರಂದು ಗುರುವಾರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಸರಿಯಾಗಿ ಒಂದೇ ದಿನ, ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಕ್ಷಣ ವೇದಿಕೆ ತಿಳಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ …

Read More »

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಎರಡು ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ದೇವರಾಜ್ ಅರಸ್ ಕಾಲನಿಯ 14 ಜನರು ಹಾಗೂ ಬಾಮನವಾಡಿ ವೃದ್ಧಾಶ್ರಮದ 9 ಜನರಿಗೆ ಕೊರೊನಾ ಸೋಂಕು ಹರಡಿದೆ. ಮೂವರು ಸೋಮ್ಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ವೃದ್ಧಾಶ್ರಮದಲ್ಲೇ ಪ್ರತ್ಯೇಕ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಪೈಕಿ ಬಹುತೇಕರಿಗೆ ಕೋವಿಡ್ ಲಕ್ಷಣಗಳೇ ಇಲ್ಲ ಆದರೂ ಕೋವಿಡ್ …

Read More »

ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕು: ವಿಷ್ಣು ಲಾತೂರ

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ತೀವೃ ಸಂಕಷ್ಟದಲ್ಲಿರುವ ಹಿಂದುಳಿದ ವರ್ಗಗಳ ಸಂಘಟಿತ ಹಾಗೂ ಅಸಂಘಟಿತ ಸಂಪ್ರದಾಯಿಕ ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದುಡಿಯುವ ವರ್ಗಕ್ಕೆ ಮೂಗಿಗೆ ತುಪ್ಪ …

Read More »