Breaking News

ಬೆಳಗಾವಿ

ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು.: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗಳಿಗೆ ಫಲಿತಾಂಶ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು (33180+40834) 74,014 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಫಲಿತಾಂಶ ಏನೇ ಬರಲಿ; ಧೃತಿಗೆಡಬೇಡಿ: ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು. ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನೋಬಲ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ. ಕೋವಿಡ್-19 …

Read More »

ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್

ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಅವರು, ಐತಿಹಾಸಿಕ ಮಹತ್ವ ಹೊಂದಿರುವ ಹುಬ್ಬಳ್ಳಿಯಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆ,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಸಂಡೇ ಸಿಹಿ ಸುದ್ಧಿ ಹೊರಬಿದ್ದಿದೆ ಇವತ್ತೂ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ದುಪ್ಪಟ್ಟು ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇಂದು ಭಾನುವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಇವತ್ತು ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆಯಾಗಿದ್ದು,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವದು ಸಂತಸದ ಸಂಗತಿಯಾಗಿದೆ ನಿನ್ನೆ ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ …

Read More »

ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ.

ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್  ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ‌   ( 18) ಎಂಬ ಯುವಕ  ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು. ವಿಷಯ ತಿಳಿದ  ಬಳಿಕ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು  …

Read More »

ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿ

ಬೆಳಗಾವಿ:  ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು,  ತೀವ್ರ ಗಾಯಗಳಾಗಿವೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ  ಟೋಲ್ ಗೇಟ್ ಸಮೀಪ ಘಟನೆ ಸಂಭವಿಸಿದೆ. ಅಂಕಲಿಯಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ  ಕೊರೊನಾ ಸೋಂಕಿತೆಯನ್ನು  ಕರೆ ತರುವ ವೇಳೆ ದುರ್ಘಟನೆ ನಡದಿದೆ. ರಸ್ತೆ ವಿಭಜಕಕ್ಕೆಆ್ಯಂಬುಲೆನ್ಸ್  ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ ಎನ್ನಲಾಗಿದೆ. ಚಾಲಕ, ನರ್ಸ್ , ಸೋಂಕಿತೆ  ಗಾಯಗೊಂಡಿದ್ದಾರೆ. ಬೇರೆ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೋಂಕಿತೆಯನ್ನು ಕರೆತಂದಿದ್ದಾರೆ.

Read More »

, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದು

ಬೆಳಗಾವಿ:  ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಇಂದು ಸಚಿವ ರಮೇಶ ಜಾರಕಿಹೊಳಿ ಅವರು ಬಾಗಿನ ಅರ್ಪಿಸಲಿದ್ದರು. ಆದ್ರೆ ಕಾರಣಾಂತರಿಗಳಿಂದ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ನೀರಾವರಿ ನಿಗಮ ಅಧಿಕಾರಿಗಳು ತಿಳಿಸಿದ್ದಾರೆ. ಗೋಕಾಕ ನಗರಸಭೆ ಸದಸ್ಯ, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗುತ್ತಿದೆ.

Read More »

ಮರಾಠ ಹಾಗೂ ಕನ್ನಡಿಗರ ನಡುವೆ ಭಾಷಾ ಧ್ವೇಷ ಮೂಡಿಸಲು ಶಿವ ಸೇನೆ ಪುಂಡರು ಯತ್ನ

ಹುಕ್ಕೇರಿ :  ತಾಲ್ಲೂಕಿನಲ್ಲಿ ಮನಗುತ್ತಿಯಲ್ಲಿ ಸ್ಥಾಪಿಸಿದ್ದ ಶಿವಾಜಿ ಮೂರ್ತಿ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಶಿವ ಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೊಣ್ಣೆಗಳಿಂದ ಬಡಿದಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಮನಗುತ್ತಿ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಸಮೀಪ ಸ್ಥಾಪಿಸಿರುವ ಶಿವಾಜಿ ಮೂರ್ತಿಯೂ ಗ್ರಾಮ ದೇವತೆ ಜಾತ್ರೆಗೆ ಸಮಸ್ಯೆಯಾಗುತ್ತದೆ ಎಂದು ಗ್ರಾಮದ ಹಿರಿಯರು, ಮುಖಂಡರು ಒಮ್ಮತದಿಂದ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಮ್ಮತಿಸಿರುತ್ತಾರೆ. ಆದರೆ ಇದನ್ನೇ ಮಹಾರಾಷ್ಟ್ರ ಶಿವ ಸೇನೆ ಕಾರ್ಯಕರ್ತರು ಮೂರ್ತಿ ಸ್ಥಳಾಂತರಕ್ಕೆ ವಿರೋಧ …

Read More »

ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ (58) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ : ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ (58) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 1 ವಾರದ ಹಿಂದೆಯಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಕೊನೆಯೂಸಿರೆಳೆದಿದ್ದಾರೆ. ಕೊರೊನಾ ಸೋಂಕು ತಗುಲಿತ್ತು ಎಂದು ಹೇಳಲಾಗುತ್ತಿದೆ. ವಕೀಲರ ಪರವಾಗಿ ಸರ್ಕಾರದಿಂದ ವಿರುದ್ಧ ಧ್ವನಿ ಎತ್ತುತ್ತಿದ್ದರು. ವಕೀಲರಿಗೆ ಅನ್ಯಾಯವಾದ್ರೆ ನ್ಯಾಯ ಸಿಗೋವರೆಗೂ ತಮ್ಮ ಹೋರಾಟದಲ್ಲಿ ಮಾಡುತ್ತಿದ್ದರು. ಜತೆಗೆ ಕಳೆದ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಯೂ ಕೂಡಾ ಆಗಿದ್ದರು.

Read More »

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »