Breaking News

ಬೆಳಗಾವಿ

ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್

ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು. ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ …

Read More »

ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ ಎಂಬ ಕುತೂಹಲ ಹುಟ್ಟಿಸಿದೆ

ಬೆಳಗಾವಿ (ಮಾ. 25): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 17ರಂದು ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಈ ಬೆಳವಣಿಗೆ ಹಿಂದ ಹಲವು ರಾಜಕೀಯ ಲೆಕ್ಕಾಚಾರಗಳು ಜಿಲ್ಲೆಯಲ್ಲಿ ಆರಂಭವಾಗಿದೆ. ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ …

Read More »

ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆ

ಬೆಳಗಾವಿ: ಬಿಜೆಪಿಯ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆಗಳಿವೆ. ನಾಲ್ವರಲ್ಲಿ ತಲಾ ಇಬ್ಬರು ಸಹೋದರರು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಇದ್ದಾರೆ. ಅವರವರಿಗೆ ಬೇಕಾದವರ ಗೆಲುವಿಗೆ ಪೈಪೋಟಿ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ‘ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು …

Read More »

CD ಯುವತಿಯಿಂದ ಮತ್ತೊಂದು ವಿಡಿಯೋ.. ಸಿದ್ದರಾಮಯ್ಯ, ಡಿಕೆಶಿ ಹೆಸರು ಉಲ್ಲೇಖ

ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿರೋ ಯುವತಿ ಇವತ್ತು ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ತನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ ಅಂತ ವಿಪಕ್ಷ ನಾಯಕರ ಬಳಿ ಕೇಳಿಕೊಂಡಿದ್ದಾಳೆ. ಜೊತೆಗೆ ಎಸ್​ಐಟಿ ತನಿಖೆ ಬಗ್ಗೆನೇ ಅನುಮಾನ ವ್ಯಕ್ತಪಡಿಸಿದ್ದಾಳೆ. ಆಕೆ ವಿಡಿಯೋದಲ್ಲಿ ಹೇಳಿರೋದೇನು ಅನ್ನೋದು ಇಲ್ಲಿದೆ ನೋಡಿ.. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅದರ ಬಗ್ಗೆ ಗ್ಯಾರಂಟಿ ಸಿಕ್ಕ ಬಳಿಕ ಎಸ್​ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ಏನು ಹೇಳಿಕೆ …

Read More »

ಪ್ರಮಾಣಪತ್ರ ಸಿಗದೆ ಭಾವೀ ವೈದ್ಯರ ಪರದಾಟ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೋ, ಬೇಡವೋ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಯಾವುದೇ ಸೂಚನೆ ನೀಡುತ್ತಿಲ್ಲ. ಕೋರ್ಸ್‌ ಮುಗಿಸಿ ಒಂದೂವರೆ ತಿಂಗಳು ಕಳೆದರೂ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ದೂರಿದ್ದಾರೆ. ‘ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದೊಂದಿಗೆ ಷರತ್ತುಬದ್ಧ ಒಪ್ಪಂದ ಮಾಡಿಕೊಳ್ಳಲಾಗುತ್ತಿತ್ತು. 2015ರ ಕಡ್ಡಾಯ ಸೇವಾ ತರಬೇತಿ ತಿದ್ದುಪಡಿ ಕಾಯ್ದೆಯನ್ವಯ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್

ಬೆಳಗಾವಿ, ಮಾರ್ಚ್ 24: ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧಳಾಗಿದ್ದೇನೆ ಎಂದರು. ದಿ.ಸುರೇಶ್ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಸೊಸೆ ಅಗಿರುವ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ …

Read More »

ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ …

Read More »

ಲೋಕಸಭಾ ಉಪ ಚುನಾವಣೆ ಮೊದಲ ದಿನವೇ 2 ನಾಮಪತ್ರ

ಬೆಳಗಾವಿ –  ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಇಂದು ಮೊದಲ ದಿನ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ವೆಂಕಟೇಶ್ವರ ಮಹಾಸ್ವಾಮೀಜಿ ಮತ್ತು ಶ್ರೀಕಾಂತ ಪಡಸಲಗಿ ಎನ್ನುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರಗಳನ್ನು ಸ್ವೀಕರಿಸಿದರು. ಏಪ್ರಿಲ್ 17ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾ.30ರ ವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಈವರೆಗೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Read More »