Breaking News
Home / ಜಿಲ್ಲೆ / ಬೆಳಗಾವಿ (page 390)

ಬೆಳಗಾವಿ

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …

Read More »

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …

Read More »

A.D.G.P.ಅಮರಕುಮಾರ್ ಪಾಂಡೆ ಅವರ ಸಂಧಾನಸಭೆ ಸಕ್ಸಸ್

ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ.         ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು …

Read More »

ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌

.   ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ. ದೊಂಬಿ, ಅತಿಕ್ರಮ ಪ್ರವೇಶ, ಮಾರಕಾಸ್ತ್ರಗಳೊಂದಿಗೆ ಗಲಭೆ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಅಡಿ ಆರೋಪ ಸಾಬೀತಾದರೆ ಕನಿಷ್ಠ 3 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ಆಗುವ ಸಾಧ್ಯತೆಯಿದೆ. ಆದರೆ ಕನ್ನಡ ಕನ್ನಡ ಧ್ವಜಕ್ಕೆ ಚಪ್ಪಲಿ ಎಸೆದವರೊಂದಿಗೆ ಸಂಧಾನ ಮಾಡಲು ಸರ್ಕಾರ ಮುಂದಾಗಿದ್ದು ಟೀಕೆಗೆ …

Read More »

ರಾಯಣ್ಣ ಪ್ರತಿಮೆ‌ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಪೀರನವಾಡಿಯಲ್ಲಿನ ಘಟನೆ ಸಂಬಂಧ ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ …

Read More »

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

ಪೀರನವಾಡಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ ‌ವಿಚಾರ ಲಾಠಿ ಚಾರ್ಜ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ ಕಾನೂನು ರೀತಿ ಕ್ರಮ ಕೈ ಗೊಳ್ಳಲು ಸೂಚನೆ ನೀಡುತ್ತೆನೆ ರಾಯಣ್ಣ ಅಭಿಮಾನಿಗಳ ಮೇಲೆ …

Read More »

ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ

ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು. ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ …

Read More »

, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ

 ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ. ಪೀರನವಾಡಿಯಲ್ಲಿ ಶಿವಾಜಿ ಪ್ರತಿಮೆ ಎದುರೇ ಬೆಳಗಾಗುವಷ್ಟರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇದು ಸ್ಥಳೀಯ ಮಾರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದಂತೆಯೇ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ …

Read More »

ಶಾಂತಿ ಕಾಪಾಡಲು ಕ್ರಮಕೈಗೊಳ್ಳಿ: ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ಆದೇಶ..!

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರುವ ಗಲಾಟೆಯಲ್ಲಿ ನಡೆಯುತ್ತಿದ್ದು, ಶಾಂತಿ ಕಾಪಾಡಲು ಏನೇನು ಕ್ರಮ ಬೇಕು ಅದೆನ್ನೆಲ್ಲವನ್ನ ಕೈಗೊಳ್ಳಿ ಎಂದು ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ದೂರವಾಣಿ ಕರೆ ಮಾಡಿ ಆದೇಶ ನೀಡಿದ್ದಾರೆ. ಇನ್ನು ಪೀರನವಾಡಿಗೆ ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನ ಕಳಿಸಲಾಗಿದ್ದು, ಸಮಸ್ಯೆಯನ್ನ ಬಗೆಹರಿಸಲು ಸಿಎಂ ಸೂಚನೆ ನೀಡುದ್ದಾರೆ ಅದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ. ಎರಡು ಸಮಾಜದ ಜೊತೆ ಹಿರಿಯರು ಮಾತನಾಡುತ್ತೇವೆ ಎಂದು …

Read More »

ನಕಲಿ ಕಾರ್ಮಿಕರ ಕಾರ್ಡ್ ದಂಧೆ ವಿರುದ್ಧ ಕಠಿಣ ಕ್ರಮ: ಸಚಿವ ಶಿವರಾಮ್ ಹೆಬ್ಬಾರ್

ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …

Read More »