ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್ ಬಗ್ಗೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀದೇವಿ ಪಾಟೀಲ್ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. …
Read More »ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು
ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ. ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ. ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ. …
Read More »ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ ಸಿಬಿಐ ವಹಿಸಿ: ಅಥಣಿ ವಾಲ್ಮೀಕಿ ಸಮುದಾಯ ಮನವಿ.
ಅಥಣಿ: ಉತ್ತರ ಪ್ರದೇಶ ರಾಜ್ಯದಲ್ಲಿ ಕುಮಾರಿ ಮನೀಷಾ ವಾಲ್ಮೀಕಿ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಷ್ಟ್ರಪತಿ ಅವರಿಗೇ ಅಥಣಿ ವಾಲ್ಮೀಕಿ ಸಮುದಾಯದಿಂದ ಮನವಿ ಪತ್ರ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಭೀಮಗೌಡ ಪರಮಗೌಡರ್ ಮಾತನಾಡಿ, ಮನೀಷಾ ಹಿಂದುಳಿದ ವರ್ಗಗಳ ಸಮುದಾಯದಿಂದ ಬಂದಿದ್ದರಿಂದ ತನಿಖೆ ಇದುವರೆವಿಗೂ ವೇಗ ಪಡಿಕೊಂಡಿಲ್ಲ, ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ದೇಶದ ತುಂಬೆಲ್ಲ ವಾಲ್ಮೀಕಿ …
Read More »ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.
ಗೋಕಾಕ್: ನಗರದಲ್ಲಿ ರಾಜಸ್ತಾನ ವ್ಯಾಪಾರಿಗಳ ಕಳಪೆ ಗುಣಮಟ್ಟದ ವಸ್ತುಗಳ ಕಡಿಮೆ ಬೆಲೆ ಮಾರಾಟದಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ರಾಜಸ್ತಾನ ಹಠಾವೋ..ಗೋಕಾಕ್ ಬಚಾವೋ ಎಂಬ ಅಭಿಯಾನದ ಮೂಲಕ ವ್ಯಾಪಾರಸ್ಥ ಸಂಘದಿಂದ ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ. ಗೋಕಾಕ್ ನಗರದಲ್ಲಿ ರಾಜಸ್ತಾನಿ ವ್ಯಾಪಾರಿಗಳು ಕಳಪೆ ಗುಣಮಟ್ಟದ ವಸ್ತು, ಸಾಮಗ್ರಿಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ತೊಂದರೆಯಾಗಿದೆ. ವ್ಯಾಪಾರದಲ್ಲಿ ಮೊದಲೇ ನಷ್ಟ …
Read More »ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರಿಂದ ನಾಡಿನ ಜನತೆಗೆ ಕ್ಷಮೆಯಾಚನೆ
ಬೆಂಗಳೂರು :ಈ ಮೂಲಕ ತಮ್ಮೆಲ್ಲರಲ್ಲಿ ಹಂಚಿಕೊಂಡಿರುವುದು ಏನೆಂದರೆ ಈ ವಿಶ್ವದಲ್ಲಿ ಮಹಾಮಾರಿಯಾಗಿ ಜನಜೀವನಕ್ಕೆ ಹಾಗೂ ಜೀವಕ್ಕೆ ಕಂಟಕ ತಂದಿರುವ ಕೋರೋಣ ವೈರಸ್ ಸಮಯದಲ್ಲಿ ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿರುವುದು ತಮ್ಮೆಲ್ಲರಿಗೂ ತಿಳಿದಿರುವ ವಿಷಯ ಅಥವಾ ತಿಳಿಯಪಡಿಸುತ್ತೇನೆ. ನಮ್ಮ ಮುಷ್ಕರದಿಂದ ರಾಜ್ಯದ ಜನತೆಗೆ ಸಿಗಬೇಕಾದಂತಹ ಆರೋಗ್ಯ ಸೌಲಭ್ಯಗಳು ಸಿಗದಿರುವುದರಿಂದ ಈ ರಾಜ್ಯದ ಎಲ್ಲಾ ಜನಸಾಮಾನ್ಯರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ಹೊರಗುತ್ತಿಗೆ …
Read More »ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು
ಸವದತ್ತಿ: ಇಲ್ಲಿನ ಧಾರವಾಡ ರಸ್ತೆಯಲ್ಲಿರುವ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಸಮೀಪ ಶುಕ್ರವಾರ ರಾತ್ರಿ ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು. ತಾಲ್ಲೂಕಿನ ಚುಂಚನೂರ ಹಾಗೂ ಜಕಬಾಳ ಗ್ರಾಮಗಳ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲೆಯ ಮೊರಬ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಘಟನೆ ನಡೆದಿದೆ. ‘ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿವೆ. ಮೃತರಲ್ಲಿ ಮೂವರ ಗುರುತಷ್ಟೆ ಪತ್ತೆಯಾಗಿದೆ. ಅವರು …
Read More »ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು. ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ …
Read More »ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಜಿಲ್ಲಾ ಸಿಇಎನ್ (ಅಪರಾಧ) ಠಾಣೆಯ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಜತ್ತ ತಾಲ್ಲೂಕು ಬಿಳ್ಳೂರದ ರಾವಸಾಹೇಬ ಅಣ್ಣಪ್ಪ ನಂದಿವಾಲೆ, ಮೊಹೊಳ ತಾಲ್ಲೂಕು ಶೇಟಪಾಳದ ಸಂಗೀತಾ ದತ್ತಾತ್ರೇಯ ವಾಗಜ ಮತ್ತು ಫಂಡರಪುರ ತಾಲ್ಲೂಕು ಅಡಿವದ ವಿಲಾಸ ಪಾಂಡುರಂಗ ಘಾಡಗೆ ಬಂಧಿತರು. ‘ರಾವಸಾಹೇಬ, ಫಂಡರಪುರದ ಕಡೆಯಿಂದ ಅಥಣಿ ಕಡೆ ಗಾಂಜಾ ಮಾರಲು …
Read More »ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಬೆಳಗಾವಿ: ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಎರಡು ಕೊಲೆಯ ಹಿಂದಿದೆ ಡಬಲ್ ಪ್ರೇಮ್ ಕಹಾನಿ. ಹಣಕೊಟ್ಟು ಹೆಣ ಕೆಡವಲು ಯೋಜನೆ ರೂಪಿಸಿದ್ದ ಪಾಪಿ ಹೆಣ್ಣು ಹಾಗೂ ಸಹೋದರ ಮತ್ತು ಆತನ ಸ್ನೇಹಿತರು ಈಗ ಬಂಧಿತರಾಗಿದ್ದಾರೆ. ಈ ಪ್ರಕರಣವನ್ನು ಐದೇ ದಿನದಲ್ಲಿ ಬೆಳಗಾವಿ ಪೊಲೀಸರು ಭೇದಿಸಿದ್ದು, ಮಚ್ಚೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೆಪ್ಟೆಂಬರ್.26 ರಂದು …
Read More »‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ
ಬೆಳಗಾವಿ : ‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ. ಅವರ ಮಾರ್ಗದರ್ಶನವನ್ನು ನಾವು ಬಳಸಿಕೊಂಡು ಇಂದು ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯನ್ನು ಕಾಪಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿನ ಸೇವಾದಳ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ಕೆ ಶಿವಕುಮಾರ್ ಅವರು ಗಾಂಧಿಜಿ ಅವರ ಕೊಡುಗೆಯನ್ನು ಸ್ಮರಿಸುತ್ತಾ ದೇಶದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು …
Read More »
Laxmi News 24×7