Breaking News
Home / ಜಿಲ್ಲೆ / ಬೆಳಗಾವಿ (page 272)

ಬೆಳಗಾವಿ

ಬೆಳಗಾವಿಯಲ್ಲಿ  ಶಿವಸೇನೆ – ಎಂಇಎಸ್ ಇದೀಗ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭ

ಬೆಳಗಾವಿ – ಬೆಳಗಾವಿಯಲ್ಲಿ  ಶಿವಸೇನೆ – ಎಂಇಎಸ್ ಇದೀಗ ಮರಾಠಾ ಭಾಷಿಕ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭಿಸಿದೆ. ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಏಕನಾಥ ಶಿಂಧೆ ಬೆಳಗಾವಿ ಮರಾಠಿಗರಿಗಾಗಿ 2 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಸಿದ್ದು, ಇನ್ನೂ 8 ಪೂರೈಸುವುದಾಗಿ ತಿಳಿಸಿದ್ದಾರೆ ಎಂದು ಎಂಇಎಸ್ ಮುಖಂಡ ಶುಭಂ ಶೇಳಕೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಇಲ್ಲಿಯ ಎನ್ ಜಿ ಓ ಗಳಿಗೆ  ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಸಮಸ್ಯೆಯಾಗಿದೆ. ಹಾಗಾಗಿ ಮಹಾರಾಷ್ಟ್ರದ …

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ಬೆಳಗಾವಿ: ಅಗತ್ಯ ವಸ್ತುಗಳಿಗೆ ಪರದಾಟ

ಬೆಳಗಾವಿ: ‘ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಜಾರಿಗೊಳಿಸಿರುವ ಲಾಕ್‌ಡೌನ್‌ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10ರವರೆಗೆ ಅವಕಾಶವಿದೆ. ಆದರೆ, ವಾಹನಗಳಲ್ಲಿ ಬರುವಂತಿಲ್ಲ; ನಡೆದುಕೊಂಡೇ ತೆರಳಬೇಕು’ ಎಂಬ ಸರ್ಕಾರದ ಆದೇಶವು ಗ್ರಾಮೀಣ ಜನರಿಗೆ ತೊಡಕಾಗಿ ಪರಿಣಮಿಸಿದೆ. ಬಹುತೇಕ ಹಳ್ಳಿಗಳಲ್ಲಿ ದಿನಸಿ, ತರಕಾರಿ ಮೊದಲಾದವುಗಳು ಸಿಗುವ ಅಂಗಡಿಗಳಿರುವುದಿಲ್ಲ. ಪಕ್ಕದಲ್ಲಿರುವ ದೊಡ್ಡ ದೊಡ್ಡ ಗ್ರಾಮಗಳು, ಪಟ್ಟಣ, ಹೋಬಳಿ, ತಾಲ್ಲೂಕು ಅಥವಾ ಜಿಲ್ಲಾ ಕೇಂದ್ರದಲ್ಲಿನ ಅಂಗಡಿಗಳನ್ನು ಅಥವಾ ಮಾರುಕಟ್ಟೆಯನ್ನು ಅವಲಂಬಿಸಿರುತ್ತಾರೆ. ಹೀಗೆ ಹೋಗಿ ಬರುವುದಕ್ಕೆ …

Read More »

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …

Read More »

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್

  ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …

Read More »

ಬೆಳಗಾವಿ: ಜನರಿಗೆ ಸ್ಪಂದಿಸಲು ಸಂಸದೆ ಮಂಗಲಾ ಅಂಗಡಿ ತಾಕೀತು

ಬೆಳಗಾವಿ: ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ‘ಜಿಲ್ಲಾ ಕೋವಿಡ್ 19 ವಾರ್ ರೂಂ’ಗೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಿದರು. ‘ಇಲ್ಲಿ ನೀಡಲಾಗಿರುವ ಹಲವು ಸಹಾಯವಾಣಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಜಿಲ್ಲೆಯ ಜನರು ಮಾಹಿತಿ ಹಾಗೂ ಸಹಾಯಕ್ಕಾಗಿ ಪರದಾಡುವಂತಾಗಿದೆ. ಇದು ಸರಿಯಲ್ಲ. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು’ ಎಂದು ಸೂಚಿಸಿದರು. ‘ಕೋವಿಡ್ ಸಹಾಯವಾಣಿ ಸಂಖ್ಯೆಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ತಕ್ಷಣ ಹಾಗೂ …

Read More »

ಖಾನಾಪುರ ಪಟ್ಟಣದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್: ಕಿರಾಣಿ, ದಿನಸಿ ಸೇರಿದಂತೆ ಎಲ್ಲ ವ್ಯಾಪಾರ-ವ್ಯವಹಾರಗಳಿಗೂ ನಿರ್ಬಂಧ

ಖಾನಾಪುರ:  ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ ಖಡಕ್ ಲಾಕ್ ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸ್ಥಳೀಯ ಆಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಉಪವಿಭಾಗಾಧಿಕಾರಿ ಅಶೋಕ ತೇಲಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪಟ್ಟಣದ ವಿವಿಧ ಜಾತಿ, …

Read More »

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

ಬೆಳಗಾವಿ/ಗೋಕಾಕ: ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರ ಕೋವಿಡ್ ನಿಯಂತ್ರಣದಲ್ಲಿ ಸಭೆ ನಡೆಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು. ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಅವರು ಸೋಮವಾರದಿಂದ ಗೋಕಾಕ ನಗರ ಮತ್ತು ತಾಲೂಕು ಪ್ರದೇಶದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು. ಗೋಕಾಕ್ ತಾಲೂಕಿನಾದ್ಯಂತ ಲಾಕ್ ಡೌನ್ …

Read More »

ಕೋವಿಡ್ ಲಸಿಕಾ ಅಭಿಯಾನ: ಸದ್ಯಕ್ಕೆ ಎರಡನೇ ಡೋಜ್ ಲಸಿಕೆ ಮಾತ್ರ ನೀಡಿಕೆ

ಬೆಳಗಾವಿ :  ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ  ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ  6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ.  ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು  ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು. ಸದ್ಯಕ್ಕೆ  ಜಿಲ್ಲೆಯಲ್ಲಿ …

Read More »

ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …

Read More »