ಗೋಕಾಕ: ಕಳೆದ ಎರಡು ವರ್ಷಗಳಿಂದ ನೆರೆ, ಅತಿವೃಷ್ಟಿ ಹಾಗೂ ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ತತ್ತರಿಸಿರುವ ರೈತರಿಗೆ ಈಗ ಸಾಲ ತುಂಬುವಂತೆ ನೋಟಿಸು ನೀಡುತ್ತಿರುವ ಬ್ಯಾಂಕ್ನವರು ತಮ್ಮ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಒತ್ತಾಯಿಸಿದ್ದಾರೆ. ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಸಾಲ ತುಂಬಲು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ರೈತರಿಗೆ ನೀಡುತ್ತಿರುವ ನೋಟಿಸ್ನ್ನು ತಹಶೀಲ್ದಾರರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, …
Read More »ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಕಾರ್ಯಕ್ರಮ
ಬೆಳಗಾವಿ – ಇಲ್ಲಿಯ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಫೆ.28ರಂದು ರನ್ನೋತ್ಸವ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಗ್ಗೆ 5.30ಕ್ಕೆ ಸಿಪಿಎಡ್ ಮೈದಾನದಿಂದ ರನ್ನೋತ್ಸವ ಆರಂಭವಾಗಲಿದೆ. 21 ಕಿಮೀ, 10 ಕಿಮೀ ಮತ್ತು 5 ಕಿಮೀ ದೂರದ ಓಟ ಆಯೋಜಿಸಲಾಗಿದೆ. ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಎನ್ನುವ ಸಂದೇಷದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
Read More »‘ಪ್ರಮುಖವಾಗಿ ಗೋಕಾಕ ಹಾಗೂ ಸತ್ತಿಗೇರಿ ಗ್ರಾಮದಲ್ಲಿ ಕಾನೂನುಬಾಹಿರ ಕ್ವಾರಿಗಳು ತಲೆ ಎತ್ತಿದೆ.: ಅಕ್ರಮ ಕ್ವಾರಿ: ವಾರದೊಳಗೆ ಸಮೀಕ್ಷೆ
ಬೆಳಗಾವಿ: ‘ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ‘ನಮ್ಮ ಮೂಲ ಉದ್ದೇಶವು ಅಕ್ರಮ ಕ್ವಾರಿಗಳು ಹಾಗೂ …
Read More »ಕೊಲೆ ಪ್ರಕರಣ ಮೂವರು ಅರೆಸ್ಟ್………?
ಬೆಳಗಾವಿ, ತಾಲೂಕಿನ ಸೋಮನಟ್ಟಿ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಎಂಬ ಯುವಕ ಫೆ.11ರಂದು ನಾಪತ್ತೆಯಾಗಿದ್ದ, ನಂತರ ಫೆ.22ರಂದು ಜೋಯಿಡಾ ತಾಲೂಕಿನ ಉಳವಿ ಬಳಿ ಯುವಕನ …
Read More »ನಾಳೆ ಸಚಿವ ಈಶ್ವರಪ್ಪರಿಂದ ಕವಲಗುಡ್ಡದ ಶ್ರೀ ಅಮೋಘಸಿದ್ಧ ಶಾಲೆಯ 14 ಕೊಠಡಿಗಳ ಲೋಕಾರ್ಪಣೆ..ಅಮರೇಶ್ವರ ಮಹಾರಾಜರು
ಕಾಗವಾಡ ತಾಲೂಕಿನ ಸಿದ್ಧಶ್ರೀ ಸಂಸ್ಥಾನ ಶ್ರೀ. ಕರಿಯೋಗಸಿದ್ಧ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕೌಲಗುಡ್ಡ ಇಲ್ಲಿಗೆ ಕಟ್ಟಿಸಿದ 14 ನೂತನ ಕೋಣೆಗಳ ಕಟ್ಟಡದ ಉದ್ಘಾಟನೆ ಸಮಾರಂಭ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಾ ಇವರು ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಿದ್ದಾರೆಯೆಂದು ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡಿದರು. ಬುಧವಾರ ರಂದು ಇನ್ ವಾಹಿನಿಗೆ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡುವಾಗ, ಕರಿಯೋಗಸಿದ್ಧ ಕನ್ನಡ …
Read More »ಟಿಕೇಟ್ ಅಸಲಿ ಆಟ ಇನ್ನು ಶುರು ಇಂದಿನಿಂದಲೇ ನೀತಿ ಸಂಹಿತೆ ಜಾರಿ!
ನವದೆಹಲಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯ ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣೆ ಆಯೋಗ ಈ ಸಂಬಂಧ ಬುಧವಾರ ಬೆಳಿಗ್ಗೆ 11 ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇವುಗಳ ಜೊತೆಗೆ ಬೆಳಗಾವಿ ಉಪ ಚುನಾವಣೆ ಕೂಡ ನಡೆಯಬಹುದು. ಅದಕ್ಕೆ ತಕ್ಣದಿಂದಲೇ ನೀತಿ ಸಂಹಿತೆ …
Read More »ಇಂಧನ ದರ ಇಳಿಸುವಂತೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹ
ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …
Read More »ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ
ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »ಬೆಳಗಾವಿಯಲ್ಲಿ ಪೆಟ್ರೊಲ್ ಕಳ್ಳರ ಹಾವಳಿ ….. ಸಿಸಿ ಕ್ಯಾಮರಾದಲ್ಲಿ ಸೆರೆ
ಪೆಟ್ರೋಲ್ ಬೆಲೆ ಏರಿಕೆ ಈಗ ಹೊಸ ಸಮಸ್ಯೆ ತಂದೊಡ್ಡಿದೆ. ಇಷ್ಟು ದಿನ ಮನೆ ಬೀಗ ಮುರಿದು ಒಳ ನುಗ್ಗಿ ಆಭರಣ ಕದಿಯುತ್ತಿದ್ದ ಕಳ್ಳರೀಗ, ಮನೆಯಂಗಳದಲ್ಲಿ ನಿಲ್ಲಿಸಿರುವ ವಾಹನಗಳಿಂದ ಪೆಟ್ರೋಲ್ ಎಗರಿಸಿ ಪರಾರಿಯಾಗುತ್ತಿದ್ದಾರೆ. ಹೀಗಾಗಿ ಕುಂದಾನಗರಿ ಖ್ಯಾತಿಯ ಬೆಳಗಾವಿ ಜನ, ಅಪಾರ್ಟ್ಮೆಂಟ್ನ ಪಾರ್ಕಿಂಗ್ನಲ್ಲಿ ಹಾಗೂ ತಮ್ಮದೇ ಮನೆಯ ಅಂಗಳದಲ್ಲಿ ವಾಹನ ನಿಲ್ಲಿಸಲೂ ಹಿಂಜರಿಯುವಂತಾಗಿದೆ. ಪೆಟ್ರೋಲ್ ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದಿನೇದಿನೆ ಇಂಧನ ದರ ಗಗನಕ್ಕೆ | ಕಳ್ಳತನಕ್ಕೆ ಸುಲಭ …
Read More »