Breaking News

ಬೆಳಗಾವಿ

ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಒಬ್ಬರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯ. ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲಕ …

Read More »

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅಬ್ಬರದ ಪ್ರಚಾರ

ಸವದತ್ತಿ ವಿಧಾನಸಭಾ ಮತಕ್ಷೇತ್ರದ ಮಬನೂರ, ಬೆನಕಟ್ಟಿ, ಮುನವಳ್ಳಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕೈಗೊಂಡು, ಮತಯಾಚನೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. “ರಾಜ್ಯ ಹಾಗೂ ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಜನರು ಒಂದಾಗಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ, ಜನವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು” ಎಂದು ಮನವಿ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ …

Read More »

ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ

ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …

Read More »

ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …

Read More »

ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …

Read More »

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು. ‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ …

Read More »

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »