ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯದ ಆದೇಶ
ಬೆಳಗಾವಿ: ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಾಂಬ್ರಾ ವಿಮಾನ ನಿಲ್ದಾಣ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಹತ್ತು ರೈತರು ಕೋರ್ಟ್ ಮೆಟ್ಟಿಲೇರಿದ್ದರು. ನಮಗೆ ನೀಡಬೇಕಿದ್ದ 5.5 ಕೋಟಿ ಪರಿಹಾರವನ್ನು ನೀಡದೇ ರೈತರಿಗೆ ವಂಚಿಸಲಾಗಿದೆ ಎಂದು ಆರೋಪಿಸಿದ್ದರು. ರೈತರ ಅರ್ಜಿ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ …
Read More »ಕೋವಿಡ್ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ :H.D.K.
ಕರೋನಾ ವಿಚಾರ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು …
Read More »ರಾಜ್ಯ ಸರ್ಕಾರದಿಂದ ‘ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ’ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರ ನಿನ್ನೆ ಬಿಡುಗಡೆ ಮಾಡಿರುವಂತ ಕೊರೋನಾ ನೈಟ್ ಕಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿದೆ. ಈ ಮೊದಲು ಅಗತ್ಯ ವಸ್ತು ಸೇವೆ ಜೊತೆಗೆ, ಇತರೆ ಶಾಪ್ ಗಳಿಗು ತೆರೆಯಲು ಅನುಮತಿ ನೀಡಿತ್ತು. ಆದ್ರೇ.. ಇಂದು ದಿಢೀರ್ ಶಾಕ್ ನೀಡುವಂತೆ ಪರಿಷ್ಕೃತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯಂತೆ, ಈಗ ಅಗತ್ಯಸೇವೆ ಒದಗಿಸುವಂತ ಶಾಪ್ ಹೊರತಾಗಿ ಎಲ್ಲಾ ಶಾಪ್ ಬಂದ್ ಮಾಡುವಂತೆ ಸೂಚಿಸಿದೆ. ಈ ಕುರಿತಂತೆ …
Read More »ಇನ್ನು ಕೆಲವೇ ಹೊತ್ತಿನಲ್ಲಿಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು – ಲಾಕ್ ಡೌನ್ ಮಾದರಿಯಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯಸರಕಾರದ ನಡೆಯಿಂದ ಉಂಟಾಗಿರುವ ಗೊಂದಲಕ್ಕೆ ಸ್ಪಷ್ಟನೆ ನೀಡಿ ಮತ್ತು ಕೆಲವು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸಲು ಸರಕಾರ ನಿರ್ಧರಿಸಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಲಿದೆ. ನಿನ್ನೆ ಸಂಜೆ ಪ್ರಕಟಿಸಿರುವ ಮಾರ್ಗಸೂಚಿ ಇಂದು ಬೆಳಗ್ಗೆ ಜಾರಿಯಾಗುವ ವೇಳೆಗೆ ಭಾರಿ ಗೊಂದಲಕ್ಕೆ ಕಾರಣವಾಗಿತ್ತು. ಅದು ಸಾರ್ವಜನಿಕರಿಗೆ ಸರಿಯಾಗಿ ತಲುಪಿರಲಿಲ್ಲ. ಏಕಾ ಏಕಿ ಪೊಲೀಸರು ಬಂದು ಅಂಗಡಿ …
Read More »ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
ಬೆಳಗಾವಿ-ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪೋಲೀಸ್ ವಾಹನಗಳ ಸೈರನ್ ಸದ್ದು ಬೆಳಗಾವಿ ಮಾರುಕಟ್ಟೆಯನ್ನು ಸ್ತಭ್ದಗೊಳಿಸಿದೆ. ಬೆಳಗಾವಿಯ ಖಡೇಬಝಾರ್,ಮಾರುತಿಗಲ್ಲಿ,ಗಣಪತಿ ಬೀದಿ …
Read More »ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ
ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ. ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …
Read More »ಗೋಕಾಕ: ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ಹಾಕುತ್ತಿರುವುದು.
ಗೋಕಾಕ: ಜನತೆ ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದು ಮಹಾಮಾರಿ ಕೋರೋನಾದಿಂದ ರಕ್ಷಣೆ ಪಡೆಯುವಂತೆ ಕೆಎಲ್ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಬುಧವಾರದಂದು ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೋವಿಡ್ ಮಹಾಮಾರಿ ಹೆಚ್ಚಾಗುತ್ತಿದೆ. ಜನತೆ ಜಾಗೃತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋರೋನಾ …
Read More »ಶ್ರೀರಾಮನವಮಿ ಅಂಗವಾಗಿ ರಮೇಶ್ ಜಾರಕಿಹೊಳಿ ಅವರ ಟ್ವಿಟರ್ ಖಾತೆಯಲ್ಲಿ ಶುಭಾಶಯ
ಬೆಂಗಳೂರು, ಏ.21- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಶ್ರೀರಾಮನವಮಿ ಅಂಗವಾಗಿ ರಮೇಶ್ ಜಾರಕಿಹೊಳಿ ಅವರ ಟ್ವಿಟರ್ ಖಾತೆಯಲ್ಲಿ ಶುಭಾಶಯ ತಿಳಿಸಲಾಗಿದೆ. ಫೆ.18ರಿಂದ ನಿಷ್ಕ್ರಿಯವಾಗಿದ್ದ ಟ್ವಿಟರ್ ಖಾತೆ ಇಂದು ಬೆಳಗ್ಗೆ ಸಕ್ರಿಯವಾಗಿದೆ. ಸಿಡಿ ಪ್ರಕರಣದಲ್ಲಿ ಸಿಲುಕಿದ ರಮೇಶ್ ಜಾರಕಿಹೊಳಿ ಅವರು ಇದ್ದಕ್ಕಿದ್ದಂತೆ ಅಜ್ಞಾತವಾಸಕ್ಕೆ ತೆರಳಿದ್ದರು. ನ್ಯಾಯಾೀಶರ ಮುಂದೆ ಯುವತಿ ಹೇಳಿಕೆ ನೀಡಿದ ಬಳಿಕ ರಮೇಶ್ ಜಾರಿಕಿಹೊಳಿ ಬೆಳಗಾವಿ ಸೇರಿಕೊಂಡಿದ್ದು, ಕೊರೊನಾ ಸೋಂಕು ತಗುಲಿದೆ ಎಂದು ಚಿಕಿತ್ಸೆ …
Read More »ಬೆಳಗಾವಿಯ ಕಾಡಂಚಿನ ಗ್ರಾಮದಲ್ಲಿ ಅರ್ಧಕ್ಕರ್ಧ ಜನರಿಗೆ ಕೊರೊನಾ ಪಾಸಿಟಿವ್: ಇಡೀ ಊರನ್ನೇ ಸೀಲ್ಡೌನ್ ಮಾಡಿದ ಅಧಿಕಾರಿಗಳು
ಬೆಳಗಾವಿ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ಮೇ.4ರ ತನಕ ಕೆಲ ಕಠಿಣ ನಿಯಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ ಕೆಲವೆಡೆ ಕಾರ್ಮಿಕರ ವಲಸೆ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಗೆ ಇದು ಮಾರಕವಾಗಿ ಪರಿಣಮಿಸುತ್ತಿದೆ. ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಾಡಂಚಿನಲ್ಲಿರುವ ಪುಟ್ಟ ಗ್ರಾಮವಾದ ಅಬನಾಳಿ ಎಂಬಲ್ಲಿ ಬರೋಬ್ಬರಿ 146 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಸೀಲ್ಡೌನ್ ಮಾಡಿದ್ದಾರೆ. …
Read More »
Laxmi News 24×7