Breaking News

ಬೆಳಗಾವಿ

ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಬೆಳಗಾವಿಗೆ

ಬೆಳಗಾವಿ: ಬೆಳಗಾವಿ ತಂಡವು ಜಿಲ್ಲಾ ಅಂಗವಿಕಲರ ಸೇವಾ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಬಾಗಲಕೋಟೆ ತಂಡ ದ್ವಿತೀಯ ಮತ್ತು ಮೈಸೂರು ತಂಡದವರು ತೃತಿಯ ಸ್ಥಾನ ಪಡೆದರು. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಹಾಗೂ ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ ವಿಜೇತ ತಂಡಗಳಿಗೆ …

Read More »

ರೈತರಿಗೆ ಭದ್ರತೆ ನೀಡಲು ಆಗ್ರಹ

ಬೆಳಗಾವಿ: ಉತ್ತರಪ್ರದೇಶದ ಲಿಖಿಂಪುರ್‌ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ …

Read More »

ಡೆತ್​ನೋಟ್ ಬರೆದಿಟ್ಟು ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ

ಬೆಳಗಾವಿ :ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್​​ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ಸಮಾಜ ಸೇವೆಗೆ ಜೀವನ ಮೀಸಲು: ಯುವ ನಾಯಕ ರಾಹುಲ್ ಜಾರಕಿಹೊಳಿ

ಯಮಕನಮರಡಿ:ನನ್ನ ಜೀವನ ಸಮಾಜ ಸೇವೆಗೆ ಮೀಸಲು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ತಮ್ಮ 22ನೇ ಜನ್ಮದಿನ ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದರು. ನಾನು ಇತ್ತೀಚೆಗೆ ಏರೊನಾಟಿಕಲ್ ಎಂಜಿನಿಯರಿಂಗ್ ಪದವಿ ಪೂರೈಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದೇನೆ’ ಎಂದು ಹೇಳಿದರು. ತಂದೆ ಸತೀಶ ಜಾರಕಿಹೊಳಿ ಅವರೊಂದಿಗೆ ಚಿಕ್ಕಂದಿನಿಂದಲೂ ಸರಿಯಾಗಿ …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

  ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …

Read More »

ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ …

Read More »

ಸಂಜಯ್ ಪಾಟೀಲ್, ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು

ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …

Read More »

ವಿದ್ಯುತ್​​​ ಅವಘಡ​​​: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು

ಚಿಕ್ಕೋಡಿ: ವಿದ್ಯುತ್​ ಶಾಕ್​​​ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್​ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.   ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …

Read More »

ಬಿಜೆಪಿಯಿಂದ 40 ಜನ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ..- ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ

ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …

Read More »

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ . ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More »