Breaking News

ಬೆಳಗಾವಿ

ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ

ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ …

Read More »

ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್

ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …

Read More »

ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …

Read More »

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.

Read More »

ಊಟದ ಪ್ಲೇಟು ತೊಳೆಯಲು ಹೋದಾಗ ಕಾಲು ಜಾರಿ ನೀರುಪಾಲಾದ ಬಾಲಕ

ರಾಮದುರ್ಗ: ರಾಮದುರ್ಗ ತಾಲೂಕಿನ ಸುರೇಬಾನದ ಹತ್ತಿರ ಕೊಳಚಿ ಕೆನಾಲ್ ನಲ್ಲಿ ಕಾಲು ಜಾರಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾಂತೇಶಗೌಡ ಪಾಟೀಲ (11) ಮೃತ ಬಾಲಕ. ಈತ ಸುರೇಬಾನದ ಪ್ರಗತಿ ವಿದ್ಯಾಲಯದಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಶುಕ್ರವಾರ ಬೆಳಿಗ್ಗೆ ವಿದ್ಯಾಗಮ ತರಗತಿಗೆ ಹಾಜರಾಗಿ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೆನಾಲ್ ಹತ್ತಿರ ಇರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ಹಾಗೂ ಚಿಕ್ಕಪ್ಪನಿಗೆ ಮನೆಯಿಂದ ಊಟ ತೆಗೆದುಕೊಂಡು ಬಂದಿದ್ದಾನೆ. …

Read More »

ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …

Read More »

ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು

ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …

Read More »

ಗೋಕಾಕ 33 ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ: ಇಲ್ಲಿದೆ ಫುಲ್ ಡಿಟೇಲ್ಸ್!!

ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು.   ತಳಕಟ್ನಾಳ ಗ್ರಾ.ಪಂ ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ …

Read More »

15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …

Read More »

ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು.

  ತುರ್ತು ಪರಿಸ್ಥಿತಿಗೆ 112 ಸಂಖ್ಯೆಗೆ ಕರೆ (24 Jan 2021 ,06 ತುರ್ತು ಸ್ಪಂದನಾ ವಾಹನಗಳನ್ನು ಚಾಲನೆ)   ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರು ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ಎಂಥದೆ ತುರ್ತು ಪರಿಸ್ಥಿತಿ ಎದುರಾದಾಗ ಇನ್ನು ಮುಂದೆ 112 …

Read More »