Breaking News

ಬೆಳಗಾವಿ

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಕ್ಷೇತ್ರದ ಅಭಿವೃದ್ಧಿಗೆ ಸದಾ ನಿಮ್ಮ ಜೊತೆ ನಿಮ್ಮ ಒಂದು ವೋಟು ನನಗೆ ಒಂದು ಲಕ್ಷ ವೋಟ್ ಇದ್ದಹಾಗೆ.: ಲಖನ ಜಾರಕಿಹೊಳಿ

ಬೆಳಗಾವಿ: ಪಕ್ಷೇತರ ಅಭ್ಯರ್ಥಿ ಪ್ರಚಾರ ಇಂದು ಕೂಡ ಜೋರಾಗಿತ್ತು ಹಿಂದಿ ಭಾಷೆಯಲ್ಲಿ ತಮ್ಮ ಮತ ಯಾಚನೆ ಪ್ರಾರಂಭ ಮಾಡಿದ ಛೋಟಾ ಸಾಹುಕಾರ ಮರಾಠಿಗರ ಮನಸ್ಸು ಗೆಲ್ಲುವಲ್ಲಿ ಸಫಲ ರಾಗಿದ್ದಾರೆ ಎಂಬ ಮಾತುಗಳು ಸದ್ಯ ಅಲ್ಲಿನ ಗ್ರಾಮದ ವಲಯ ಗಳಲ್ಲಿ ಕೇಳಿ ಬರುತ್ತಿವೆ . ಕನ್ನಡ ಹಾಗೂ ಹಿಂದಿ ಎರಡು ಭಾಷೆ ಗಳಲ್ಲಿ ಮತ ಯಾಚನೆ ಮಾಡಿ ಜನರ ಗಮನ ಸೆಳೆದಿದ್ದಾರೆ . ನಾನು ನಿಮ್ಮ ಸೇವಕ ಈ ಸೇವಕನಿಗೆ ನಿಮ್ಮ …

Read More »

ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ

ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …

Read More »

ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್

ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …

Read More »

ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ಖಚಿತ; ಸತೀಶ್ ಜಾರಕಿಹೊಳಿ

ಬೆಳಗಾವಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗಿರೋದು ಒಂದು ಅಭ್ಯರ್ಥಿ ಗೆಲ್ಲಿಸುವ ಸಾಮರ್ಥ್ಯ. ಕಾಂಗ್ರೆಸ್ ಗೆ ಕೂಡ ಒಂದು ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದೆ. ಹಾಗಾಗಿ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗಿರುವ ಮತ ಸಾಮರ್ಥ್ಯದಿಂದ ಒಬ್ಬರು ಮಾತ್ರ ಗೆಲ್ಲಲು ಸಾಧ್ಯವಿದೆ. ಇಬ್ಬರನ್ನು ಗೆಲ್ಲಿಸುವ ಶಕ್ತಿ ಅವರಿಗಿಲ್ಲ. ಯಾರನ್ನು ಗೆಲ್ಲಿಸುತ್ತಾರೆ ನೋಡೋಣ ಎಂದರು. ಡಿಕೆ.ಶಿವಕುಮಾರ …

Read More »

ಭಾರೀ ಮಳೆಗೆ ಬೆಳಗಾವಿಯಲ್ಲಿ ನೆಲಕ್ಕುರುಳಿದ ಭಾರೀ ಮರ, ಕೆಲಕಾಲ ಟ್ರ್ಯಾಫಿಕ್ ಜ್ಯಾಮ್

ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಿಲಿಟರಿ ಮಹಾದೇವ ಮಂದಿರದ ಹಿಂದಿನ ಕ್ಯಾಂಪ್‍ನ ಸ್ಯಾಪಲ್ ರಸ್ತೆಯಲ್ಲಿ ಗುಲ್‍ಮೋಹರ್ ರಸ್ತೆಯಲ್ಲಿ ಇಂದು 1.20ರ ಸುಮಾರಿಗೆ ನೆಲಕ್ಕುರುಳಿದೆ. ಇದರ ಪರಿಣಾಮ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜ್ಯಾಮ್ ಉಂಟಾಗಿತ್ತು.ಇನ್ನು ಮರವು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಇನ್ನು ಕಾರೊಂದು ಇದೇ ಮಾರ್ಗವಾಗಿ ಹೋಗುತ್ತಿರುವಾಗ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ಇನ್ನು ಕೂಡಲೇ ಸ್ಥಳಕ್ಕೆ ಆಗಮಿಸಿದ ಟ್ರ್ಯಾಫಿಕ್ ಎಎಸ್‍ಐ ಅಶೋಕ್ ಹಾಗೂ …

Read More »

ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್​​ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್​​ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್​​ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …

Read More »

ಸುವರ್ಣ ವಿಧಾನಸೌಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರ ಪಿ.ಹೇಮಲತಾ

ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್ಸ್ …

Read More »

ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ. ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »