Breaking News
Home / ಜಿಲ್ಲೆ / ಬೆಳಗಾವಿ (page 402)

ಬೆಳಗಾವಿ

ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ

ಅಥಣಿ:  ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ  ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …

Read More »

ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …

Read More »

ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ

ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್‌ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …

Read More »

ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು  ತಗುಲಿರುವುದು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿಯೇ ಸುದ್ದಿಯಾಗಿದ್ದ ಮಣಗುತ್ತಿ ಗ್ರಾಮದಲ್ಲಿಯೇ ಪಿಡಿಒಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇವರು ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರು ಹಲ್ಲೆ ಮಾಡಿದ್ದರು. ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ   ಯಶಸ್ಸು ಕಟ್ಟಿಟ್ಟ ಬುತ್ತಿ

ಕಾಗವಾಡ :  ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ   ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ನಿರೂಪಿಸಿದ್ದಾಳೆ.  ಇಂಗ್ಲೀಷ ಮಾಧ್ಯಮದಲ್ಲಿ 625 ಕ್ಕೆ 604 ಅಂಕ ಗಳಿಸಿ  ಅಥಣಿ ಕಿತ್ತೂರ ರಾಣಿ ಚನ್ನಮ್ನ ವಸತಿ ಶಾಲೆಗೆ ಪ್ರಥಮ‌ ಸ್ಥಾನ ಪಡೆಯುವ ಮೂಲಕ  ಪೋಷಕರ ಹಾಗೂ  ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಪೂಜಾ ಎಂಬ …

Read More »

ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆ,,,,,,,,,

ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ. ಸಮಗ್ರ ಮಾಹಿತಿ ಇಲ್ಲಿದೆ. –

Read More »

ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವೀಡ್ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ರೋಗಿಗಳಿಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ ನೀಡಿದ್ದಾರೆ. ಭೀಮ್ಸ್ ಆಸ್ಪತ್ರೆಯಲ್ಲಿ high flow nasal canuala oxygenation ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ನೀಡುವಂತೆ ಭೀಮ್ಸ್ ನಿರ್ದೇಶಕರು ಶಾಸಕ ಅಭಯ ಪಾಟೀಲರಿಗೆ ಪತ್ರ ಬರೆದಿದ್ದರು ಭೀಮ್ಸ್ ಮನವಿಗೆ ತಕ್ಷಣ ಸ್ಪಂದಿಸಿರುವ ಶಾಸಕ ಅಭಯ ಪಾಟೀಲ ಉಪ ವಿಭಾಗಾಧಿಕಾರಿಗಳಿಗೆ ಪತ್ರ …

Read More »

ಮೆರವಣಿಗೆ ಪಟಾಕಿ ಏನೂ ಇಲ್ಲಈ ಬಾರಿಯ ಗಣೇಶ ಉತ್ಸವ…..!ಜಿಲ್ಲಾಧಿಕಾರಿಗಳು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವೀಡ್ ಹಾವಳಿ ಹೆಚ್ಚಾಗಿರುವದರಿಂದ ಈ ಬಾರಿಯ ಗಣೇಶ ಉತ್ಸವವನ್ನು ಕಟ್ಟುನಿಟ್ಟಾಗಿ ಆಚರಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದೇ ಸಮೀಪದ ಮಂದಿರಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು,ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ 4 ಫೂಟ್ ಗಿಂತ ಎತ್ತರ ಇರಬಾರದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ ಎರಡು ಪೂಟ್ ಗಿಂತ ಎತ್ತರ ಇರಬಾರದು,ಗಣೇಶ ಮೂರ್ತಿಯನ್ನು …

Read More »

ಅಂಜಲಿ ನಿಂಬಾಳ್ಕರ್ ಬಹಿರಂಗ ಕ್ಷಮೆಯಾಚಿಸದಿದ್ದರೆ, ಕರವೇ ಕಾರ್ಯಕರ್ತರು ಅವರ ಮನೆ ಎದುರು ಧರಣಿ ಮಾಡಬೇಕಾಗುತ್ತದೆ:ದೀಪಕ ಗುಡಗನಟ್ಟಿ

ಬೆಳಗಾವಿ:  ಮನಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಕುರಿತು ನಡೆದ ಘಟನೆ ಸತ್ಯವನ್ನು ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್  ಮಾಡಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್  ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ರ್ಯಾಲಿ ನಡೆಸಿ ಶಾಸಕಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಸರ್ಕಾರ ಗಡಿಭಾಗದಲ್ಲಿ ಶಿವಾಜಿ ಮಹಾರಾಜರ ಮೂರ್ತಿ …

Read More »