Breaking News
Home / ಜಿಲ್ಲೆ / ಬೆಳಗಾವಿ (page 331)

ಬೆಳಗಾವಿ

ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ

  ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …

Read More »

ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!

ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …

Read More »

ಶಿಕ್ಷಕರು_ಮತ್ತು_ಇಲಾಖೆಯ_ಸಂಪರ್ಕದ_ಕೊಂಡಿಯಾಗಿ ಶಿಕ್ಷಕರ_ಸಂಘ_ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ_ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »

ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನುಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ

ಬೆಂಗಳೂರು,ಡಿ.14- ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ. ಉಳಿದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಸಿದ್ದವಿದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದ ಕಾರಣ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನೌಕರರು 10 …

Read More »

ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

ಸನ್ಮಾನ್ಯ ಶ್ರೀ.ಸತೀಶ ಎಲ್ ಜಾರಕಿಹೊಳಿ, ಶಾಸಕರು ಯಮಕನಮರಡಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೇಸ ಪಕ್ಷದ ಕಾರ್ಯಾಧ್ಯಕ್ಷರ ನಿರ್ದೇಶನ ಮತ್ತು ಆದೇಶದ ಮೇರೆಗೆ ಶ್ರೀ.ಬಿ. ಕೆ. ಕಂಟಕಾರ ವಕೀಲರು, ಇವರನ್ನು ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲು ಹರ್ಷಿತನಾಗಿದ್ದೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ಶಿಸ್ತಿಗೆ ಒಳಪಟ್ಟು ಕಾರ್ಯನಿರ್ವಹಿಸುವುದು, ತಾವು ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ …

Read More »

ದುರದುಂಡಿ ಗ್ರಾಮದಲ್ಲಿ ಹರಾಜಿನ ಮೂಲಕ ಗ್ರಾಪಂ,ಗೆ ಆಯ್ಕೆ ಸಂಭವ !!

ದುರದುಂಡಿ ಗ್ರಾಮದಲ್ಲಿ ಹರಾಜಿನ ಮೂಲಕ ಗ್ರಾಪಂ,ಗೆ ಆಯ್ಕೆ ಸಂಭವ !! ಗೋಕಾಕ್ ತಾಲೂಕಿನ      ದುರದುಂಡಿ ಗ್ರಾಮದಲ್ಲಿ    ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತದೆ ಎಂದು ಗೊತ್ತಿದ್ದರೂ ಸಹ ಯಾವುದಕ್ಕೂ ಲೆಕ್ಕಿಸದೆ ಹೇಗಾದರೂ ಮಾಡಿ ದುರದುಂಡಿ ಗ್ರಾ‌ಪಂ‌.ಗೆ ತಮ್ಮ ಹಣದ ಬಲದಿಂದ ಆಯ್ಕೆಯಾಗಲಿಕ್ಕೆ ಸಜ್ಜಾಗುತ್ತಿರುವುದು ತಿಳಿದು ಬಂದಿದೆ, ನಿನ್ನೆ ದಿನವು ವಾರ್ಡಿಗೆ ಸಂಬಂದಿಸಿದಂತೆ ಸುಮಾರು 5ರಿಂದ 7 ಲಕ್ಷದವರೆಗೆ ಗ್ರಾಪಂ ಸ್ಥಾನದ ಹರಾಜಿಗೆ ಕೆಲವು ಮುಖಂಡರು ಕೂಡಿದ್ದರು.ಆದರೆ ಇವರಿಂದ ಗ್ರಾಮದಲ್ಲಿ …

Read More »

ಪಂಚ ದಿನಗಳ ಸಾರಿಗೆ ಸಮರ ಸುಗಮ ಅಂತ್ಯ

ಕೊಡಿಹಳ್ಳಿ ಚಂದ್ರಶೇಖರ್ ಮುಷ್ಕರ ಹಿಂಪಡೆದ ಹಿಂಪಡೆಯಲು ನಿರ್ಧಾರ ಮಾಡಿದ್ದಾರೆ ಈ ಸಂಬಂಧ ಅವರು ಹೇಳಿಕೆಯನ್ನು ನೀಡಿದ್ದಾರೆ. ಕಳೆದ 5 ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಜನರ ಆಕ್ರೋಶಕ್ಕೆ ಮಣಿದು ಕೋಡಿಹಳ್ಳಿ ಚಂದ್ರಶೇಖರ್ ಇಂದು ಮುಷ್ಕರವನ್ನು ವಾಪಸ್ ಪಡೆದು ಅಂತ್ಯಗೊಳಿಸಿದ್ದಾರೆ. ಮುಖಂಡರ ಜೊತೆ ಚರ್ಚಿಸಿ ಹಿಂಪಡೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು . ನಿನ್ನೆಯಿಂದ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿಬಂದಿದ್ದವು. ರಾಜಕಾರಣಿಗಳು ಜನಸಾಮಾನ್ಯರೂ ಕೂಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ …

Read More »

ಬೆಳಗಾವಿಯಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ

ಬೆಳಗಾವಿಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಬಸ್ ಸಂಚಾರ ಆರಂಭಗೊಂಡಿದೆ. ಬೆಳಗಾವಿಯಿಂದ ರಾಮದುರ್ಗಕ್ಕೆ ಮೊದಲ ಬಸ್ ತೆರಳಿದೆ. ಸಂಚರಿಸುತ್ತಿರುವ ಬಸ್‌ನಲ್ಲಿ ಇಬ್ಬರು ಪೇದೆಗಳ ನಿಯೋಜನೆ ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿ ಪೊಲೀಸರಿಂದ ಸರ್ಕಾರಿ ಬಸ್‌ಗೆ ಎಸ್ಕಾರ್ಟ್ ಭದ್ರತೆ ಒದಗಿಸಲಾಗಿದೆ. ಬಳಿಕ ಆಯಾ ಠಾಣಾ ವ್ಯಾಪ್ತಿಯ ಪೊಲೀಸರಿಂದ ಬಸ್‌ಗಳಿಗೆ ಭದ್ರತೆ ನೀಡಲಾಗುತ್ತದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆಗಮಿಸಿ, ಕರ್ತವ್ಯಕ್ಕೆ ಹಾಜರಾಗಿ ಬಸ್ ಆರಂಭಿಸುವಂತೆ ಸಾರಿಗೆ ಸಿಬ್ಬಂದಿಗೆ ಮನವಿ ಮಾಡಿದರು. ಪ್ರಯಾಣಿಕರು ತೆರಳುವ ಬಸ್‌ಗಳಿಗೆ …

Read More »

ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಬಳಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ

ಬೆಳಗಾವಿ : ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. 2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ …

Read More »

ಅನೈತಿಕ ಸಂಬಂಧ ; ಬೆಳಗಾವಿಯಲ್ಲಿ ಇಬ್ಬರು ಏಕಕಾಲಕ್ಕೆ ನೇಣಿಗೆ ಶರಣು

ಬೆಳಗಾವಿ‌ : ಅನೈತಿಕ ಸಂಬಂಧ ಹೊಂದಿದ್ದವರಿಗೆ ಮನೆಯವರು ಹೇಳಿದ ಬುದ್ಧಿವಾದದಿಂದ ಬೇಸರಗೊಂಡು ಏಕಕಾಲಕ್ಕೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಶಿವಾಜಿ ಗಾಡಿವಡ್ಡರ್ (31), ಜಯಶ್ರೀ ಗಾಡಿವಡ್ಡರ್ (35) ಆತ್ಮಹತ್ಯೆಗೆ ಶರಣಾದವರು. ಶಿವಾಜಿ ಜೋಗ್ಯಾನಟ್ಟಿ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದು, ಜಯಶ್ರೀ ಎಂಬ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಮನೆಯವರಿಗೆ ಗೊತ್ತಾಗಿದೆ. …

Read More »