Breaking News

ಬೆಳಗಾವಿ

ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ

ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ.         ಚಂದ್ರಶೇಖರ ಹುಚ್ಚನ್ನವರ್‌ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.

Read More »

ರಾಜ್ಯ ರೈಲ್ವೆ ಖಾತೆ ತೆರವಾಗಿದ್ದು, ಈ ಖಾತೆ ಮೇಲೆ ರಾಜ್ಯದ ಸಂಸದರು ಕಣ್ಣಿಟ್ಟಿದ್ದಾರೆ

ಬೆಳಗಾವಿ:  ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ವೀರಶೈವ-ಲಿಂಗಾಯತ ಸಮುದಾಯದ ನಾಯಕರಾಗಿದ್ದರು. ಹೀಗಾಗಿ ಅದೇ ಸಮುದಾಯದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ನಡುವೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಸಂಸದ ಪಿ.ಸಿ. ಗದ್ದೀಗೌಡರ್, ಸಂಸದ ಶಿವಕುಮಾರ್ ಉದಾಸಿ, ಸಂಸದ ಕರಡಿ ಸಂಗಣ್ಣ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರಗೆ ಅವರು …

Read More »

ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ

ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರು​ವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್‌’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …

Read More »

ಬ್ಲ್ಯಾಕ್ ಡೇ ಗೆ ಕರೆ ಕೊಟ್ಟ ಮಹಾರಾಷ್ಟ್ರ ಸರ್ಕಾರ…!

ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …

Read More »

ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಕಳೆದ 2015ರಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಭಿನ್ನಾಭಿಪ್ರಾಯಗಳು ಮೂಡಿದ್ದವು. ಹೀಗಾಗಿ ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.  ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,  ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು  ಒಂದಾಗಿ ಹೋಗುವ ನಿಟ್ಟಿನಲ್ಲಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿನ 16 ಕ್ಷೇತ್ರದಲ್ಲಿ …

Read More »

ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ‌ ಉಮೇಶ ಕತ್ತಿ ಹೇಳಿದರು‌.

ಬೆಳಗಾವಿ: ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ‌ ಉಮೇಶ ಕತ್ತಿ ಹೇಳಿದರು‌. ಇಲ್ಲಿನ ಯು‌.ಕೆ 27 ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ನೂರು ವರ್ಷದ ಸಂಭ್ರಮಾಚರಣೆಗೆ  ಭಾಗವಹಿಸಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲು  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ  ಜಿಲ್ಲೆಯ ಎಲ್ಲ ಮಂ ಬಿಜೆಪಿ ‌ನಾಯಕರು ದೆಹಲಿ ಹೋರಟಿದ್ದೇವೆ ಎಂದರು. ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು …

Read More »

ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ವಾಪಾಸ್ ಪಡೆಯುವುದಿಲ್ಲವೆಂದು ತಿಳಿಸಿದ್ದಾರೆ. ನನ್ನ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ಮುಖಂಡರೊಂದಿಗೂ ಸಹ ಮಾತನಾಡಿದ್ದೇನೆ. …

Read More »

ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ

ಬೆಳಗಾವಿ: ಸಚಿವ ರಮೇಶಜಾರಕಿಹೊಳಿ  ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ  ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ  ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು ದೊಡ್ಡ …

Read More »

ರಮೇಶ್ ನನಗೆ ಬಿಜೆಪಿಗೆ ಬರುವಂತೆ ಹೇಳಿದರು. ಆದರೆ ಎಲ್ಲರ ಮುಂದೆ ಕೈಮುಗಿದು ಅವರಿಗೆ ನಮಸ್ಕಾರ ಮಾಡಿದೆ.:ವಿನಯ್ ಕುಲ್ಕರ್ಣಿ

ಬೆಳಗಾವಿ: ಬಿಜೆಪಿಗೆ ಬರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರೆದರು. ಆದರೆ ನಾನು ಅವರಿಗೆ ಕೈಮುಗಿದು ನಮಸ್ಕಾರ ಮಾಡಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮಿಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದ ವೇದಿಕೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, ವಿನಯ್ ಕುಲ್ಕರ್ಣಿಗೆ ಬಿಜೆಪಿಗೆ ಬರುತ್ತೀಯಲ್ಲ ಎಂದು ಆಹ್ವಾನ ನೀಡಿದ ಪ್ರಸಂಗ ನಡೆಯಿತು. ಈ ವೇಳೆ ವಿನಯ್ ಕುಲ್ಕರ್ಣಿ, ಸಚಿವ ಜಾರಕಿಹೊಳಿಗೆ ಕೈಮುಗಿದು ಕುಳಿತುಕೊಂಡರು. …

Read More »

ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ.

ಬೆಳಗಾವಿ:  ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ  ಉತ್ತರ ಕರ್ನಾಟಕ 16 ಈ  ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ   ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ  ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ  ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …

Read More »