Breaking News
Home / ಜಿಲ್ಲೆ / ಬೆಳಗಾವಿ (page 381)

ಬೆಳಗಾವಿ

ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ

ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ  ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ.   ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ  ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …

Read More »

ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಫ್ಟ್​

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.  

Read More »

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು. ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು. ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ …

Read More »

ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?

ಹುಬ್ಬಳ್ಳಿ; ಆಗಸ್ಟ್​ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …

Read More »

ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …

Read More »

ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ

ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‍ಐ …

Read More »

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು. ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು …

Read More »

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್‌ ಇನ್ನಿಲ್ಲ

ಅಥಣಿ  : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್‌ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್‌.ಡಿ.ಕುಮಾರಸ್ವಾಮಿಯೇ …

Read More »