ಬೆಳಗಾವಿ: ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು ಎನ್ನುವ ಮೂಲಕ ಗಡಿಯಲ್ಲಿ ಕ್ಯಾತೆ ತಗೆಯುವ ಎಂಇಎಸ್ ಪುಂಡರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಯ ಮರಾಠಿಗರಿಗೆ ಪತ್ರ ಕಳುಹಿಸುವ ಮೂಲಕ ಕರಾಳ ದಿನಾಚರಣೆಗೆ ಕರೆ ನೀಡಿದ್ದರು. ಈ ವಿಚಾರವಾಗಿ ನಗರದಲ್ಲಿ ಡಿಸಿಎಂ ಸವದಿ ಪ್ರತಿಕ್ರಿಯಿಸಿ, ಯಾರು ಎಷ್ಟೇ ಕೂಗಾಡಿದರು ಕೂಡ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮಹಾರಾಷ್ಟ್ರದಲ್ಲಿ ಕುಳಿತು ಕನ್ನಡದ …
Read More »ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ.
ಚಿಕ್ಕಮಗಳೂರು: ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ. ಕನ್ನಡಕ್ಕೆ ತನ್ನದೆ ಆದ ಇತಿಹಾಸವಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆ ಮಾಡೋರು ಕಮ್ಮಿ. ಆದ್ರೆ ನೀವು ದೇಗುಲಕ್ಕೆ ಹೋದ್ರೆ ಎಲ್ಲವೂ ಕನ್ನಡಮಯ. ಕನ್ನಡ ಅನ್ನೋ ಭಾಷೆಗೆ ತನ್ನದೇ ಆದ ತಾಕತ್ತು ಇದೆ.. ಈ ಭಾಷೆ ಸಾಕಷ್ಟು ಮಹತ್ವವನ್ನ ಹೊಂದಿದೆ. ಕನ್ನಡ ಪದಗಳು ಕಿವಿಗೆ ಬೀಳುತ್ತಿದ್ದರೆ ಮನಸ್ಸಿಗೆ ನೆಮ್ಮದಿ. ಆದ್ರೆ ಇತ್ತೀಚಿನ …
Read More »ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.
ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. …
Read More »ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ
ಬೆಳಗಾವಿ- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯಂತ ಮಹದಾನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ : ಸವದಿ
ಬೆಳಗಾವಿ : ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದೇವು. ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ಕೊಟ್ಟಿದ್ದೇವು. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ …
Read More »ರಾಜಕೀಯ ಬದ್ಧ ವೈರಿಗಳ ಮುಖಾಮುಖಿ
ಬೆಳಗಾವಿ : ಬೆಳಗಾವಿ ರಾಜಕೀಯ ಬದ್ಧ ವೈರಿಗಳ ಮುಖಾಮುಖಿ ಆಗಿದ್ದಾರೆ.ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಇಬ್ಬರು ಮುಖಾಮುಖಿ ಆಗುವ ಮೂಲಕ ಮೂರು ವರ್ಷಗಳ ವೈರತ್ವಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಾವು- ಮುಂಗುಸಿಯಂತೆ ಕಿತ್ತಾಡಿಕೊಂಡಿದ್ದ ಈ ಇಬ್ಬರು ನಾಯಕರು ಒಂದೇ ವೇದಿಕೆಗೆ ಬರಬೇಕೆನ್ನುವದು ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯಾಗಿತ್ತು ,ಡಿಸಿಸಿ ಬ್ಯಾಂಕ್ ಚುನಾವಣೆ ಈ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ. ಡಿಸಿಸಿ ಬ್ಯಾಂಕಿನಲ್ಲಿ ಮುಖಾಮುಖಿಯಾದ ಇಬ್ಬರು ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ, …
Read More »ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ : ರಮೇಶ ಜಾರಕಿಹೊಳಿ
ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ ಕೋರಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅತೀ ವಿಜ್ರಂಭನೆಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿತ್ತು. ಆದ್ರೆ ಈ ಭಾರಿ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.
Read More »ಸವದತ್ತಿಯ ಸುಕ್ಷೇತ್ರ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್
ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನ.30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ …
Read More »ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ
ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು. ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ …
Read More »ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ ಬಸ್ಸಾಪುರೆ, ಪಾಂಡು ರಂಗಸುಬೆ, …
Read More »
Laxmi News 24×7