Breaking News

ಬೆಳಗಾವಿ

ಅಮರನಾಥದಲ್ಲಿ ಹವಾಮಾನ ವೈಪರೀತ್ಯಕ್ಕೆ ಹೈರಾಣಾದ ಬೆಳಗಾವಿಯ ಪ್ರವಾಸಿಗರು

ಬೆಳಗಾವಿ: ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಬೆಳಗಾವಿಯ 32 ಜನರ ತಂಡ ಹವಾಮಾನ ವೈಪರೀತ್ಯದಿಂದಾಗಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶೇಷನಾಗದಿಂದ ಮರಳಿ ಪೆಹಲಗಾಮ್‌ ಎಂಬ ಪ್ರದೇಶಕ್ಕೆ ವಾಪಸ್ಸಾಗಿದ್ದು, ಮೇಘ ಸ್ಪೋಟ ಆಗಿ ಗುಡ್ಡ ಕುಸಿತಗೊಂಡಿರುವ ಮಾರ್ಗ ಬಂದ್‌ ಮಾಡಿದ್ದರಿಂದ ದರ್ಶನಕ್ಕಾಗಿ ಇನ್ನೂ 2-3 ದಿನ ಕಾಯಬೇಕಾಗಿದೆ.   ಶೇಷನಾಗ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈ ಪ್ರದೇಶದಲ್ಲಿ ಆಮ್ಲಜನಕ ಕೊರತೆ ಉಂಟಾಗುತ್ತಿದ್ದು, ಹೀಗಾಗಿ ಆರೋಗ್ಯದಲ್ಲಿ ಏರುಪೇರು …

Read More »

ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ

ಚಿಕ್ಕೋಡಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ. ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆ, ಬ್ರಿಡ್ಜ್ಗಳ ಕಾಮಗಾರಿ ಮುಕ್ತಾಯಗೊಂಡಿವೆ. ಆದರೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ. ಇದರಿಂದ ನದಿ ತೀರದ ಜನ ಸಂಕಷ್ಟ ಪಡುವಂತಾಗಿದೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಅಪಾರ …

Read More »

ಧಾರವಾಡ ಯುವತಿಯ ಹೃದಯ ಬೆಳಗಾವಿ ಯುವಕನಿಗೆ ಕಸಿ

ಬೆಳಗಾವಿ: ಮಿದುಳು ನಿಷ್ಕ್ರಿಯವಾದ ಯುವತಿಯೊಬ್ಬರ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಕ್ಷಿಪ್ರ ಸಿದ್ಧತೆ ನಡೆಸಲಾಗಿದೆ. ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ. ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್‌ಇಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಹೀಗಾಗಿ, ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ. …

Read More »

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ.: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ತುಂಬಾ ಕಡಿಮೆ ಇದೆ. ಎರಡು ದಿನಗಳ ಹಿಂದೆ 30 ಟಿಎಂಸಿ ಅಡಿಯಷ್ಟು ನೀರು ಅಲ್ಲಿ ಸಂಗ್ರಹವಾಗಿದೆ. ಅದರ ಸಂಗ್ರಹಣಾ ಸಾಮರ್ಥ್ಯ ಒಟ್ಟು 105 ಟಿಎಂಸಿ ಅಡಿ. ಅದು ಸಂಪೂರ್ಣ ತುಂಬುವವರೆಗೆ ನೀರನ್ನು ಹೊರ ಬಿಡುವುದಿಲ್ಲ. …

Read More »

ಸುರಿಯುತ್ತಿರುವ ಮಳೆ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ.

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತೆ ಕುಸಿತದಲ್ಲಿ ಸಿಲುಕಿಹಾಕಿಕೊಂಡಿತ್ತು. ಹೌದು ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿವೆ. ಬೆಳಗಾವಿಯ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ. ಭಾರೀ ಲೋಡ್‍ನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ನ ಹಿಂದಿನ ಚಕ್ರಗಳು ರಸ್ತೆ ಕುಸಿದು ಸಿಲುಕಿಹಾಕಿಕೊಂಡಿತ್ತು …

Read More »

12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ …

Read More »

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ …

Read More »

ಬೋಟ್ ಮೂಲಕ ವಾಹದ ಪರಿಸ್ಥಿತಿಯನ್ನು ಅವಲೋಕಿಸಿದ ತಹಶೀಲ್ದಾರ ಸಿ.ಎಸ್.ಕುಲಕರ್ಣಿ

ಕೃಷ್ಣಾ ಹಾಗೂ ಉಪನದಿಗಳಿಗೆ ಪ್ರವಾಹ ಭೀತಿ ಹಿನ್ನಲೆಯಲ್ಲಿ ಬೋಟ್ ಮೂಲಕ ತಹಶೀಲ್ದಾರ ಸಿ.ಎಸ್.ಕುಲಕರ್ಣಿಯವರು ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಹೌದು ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇತ್ತ ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ, ಚಂದೂರ, ಯಡೂರ ಗ್ರಾಮದ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಬೋಟ್ ಮೂಲಕ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ನದಿತೀರದ ಜನರ ಜೊತೆಗೆ ತಹಶೀಲ್ದಾರ ಕುಲಕರ್ಣಿ …

Read More »

P.S.I. ನೇಮಕಾತಿ ಪ್ರಕರಣ ಅಕ್ರಮ: ಪೌಲ್ ಡೈರಿಯಲ್ಲಿ ಪ್ರಭಾವಿಗಳ ಹೆಸರು

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಡಿಜಿಪಿ ಅಮ್ರಿತ್ ಪೌಲ್‌ ಅವರಿಗೆ ಸೇರಿದ್ದು ಎನ್ನಲಾದ ಡೈರಿಯನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್, ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಅಂಶಗಳನ್ನು ಡೈರಿಯಲ್ಲಿ ದಾಖಲಿಸುತ್ತಿದ್ದರೆಂಬ ಮಾಹಿತಿ ಗೊತ್ತಾಗಿದೆ. ಕೆಲವುಅಧಿಕಾರಸ್ಥರು, ರಾಜಕೀಯ ಪಕ್ಷಗಳ ಮುಖಂಡರು, ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಭಾವಿಗಳ ಹೆಸರು ಡೈರಿಯಲ್ಲಿರುವುದಾಗಿ ಸಿಐಡಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ‘ಪೌಲ್ …

Read More »

U.P.S.C.ಯಲ್ಲಿ 319ನೇ ರ‍್ಯಾಂಕ್ ಪಡೆದ ಗಜಾನನ ಬಾಲೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸತ್ಕಾರ

ಯುಪಿಎಸ್‍ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರ ಗಜಾನನ ಶಂಕರ್ ಬಾಲೆ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸತ್ಕರಿಸಿ ಗೌರವಿಸಿದರು. ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 319ನೇ ಯಾರ್ಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. …

Read More »