Breaking News

ಬೆಳಗಾವಿ

ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ

ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ  ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …

Read More »

ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

ಬೆಳಗಾವಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಆರೋಪಿಸಿ ರೈತ, ದಲಿತ ಮತ್ತು ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೆ. 28ರ ರಾಜ್ಯ ಬಂದ್‌ಗೆ ಇಲ್ಲಿನ ಕನ್ನಡ, ದಲಿತ ಮತ್ತು ರೈತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಭಾಗವಹಿಸುವುದಾಗಿ ತಿಳಿಸಿದರು. …

Read More »

ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು: ಈರಣ್ಣ ಕಡಾಡಿ

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …

Read More »

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.

Read More »

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …

Read More »

ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ

ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ. ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ಕುಡಿದ ಮತ್ತಿನಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಕುಡುಕ.. ಮುಂದೇನಾಯ್ತು?

ಬೆಳಗಾವಿ: ತುಂಬಿ ಹರಿಯುತ್ತಿರುವ ನದಿಗೆ ಹಾರಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ಮೂಡಲಗಿ ತಾಲೂಕಿನ ಢವಳೇಶ್ವರ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ ಕುಡಿದ ಮತ್ತಿನಲ್ಲಿ ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಹುಚ್ಚಾಟ ಪ್ರದರ್ಶಿಸಿದ್ದಾನೆ. ನದಿಗೆ ಹಾರಿದ ಬಳಿಕ ಈಜಲು ಆಗದೆ ಸೇತುವೆ ಕೆಳಭಾಗದಲ್ಲಿ ತೆಲಿ ಹೋಗಿದ್ದಾನೆ. ಸೇತುವೆ ದಾಟಿ ಮತ್ತೆ ನದಿ ನೀರಿನಲ್ಲಿ ಮೇಲೆದಿದ್ದಾನೆ. ನೂರು ಮೀಟರ್ ನಷ್ಟು ಮುಂದೆ ಸಾಗಿ ಈಜಿ …

Read More »