Breaking News
Home / ಜಿಲ್ಲೆ / ಬೆಳಗಾವಿ (page 274)

ಬೆಳಗಾವಿ

ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ

ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಸೋತಿದೆ, ಕಾಂಗ್ರೆಸ್ ಸೋತು ಗೆದ್ದಿದೆ.

ಬೆಳಗಾವಿ – ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಸೋತಿದೆ, ಕಾಂಗ್ರೆಸ್ ಸೋತು ಗೆದ್ದಿದೆ. ಫಲಿತಾಂಶ ಬಿಜೆಪಿ ಆತ್ಮಾವಲೋಕನ ಮಾಡುವಂತೆ ಮಾಡಿದೆ. ಜನರು ಬಿಜೆಪಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಕೇವಲ ಅನುಕಂಪದ ಮತಗಳಿಂದ ಮಂಗಲಾ ಅಂಗಡಿ ಗೆದ್ದಿದ್ದಾರೆ.  ಇದೇ ವೇಳೆ ಕಾಂಗ್ರೆಸ್ ಮತ್ತೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿದೆ. ಗೋಕಾಕ ಮತ್ತು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿದರೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿ ಶಾಸಕರೇ ಇರುವ …

Read More »

ಬೆಳಗಾವಿಯಲ್ಲಿ ಬದಲಾದ ಚಿತ್ರಣ ; ಮಂಗಳಾ ಅಂಗಡಿಗೆ ಹಿನ್ನಡೆ, ಜಾರಕಿಹೊಳಿಗೆ ಮುನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. ಎರಡರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು ಬೆಳಗಾವಿ ದಕ್ಷಿಣ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುಂದಿದ್ದಾರೆ. ಉಳಿದಂತೆ ಅರಭಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ- ಯಲ್ಲಮ್ಮ ಹಾಗೂ ರಾಮದುರ್ಗದಲ್ಲಿ ಕಾಂಗ್ರೆಸ್ ಮುನ್ನಡೆ …

Read More »

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..

ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ …

Read More »

32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.

Read More »

ಬೆಳಗಾವಿ ಲೋಕಸಭೆ ಫಲಿತಾಂಶ,ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿ 12441 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 142686, ಕಾಂಗ್ರೆಸ್ 130245 ಮತ ಪಡೆದಿದೆ.  

Read More »

ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್

ಬೆಳಗಾವಿ – ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು. ಒಟ್ಟೂ 70 ಪತ್ರಕರ್ತರು ಟೆಸ್ಟ್ ಗೆ ಒಳಗಾಗಿದ್ದರು. ಅವರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಅವರ ಪೈಕಿ 11 ಜನರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ. ಈ ಎಲ್ಲ …

Read More »

ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.

ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »