Breaking News
Home / ಜಿಲ್ಲೆ / ಬೆಳಗಾವಿ (page 275)

ಬೆಳಗಾವಿ

ಮುಂದಿನ 24 ಘಂಟೆಯಲ್ಲಿ ಜಿಲ್ಲೆಯ ಸಂಪೂರ್ಣ ಕೋವಿಡ್ ವಿವರ ಮೊಬೈಲ್ ನಲ್ಲಿ – ಡಿಸಿ

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕೊರೋನಾ ಸಂಬಂಧಿತ ಸಮಗ್ರ ಮಾಹಿತಿ ಈಗ ಒಂದೇ ಕಡೆ ಲಭ್ಯ. ಈವರೆಗೆ ಬೆಡ್ ಮಾಹಿತಿ ಸೇರಿದಂತೆ ಎಲ್ಲದಕ್ಕೂ ತಡಕಾಡಬೇಕಿತ್ತು. ಆದರೆ ಈಗ ನಿಮ್ಮ ಬೆರಳ ತುದಿಯಲ್ಲಿ ಎಲ್ಲ ಮಾಹಿತಿಗಳೂ ಲಭ್ಯವಾಗುವಂತೆ ಮಾಡಿದ್ದಾರೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್. ಹರೀಶ್ ಕುಮಾರ ನಿನ್ನೆಯಷ್ಟೆ ಮಾಹಿತಿ ನೀಡಿದ್ದರು, 24 ಗಂಟೆಯಲ್ಲಿ ಎಲ್ಲ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಟೆಸ್ಟಿಂಗ್ ಇನ್ಫಾರ್ಮೇಶನ್, ಆಸ್ಪತ್ರೆ ಮತ್ತು ಬೆಡ್ …

Read More »

ನಾಳೆ ಬೆಳಗಾವಿ ಲೋಕಸಭಾ ಉಪಚುನಾವಣೆ ಫಲಿತಾಂಶ : ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ‘ಕೊರೋನಾ ನೆಗೆಟಿವ್’ ವರದಿ ಕಡ್ಡಾಯ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮೇ. 2 ಕ್ಕೆ ಬೆಳಗಾ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಮೇ. 2 ರಂದು ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೊರೊನಾ ಮಾರ್ಗಸೂಚಿಯ ಪ್ರಕಾರ …

Read More »

ಓಡಾಟ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿಚಾರ್ಜ್ ವಾಹನಗಳ ಸೀಜ್

ಬೆಳಗಾವಿ; ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮಾತ್ರ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಬಿಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಆಯಾ ಜಿಲ್ಲಾಡಳಿತದ ಜವಾಬ್ದಾರಿ ಎಂದು ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದಾಗ್ಯೂ ಕೂಡ ಜಿಲ್ಲಾಡಳಿತವಾಗಲಿ, ಪೊಲೀಸರಾಗಲಿ ಎಚ್ಚೆತ್ತುಕೊಂಡಂತಿಲ್ಲ. …

Read More »

ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ

ಬೆಳಗಾವಿ-ಮಹಾಮಾರಿ ಕೊರೊನಾ ಅಟ್ಟಹಾಸ ಬೆಳಗಾವಿಯಲ್ಲಿ ಮುಂದುರೆದಿದ್ದು ಕೋವೀಡ್ ಮರಣ ಮೃದಂಗ ಮುಂದುರೆದಿದೆ,ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಈವರೆಗೂ 11 ಜನರು ಮೃತಪಟ್ಟಿದ್ದು, ಈ ಹನ್ನೊಂದು ಶವಗಳನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ.ಸದಾಶಿವನಗರ ಸ್ಮಶಾನದಲ್ಲಿ ಇಂದು ಒಂದೇ ದಿನ 11 ಜನರ ಅಂತ್ಯಕ್ರಿಯೆ ನಡೆದಿದೆ. ಸದಾಶಿವ ನಗರ ಸ್ಮಶಾನದ ಬಳಿ ನಿಯೋಜಿತ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಬೆಚ್ಚಿ ಬೀಳಿಸುವ ಮಾಹಿತಿ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »

ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ 

ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ  ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ.  ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …

Read More »

ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ

ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಒಡೆತನ‌ದ‌ ಜ್ಯೋತಿ ಬಜಾರ್ ಅನ್ನು ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬೀದ್ರಿ (KAS) ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ. ಬೆಳಗಾವಿ‌‌ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಜ್ಯೋತಿ ಬಜಾರ್ ಕೊರೊನಾ ನಿಯಮ ಗಾಳಿಗೆ ತೊರಿ ವ್ಯಾಪಾರ ನಡೆಸುತ್ತಿರುವ ಆರೋಪದ ಅಡಿ ಸೀಲ್ ಮಾಡಿಸಿದ ಅಧಿಕಾರಿ ಯಾಕೆ ಅಂಗಡಿ ತಗೆದಿದ್ದೀರಿ ಎಂದು ಜ್ಯೋತಿ ಬಜಾರ್ ಸಿಬ್ಬಂಧಿಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಕೊರೋನಾ ಸೋಂಕು

ಬೆಳಗಾವಿ – ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. 2,192 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 11,833 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 22,596 ಜನರಿಗೆ ಕೊರೋನಾ ದೃಢಪಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ. ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ …

Read More »

ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಹಂಚಿಕೆಗೆ ಸಮಿತಿ: ಡಿ.ಸಿಡಾ.ಕೆ. ಹರೀಶ್ ಕುಮಾರ್

ಬೆಳಗಾವಿ: ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಸಮರ್ಪಕ ಹಂಚಿಕೆ, ಲಭ್ಯವಿರುವ ಹಾಸಿಗೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಲಸಿಕಾಕರಣ ಚುರುಕುಗೊಳಿಸಲು ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಪ್ರಕಾರ ಅಕ್ಟೋಬರ್ ವೇಳೆಗೆ ಸಂಪೂರ್ಣ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದರು. ‘ಬಿಮ್ಸ್ ಆಸ್ಪತ್ರೆಯಲ್ಲಿ ಊಟ, …

Read More »

ಕ್ಲಾಸ್ ಬಳಿಕ ಕ್ಷಮೆಯಾಚಿಸಿದ ಉಡಾಫೆ ಮಂತ್ರಿ ಉಮೇಶ್ ಕತ್ತಿ

ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …

Read More »