ಗೋಕಾಕ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದ ಪ್ರತಿ ಮನೆ ಮಾಸ್ಕ್ ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ‘ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿರುವ ಪ್ರತಿ ಮನೆಗಳಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡನೆಯ ಹಂತದಲ್ಲಿ 2.50 ಲಕ್ಷ ಮಾಸ್ಕ್ ಗಳನ್ನು …
Read More »ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಹುಕ್ಕೇರಿ : ಡ್ರಗ್ಸ್ ದಂಧೆ ಜಾಲದಲ್ಲಿ ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಜಮೀರ್ ಇಲ್ಲ. ಹೀಗಾಗಿ ಅವರೊಂದಿಗೆ ಹೊಲಿಕೆ ಮಾಡುವುದು ಸರಿಯಲ್ಲ. ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ ಪಾರ್ಟಿಗೆ ಹೋದರೆ ಅಥವಾ ತಿರುಗಾಡಿದ್ರೆ ಏನೂ ಸಂಬಂಧವಿಲ್ಲ. ಡ್ರಗ್ಸ್ ತೆಗೆದುಕೊಂಡರೆ, ಮಾರಾಟ ಮಾಡಿದರೆ …
Read More »ಬೆಳಗಾವಿ: ‘ಬೃಹತ್ ಇ- ಲೋಕ ಅದಾಲತ್’ 19ರಂದು
ಬೆಳಗಾವಿ: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆ. 19ರಂದು ‘ಬೃಹತ್ ಇ-ಲೋಕ ಅದಾಲತ್’ ಹಮ್ಮಿಕೊಳ್ಳಲಾಗಿದೆ. ‘ಕಲಂ 138 (ಎನ್ಐ ಆಕ್ಟ್) ಅಡಿ ನೋಂದಾಯಿಸಿದವು, ಮೋಟಾರು ವಾಹನ ಅಪಘಾತ ಪರಿಹಾರ, ಸಾಲ ವಸೂಲಾತಿ ಮತ್ತು ವ್ಯಾಜ್ಯ ಪೂರ್ವ, ಕೌಟುಂಬಿಕ ಹಾಗೂ ಜೀವನಾಂಶ ಮತ್ತು ಸಿವಿಲ್ ಹಾಗೂ ಎಲ್ಲ ರೀತಿಯ ಪ್ರಕರಣಗಳನ್ನು ಆನ್ಲೈನ್ ಮೂಲಕ ರಾಜಿ ಮಾಡಿ ಇತ್ಯರ್ಥಗೊಳಿಸಲಾಗುವುದು. ಅದಾಲತ್ಗೆ ಸಂಬಂಧಿಸಿದಂತೆ ಎಲ್ಲ ನ್ಯಾಯಾಲಯಗಳಲ್ಲೂ ಪೂರ್ವಭಾವಿ ಕಾರ್ಯಕ್ರಮಗಳು ನಡೆಯುತ್ತಿವೆ. …
Read More »ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ
ಬೆಳಗಾವಿ, : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ. ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ …
Read More »ಹುಬ್ಬಳ್ಳಿ-ಬೆಳಗಾವಿ ನಡುವಿನ ಹೊಸ ಮಾರ್ಗಕ್ಕೆ ರೈಲ್ವೆ ಮಂಡಳಿ ಅನುಮೋದನೆ
ಹುಬ್ಬಳ್ಳಿ: ಕಿತ್ತೂರು ಮತ್ತು ಧಾರವಾಡದ ಮಾರ್ಗವಾಗಿ ಬೆಳಗಾವಿ ಮತ್ತು ಹುಬ್ಬಳ್ಳಿ ನಡುವಿನ 73 ಕಿಲೋಮೀಟರ್ ಉದ್ದದ ಹೊಸ ರೈಲ್ವೆ ಮಾರ್ಗದ ಯೋಜನೆಗೆ ರೈಲ್ವೆ ಮಂಡಳಿ ಅನುಮೋದಿಸಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಸೋಮವಾರ ಪ್ರಕಟಿಸಿದೆ. ಇದರಂತೆ, ಹೊಸ ಮಾರ್ಗ ಬೆಳಗಾವಿ-ಹುಬ್ಬಳ್ಳಿ ನಡುವಿನ ಪ್ರಯಾಣದ ಸಮಯವನ್ನು ಕನಿಷ್ಠ ಒಂದು ಗಂಟೆಯವರೆಗೆ ಕಡಿಮೆ ಮಾಡುವ ಸಾಧ್ಯತೆಯಿದೆ. ರಸ್ತೆ ಮಾರ್ಗಕ್ಕೆ ಹೋಲಿಸಿದರೆ ಇದು ಸುಮಾರು 31 ಕಿಲೋಮೀಟರ್ ದೂರವನ್ನು ಕಡಿಮೆ ಮಾಡುತ್ತದೆ. ಧಾರವಾಡ ಮತ್ತು …
Read More »ಬೆಳಗಾವಿ: ಸಮಸ್ಯೆ ಆಲಿಸಲು ಕಾರಿನಿಂದಿಳಿಯದ ಅಧಿಕಾರಿಗಳು; ಸ್ಥಳೀಯರಿಂದ ಘೇರಾವ್
ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ ತಾಲ್ಲೂಕಿನ ಲೋಳಸೂರ ಸೇತುವೆ ಬಳಿ ಮಂಗಳವಾರ ನಡೆಯಿತು. ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತನಾಡಲು ತಂಡದ ಅಧಿಕಾರಿಗಳು ನಿರಾಕರಿಸಿದರು. ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ …
Read More »ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಹಣಕ್ಕಾಗಿ ಆಗ್ರಹಿಸಿ ರೈತರ ಧರಣಿ
ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರು ಮತ್ತೆ ಬೀದಿಗೆ ಇಳಿದು ಧರಣಿ ನಡೆಸಿದ್ದಾರೆ. ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಎರಡು ವರ್ಷದಿಂದ ಬಾಕಿ ಹಣ ಉಳಿಸಿಕೊಂಡಿದ್ದು, ರೈತರಿಗೆ ಪಾವತಿ ಮಾಡಿಲ್ಲ. ಲಾಕ್ಡೌನ್ನಂತಹ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಹಣ ನೀಡದೆ ಸತಾಯಿಸುತ್ತಿದೆ. ಹೀಗಾಗಿ ಸೋಮವಾರ ರೈತ ಸಂಘದ ನೇತೃತ್ವದಲ್ಲಿ ಬೃತಹ್ ಧರಣಿ ನಡೆಸಿ, ತಕ್ಷಣ ಬಾಕಿ ಹಣ ಪಾವತಿ ಮಾಡಬೇಕು ಎಂದು ಆಗ್ರಹಿಸಿಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಎಂ ಕೆ …
Read More »ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ
ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಯುವಕ, …
Read More »ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ
ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ …
Read More »