Breaking News

ಬೆಳಗಾವಿ

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳ ನಿಗದಿ

ಬೆಳಗಾವಿ: ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳನ್ನು ನಿಗದಿ ಮಾಡಲಾಗಿದೆ.   ಗುರುತಿಸಿದ ಮತಗಟ್ಟೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಎಲ್ಲ ತಹಶೀಲ್ದಾರರ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆಯ ಕಚೇರಿಗಳ ಸೂಚನೆ ಫಲಕದಲ್ಲಿಯೂ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Read More »

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.

Read More »

ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ’: H.D.K.

ಬೆಳಗಾವಿ: ‘ಉಂಡ ಮನೆಗೆ ಹೇಗೆ ದ್ರೋಹ ಬಗೆಯಬೇಕು ಎಂಬುದನ್ನು ಅವರನ್ನು ನೋಡಿ ಕಲಿಯಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.   ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೊಬ್ಬನಿಗೇ ಅಲ್ಲ. ಬಹಳ ಜನರಿಗೆ ಅನುಭವವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಂಥ ಮಹಾನ್ ನಾಯಕರನ್ನು ಬದಿಗಿಟ್ಟು ಕಾಂಗ್ರೆಸ್‌ ಸಿದ್ದರಾಮಯ್ಯ ಅವರಿಗೆ ನಾಯಕತ್ವ ನೀಡಿತು. ಐದು ವರ್ಷ ಮುಖ್ಯಮಂತ್ರಿಯಾಗಿ …

Read More »

ವಿಷಕಾರಿ ಹಾವು ಕಚ್ಚಿ ನಾಲ್ಕು ವರ್ಷದ ಮಗು ಸಾವು

ಚಿಕ್ಕೋಡಿ(ಬೆಳಗಾವಿ): ವಿಷಕಾರಿ ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.   ಇಶಾಂತ್ ರಾಘವೇಂದ್ರ ಕಾಂಬಳೆ (04) ಮೃತ ಮಗು. ಯರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಗು ಮನೆಯಲ್ಲಿ ಮಲಗಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿದೆ. ಹಾವು ಕಚ್ಚಿದ ಪರಿಣಾಮ ಮಗು ಅಳಲು ಆರಂಭಿಸಿದಾಗ ಮಗುವನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ …

Read More »

ಪತ್ನಿಯ ಸೀಮಂತಕ್ಕೆಂದು ರಜೆ ಮೇಲೆ ಊರಿಗೆ ತೆರಳುತ್ತಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

ಬೆಳಗಾವಿ: ಪತ್ನಿಯ ಸೀಮಂತಕ್ಕೆಂದು ರಜೆ ಮೇಲೆ ಊರಿಗೆ ತೆರಳುತ್ತಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಯೋಧ ಪ್ರಕಾಶ ಸಂಗೊಳ್ಳಿ (29) ಮೃತರು. ಬೆಳಗಾವಿಯ ಎಂಎಲ್‌ಐಆರ್​ಸಿಯಲ್ಲಿ ಪ್ರಕಾಶ ಅವರು ಕೆಲಸ ಮಾಡುತ್ತಿದ್ದರು. ಜೂ.5ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗಾಗಿ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು …

Read More »

ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನೆನ್ನೆ ರಾತ್ರಿ ಒಂದು ಮಹಿಳೆಯ ಸಮೇತ ನಾಲ್ಕು ಜನರು ಮಹಾರಾಷ್ಟ್ರ ಮೂಲದ ನೀಲಿ ಕಲರ ಇಂಡಿಕಾ ವಾಹನದ ಸಂಖ್ಯೆ MH 06 AF 4072 ಸಂಖ್ಯೆಯ ವಾಹನದಲ್ಲಿ ಬಂದು ಬಂಬಲವಾಡ ಗ್ರಾಮದಲ್ಲಿ ಕಳ್ಳತನ ನಡೆಸಿದ್ದರು. ಬಂಬಲವಾಡ ಗ್ರಾಮದ ಹನುಮಾನ ಮಂದಿರ ಸೇರಿದಂತೆ ರಾಜು …

Read More »

ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ರೈತ ಆತ್ಮಹತ್ಯೆ

ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನ್ನ ಅಣ್ಣಂದಿರಿಗೆ ಇನ್ನೂ ಮದುವೆ …

Read More »

ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲ ಹಾಗೂ 2 ಟ್ರಕ್ ಗಳ ವಶ

ಬೆಳಗಾವಿ – ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲಗಳನ್ನು ಹಾಗೂ 2 ಟ್ರಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 23-05-2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ ಠಾಣಿಯ ವ್ಯಾಪ್ತಿಯ ದೇಸೂರ ರೈಲ್ವೆ ಸ್ಟೇಷನ್‌ ಹತ್ತಿರ ಗೂಡ್ಡ ಶೇಡ್ ಗೊಡಾವನದಲ್ಲಿಟ್ಟ 900 ಆರ್‌ಸಿಎಫ್ ಕಂಪನಿಯ ಡಿಎಪಿ ರಸಗೊಬ್ಬರದ ಚೀಲಗಳು ಕಳುವಾದ ಬಗ್ಗೆ ಶಿವಾಜಿ ಬಾಳಾರಾಮ ಆನಂದಾಚೆ ಸಾ: ಹೊನಗಾ ಇವರು …

Read More »

ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆ

ಇಂದು ಬೆಳಗಾವಿ ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರಜಿ , ಶ್ರೀ ಅಶ್ವಥ್ ಕುಮಾರ, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಶಾಸಕರಾದ ಶ್ರೀ ಅಭಯ ಪಾಟೀಲ,‌ ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಕೇಶವ ಪ್ರಸಾದ್ ಹಾಗೂ ಎಲ್ಲ ಜಿಲ್ಲೆಯ …

Read More »

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ.: ಸತೀಶ್ ಜಾರಕಿಹೊಳಿ ಆಪ್ತ ಪಂಚನ ಗೌಡ ದ್ಯಾಮಣ್ಣವರ

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ. ನನ್ನ ಕ್ಷೇತ್ರದಲ್ಲಿ ಬಡ ಕುಟುಂಬದ ತಂದೆ ತಾಯಂದಿರಿಗೆ ಅವರ ಹೆಣ್ಣು ಮಕ್ಕಳ ಮದುವೆ ಹೊರೆ ತಪ್ಪಿಸಲು ನಾವು ಮಾಡುತ್ತಿರುವ ಸಹಾಯ ಕಾರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಅದರಂತೆಯೇ ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ರೇಬಣ್ಣವರ ಕುಟುಂಬದ ಸುಪುತ್ರಿಯ ಮದುವೆಗೆ ಅನುಕೂಲವಾಗುವಂತೆ ಟ್ರೆಜರಿ, ಖಾಟ್, ಅಡುಗೆ ಪಾತ್ರೆಗಳು ಹಾಗೂ ಇನ್ನಿತರ ಅವಶ್ಯಕ ವಸ್ತುಗಳನ್ನು ನೀಡಿದೆ. ಈ ಸಂದರ್ಭದಲ್ಲಿ ರೇಬಣ್ಣವರ …

Read More »