Breaking News
Home / ಜಿಲ್ಲೆ / ಬೆಳಗಾವಿ (page 404)

ಬೆಳಗಾವಿ

ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ:ಬಿ.ಆರ್.ಸಂಗಪ್ಪಗೋಳ

ಚಿಕ್ಕೋಡಿ: ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಸಕರ ಮೇಲೆ ಮತ್ತು ಪೊಲೀಸ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡರೇ ಬೆಂಗಳೂರು ಬಿಹಾರ ಆಗಿದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೀಳಿಸುವ ಹುನ್ನಾದ ಬಿಜೆಪಿ ಪಕ್ಷದಲ್ಲಿರುವ ಕೆಲವು …

Read More »

ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ  ಕೊನೆಗೆ ಎಚ್ಚತ್ತ ಅಧಿಕಾರಿಗಳು  ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.

ಕಿತ್ತೂರು:  ನಿರಂತರ ಮಳೆಯಿಂದಾಗಿ ತೆಗ್ಗು, ಗುಂಡಿ ಬಿದ್ದು ಸಂಪೂರ್ಣ  ಹಾಳಾಗಿದ್ದ  ನೇಗಿನಾಳ- ಬೈಲಹೊಂಗಲ ರಸ್ತೆ  ದುರಸ್ತಿ ಮಾಡುವಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ  ಕೊನೆಗೆ ಎಚ್ಚತ್ತ ಅಧಿಕಾರಿಗಳು  ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಎಂ.ಕೆ ಹುಬ್ಬಳ್ಳಿಯಿಂದ ನೇಗಿನಾಳ ಮಾರ್ಗವಾಗಿ ಬೈಲಹೊಂಗಲ ತಲುಪುವ ರಸ್ತೆ ಸಂಪೂರ್ಣ ನಾಶವಾಗಿತ್ತು. 1 ಕೀಮಿ ವರೆಗೂ ರಸ್ತೆ ಸಂಪೂರ್ಣ ಹಾಳಾಗಿದ್ದು, ತಗ್ಗು , ಗುಂಡಿಯಲ್ಲಿ  ಮಳೆ ನೀರು  ತುಂಬಿದ್ದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸಿ ವಾಹನ ಸವಾರರು …

Read More »

74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.: ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ:  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ‌, ಜಲಸಂಪನ್ಮೂಲ ಸಚಿವರು.

Read More »

ಸ್ಮಾರ್ಟ್ ಸಿಟಿ ಮಾದರಿಯಂತೆಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು

ಯಮಕನಮರಡಿ: ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು ಹೊಡೆಯುವಂತೆ  ಸ್ಮಾರ್ಟ್ ಸಿಟಿ ಮಾದರಿಯಂತೆ ಹೈ ಮಾಸ್ಕ್ ಬೀದಿ ದೀಪಗಳನ್ನು  ಶಾಸಕ ಸತೀಶ ಜಾರಕಿಹೊಳಿ  ಅವರು ಅಳವಡಿಸಿದ್ದಾರೆ. ಮುಚ್ಚಂಡಿ,  ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳೂ ಈಗಾಗಲೇ ಪಟ್ಟಣಗಳು ನಾಚುವಂತೆ ಹೈ ಮಾಸ್ಕ್ ದೀಪಗಳಿಂದ ಕಂಗೊಳಿಸುತ್ತಿದ್ದೇವೆ. ಇನ್ನೂ ಕ್ಷೇತ್ರದಾದ್ಯಂತ ಈ ದೀಪಗಳನ್ನು ಅಳವಡಿಸುವ ಯೋಜನೆಯನ್ನು ಶಾಸಕರು ಹಾಕಿಕೊಂಡಿದ್ದಾರೆ.ನಿನ್ನೆ ಮುಚ್ಚಂಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಖುದ್ದಾಗಿ ಹೈಮಾಸ್ಕ್ ದೀಪಗಳನ್ನು ಪರಿಶೀಲಿಸಿದರು. …

Read More »

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …

Read More »

ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ6 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು ಕೂಡ 6 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು,ಬೆಳಗಾವಿ, ಹೊಸದಾಗಿ 288 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ‌. ಹುಕ್ಕೇರಿ ತಾಲೂಕು ಸೇರಿ ಜಿಲ್ಲೆಯಲ್ಲಿ ಆರು ಜನರ ಸಾವನ್ನಪ್ಪಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 113 ತಲುಪಿದೆ. ಒಟ್ಟು 6640 …

Read More »

ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ

ಅಥಣಿ:  ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ  ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …

Read More »

ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …

Read More »

ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ

ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್‌ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …

Read More »