Breaking News

ಬೆಳಗಾವಿ

ನಕಲಿ ದಾಖಲೆ ಸೃಷ್ಟಿ ಸಬ್‌ರಜಿಸ್ಟ್ರಾರ್ ಬಂಧನ

ಚಿಕ್ಕೋಡಿ:ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ, ಮಾರಾಟ ಮಾಡಿಸಿದ ಆರೋಪದಡಿ ಹುಕ್ಕೇರಿ ತಾಲೂಕಿನ  ಉಪನೋಂದಣಿ ಅಧಿಕಾರಿ ಮಡಿವಾಳಯ್ಯ ಬಾನಿಮಠ (34), ಬಾಂಡ್ ರೈಟರ್ ಆನಂದ ದಡ್ಡಿಮನಿ(35) ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ  ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ   ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು. ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು  …

Read More »

ಮಟ್ಕಾ ಅಡ್ಡೆ ಮೇಲೆ ಪೊಲೀಸ್ ದಾಳಿ

ಬೆಳಗಾವಿ: ನಗರದ  ಪೊಲೀಸರು ನಡೆಸಿದ 6 ಪ್ರತ್ಯೇಕ ಮಟ್ಕಾ ಅಡ್ಡೆ ಮೇಲಿನ ದಾಳಿ ಪ್ರಕರಣಗಳಲ್ಲಿ  7 ಜನ ಆರೋಪಿ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿತರಾದ ಮೊಹಮ್ಮದ್‌ಶಫಿ ತಹಶೀಲ್ದಾರ (69), ಐಮಾನ್ ಹಸನ್‌ಸಾಬ್ ಚಿಕ್ಕೋಡಿ (33), ಮೊಹ್ಮದ್‌ದಿಲಶಾದ್ ಅನ್ಸಾರಿ (30), ದಾನೀಶ್ ಸಯ್ಯದ್ (23), ಮೊಹ್ಮದ್‌ರಜಾ ಇನಾಮದಾರ್ (27), ಮೊಹ್ಮದ್‌ಯೂನಸ್ ಕಲೀಲ್‌ಅಹ್ಮದ್ (30), ಸಲ್ಮಾನ್ ಅನ್ಸಾರಿ ನಿಯಾಜುದ್ದೀನ್ (30) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಿಜೆಪಿಗೆ ಅಬಕಾರಿ ಸಚಿವರೇ ಟಾರ್ಗೆಟ್:ಸಿದ್ಧಾರ್ಥ ಸಿಂಗೆ ಆಕ್ರೋಶ

ಅಥಣಿ ಗ್ರಾಮೀಣ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಾರ್ ಲೈಸನ್ಸ್ ಹಂಚಿಕೆ ಹಗರಣ ವಿಚಾರದಲ್ಲಿ ವಿನಾಕಾರಣ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೆಸರು ಉಲ್ಲೇಖಿಸಿ ಬಿಜೆಪಿಯವರು ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿದ್ದಾರೆ ಎಂದು ಅಥಣಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಆರೋಪಿಸಿದರು. ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿರೀಕ್ಷಣಾಮಂದಿರದಲ್ಲಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯವರು ಅಬಕಾರಿ ಸಚಿವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈಗಾಗಲೇ ಸುಳ್ಳು ಆರೋಪಗಳ …

Read More »

ಖನಗಾಂವ ಕೆ.ಎಚ್ ಗ್ರಾಮದಲ್ಲಿ ಶಿವಾಜೀ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಭೂಮಿ ಪೂಜೆ!

ಅಖಂಡ ಭಾರತದ ಆರಾಧ್ಯ ದೈವ, ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯದ ಗಾಥೆ ಈಗ ಖನಗಾಂವ ಗ್ರಾಮದಲ್ಲಿ ಮೊಳಗಲಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜೆ ನೆರವೇರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಹಿಂದೂ ಸಾಮ್ರಾಜ್ಯದ ಅಡಿಪಾಯ ಹಾಕಿದ ವೀರ ಕೇಸರಿ, ಅಪ್ರತಿಮ ಯೋಧ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಲ್ಲೂಕಿನ ಖನಗಾಂವ ಕೆ.ಎಚ್ ಗ್ರಾಮದಲ್ಲಿ ಇಂದು …

Read More »

ಮಹಾವೀರ ನಗರದಲ್ಲಿ ಶಾಸಕ ಆಸೀಫ್ ಸೇಠ್ ಜನತಾ ದರ್ಬಾರ್: ಸಾರ್ವಜನಿಕರ ಅಹವಾಲು ಆಲಿಕೆ

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ ಕುರಿತು ನೋಡೋಣ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ನೇರವಾಗಿ ಜನರ ಮನೆಬಾಗಿಲಿಗೆ ತೆರಳುತ್ತಿರುವ ಶಾಸಕರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಾಸಕ ಆಸೀಫ್ ಸೇಠ್ ಅವರು ಇಂದು ಮಹಾವೀರ ನಗರ ಪ್ರದೇಶದಲ್ಲಿ ಸಮಗ್ರ ರೌಂಡ್ಸ್ ನಡೆಸಿ, ‘ಜನತಾ ದರ್ಬಾರ್’ ಮೂಲಕ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಮನ್ …

Read More »

ಟ್ರ್ಯಾಕ್ಟರ್’ಗಳ ಡಿಜೆ ಅಬ್ಬರಕ್ಕೆ ಸಾರಿಗೆ ಇಲಾಖೆ ಮೌನ: ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಶ್ರೀನಿವಾಸ್ ಪಾಟೀಲ್ ಸತ್ಯಾಗ್ರಹ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಅಳವಡಿಸಲಾದ ಕಾನೂನುಬಾಹಿರ ಡಿಜೆ ಸೌಂಡ್ ಸಿಸ್ಟಮ್‌ಗಳು ಈಗ ಜನರ ಪ್ರಾಣಕ್ಕೆ ಸಂಚಕಾರ ತಂದಿವೆ. ಶಾಲಾ ಮಕ್ಕಳ ಶಿಕ್ಷಣ ಮತ್ತು ರೋಗಿಗಳ ನೆಮ್ಮದಿಗೆ ಭಂಗ ತರುತ್ತಿರುವ ಈ ಅಬ್ಬರದ ವಿರುದ್ಧ ಶ್ರೀನಿವಾಸ್ ಪಾಟೀಲ್ ಈಗ ರಣಕಹಳೆ ಊದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಲಾಗಿರುವ ಡಿಜೆ ಸೌಂಡ್ …

Read More »

ಹುಕ್ಕೇರಿ : ಮುಸ್ಲಿಂ ಮನೆಯಲ್ಲಿ ಬೆಳೆದು ಹಿಂದೂ ಸಂಪ್ರದಾಯದಂತೆ ಮದುವೆ ಯಾದ ಯುವಕ

ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ದಂಪತಿಗಳು ಹಿಂದೂ ಅನಾಥ ಮಕ್ಕಳಿಗೆ ಬೆಳಕಾಗಿ ಸಾಕಿ ಬೆಳೆಸಿ ಶಿಕ್ಷಣ ಕೊಡಿಸಿ ಈಗ ಹಿಂದೂ ವಧುವನ್ನು ಹುಡಕಿ ಮದುವೆ ಮಾಡಿಸಿದ ಅಪರೂಪದ ಘಟನೆ ಜರುಗಿದೆ. ಹೌದು ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದ ಮುಸ್ಲಿಂ ದಂಪತಿಗಳಾದ ಮೆಹಬೂಬ್ ಹಸನ ನಾಯಿಕವಾಡಿ ಹಾಗೂ ನೂರಜಾನ್ ರವರು ಇಬ್ಬರೂ ಅನಾಥ ಹಿಂದೂ ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರಾದ ಮೇಲೆ ಇಡಿ ಮುಸ್ಲಿಂ ಕುಟುಂಬಸ್ಥರು ಸೇರಿ ಹಿಂದೂ ವಧುವನ್ನು …

Read More »

ಚಿಕ್ಕೋಡಿ ತಾಲೂಕಿನ 4 ಏತ ನೀರಾವರಿ ಯೋಜನೆಗೆ 2 ಕೋಟಿ ಅನುದಾನ ಮಂಜೂರು: ಎಂಎಲ್ಸಿ ಪ್ರಕಾಶ ಹುಕ್ಕೇರಿ

ಚಿಕ್ಕೋಡಿ:ನನ್ನ ಹಾಗೂ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ ಚಿಕ್ಕೋಡಿ ತಾಲೂಕಿನ ವ್ಯಾಪ್ತಿಯ ಇಂಗಳಿ ಗ್ರಾಮದ-2 ಯಕ್ಸಂಬಾ ಹಾಗೂ ಯಡೂರವಾಡಿ ಗ್ರಾಮಗಳ ಒಟ್ಟು 04 ಏತ ನೀರಾವರಿ ಯೋಜನೆಗಳ 159 ಎಕರೆ ಜಮೀನುಗಳಿಗೆ ರೂ. 2.00 ಕೋಟಿಗಳ ಅನುದಾನ ಮಂಜೂರಾಗಿದೆ ಎಂಎಲ್ಸಿ ಪ್ರಕಾಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಂಜೂರಾದ ಆದೇಶ ಪತ್ರವನ್ನು ವಿತರಿಸಿ ಮಾತನಾಡಿ ಅವರು ಚಿಕ್ಕೋಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂಗಳಿ, ಯಕ್ಸಂಬಾ ಹಾಗೂ ಯಡೂರವಾಡಿ ಗ್ರಾಮದ …

Read More »

ಶತಮಾನದ ಸಾಧಕ ಡಾ.ಪ್ರಭಾಕರ – ಸಚಿವ ವಿ.ಸೋಮಣ್ಣ

ಬೆಳಗಾವಿ: ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ.ಪ್ರಭಾಕರ ಕೋರೆ ಕೊಡುಗೆ ಅಪಾರವಾದುದು. ಅವರ ಸಮಾಜಮುಖಿ ಸೇವೆ, ಧಾರ್ಮಿಕತೆಯ ಮನಸ್ಸು ಅವರನ್ನು ಎತ್ತರಕ್ಕೆ ಬೆಳೆಸಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶ್ಲಾಘಿಸಿದರು. ನಗರದ ಡಾ.ಪ್ರಭಾಕರ ಕೋರೆಯವರ ಸ್ವಗೃಹಕ್ಕೆ ಶನಿವಾರ ಆಗಮಿಸಿ, ಪದ್ಮಶ್ರೀಗೆ ಭಾಜನರಾಗಿದ್ದಕ್ಕಾಗಿ ಸತ್ಕರಿಸಿ ಬಳಿಕ ಕುಶಲೋಪಹರಿ ವಿಚಾರಿಸಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ ಕೋರೆ ಅವರು ಸಮಾಜ ಸೇವೆಯನ್ನು ಒಂದು ವ್ರತವನ್ನಾಗಿಸಿ ಸ್ವೀಕರಿಸಿ ಶ್ರಮಿಸಿದವರು. …

Read More »

ಭೂ ಸ್ವಾಧಿನ ಸಮಸ್ಯೆಯಿಂದಾಗಿ ರೈಲ್ವೆ ಹೊಸ ಯೋಜನೆಗಳು ವಿಳಂಬವಾಗುತ್ತಿವೆ: ಸಚಿವ ವಿ.ಸೋಮಣ್ಣ

ಬೆಳಗಾವಿ: ಬೆಳಗಾವಿ&ಧಾರವಾಡ ನಡುವೆ ನೇರ ರೈಲು ಮಾರ್ಗ, ಬಾಗಲಕೋಟೆ&ಕುಡಚಿ, ಲೋಕಾಪುರ&ಯಾದವಾಡ, ಬೆಂಗಳೂರು&ಕೋಲಾರ ಸೇರಿ ಹತ್ತಕ್ಕೂ ಅಧಿಕ ರೈಲ್ವೆ ಹೊಸ ಯೋಜನೆಗಳು ಭೂ ಸ್ವಾಧಿನ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ನಿಗದಿತ ವೇಳೆ ಭೂ ಸ್ವಾಧಿನ ಮಾಡಿ ಹಸ್ತಾಂತರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎಂದರು. ಕೇಂದ್ರ ಸರ್ಕಾರ 2026&27ನೇ ಬಜೆಟ್​ನಲ್ಲಿ ೂಷಿಸಿದಂತೆ ಬೆಂಗಳೂರು ಕೇಂದ್ರದಿಂದ …

Read More »