Breaking News

ಬೆಳಗಾವಿ

ಕರುನಾಡಿಗೆ ಮತ್ತೆ ವರುಣಾಘಾತ; ಹವಾಮಾನ ಇಲಾಖೆ ಎಚ್ಚರಿಕೆ.

ಬೆಳಗಾವಿ ಸೇರಿ ಉತ್ತರದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಕರುನಾಡಿಗೆ ವರಣನ ಕಂಟಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, …

Read More »

ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ: ಸತೀಶ ಜಾರಕಿಹೊಳಿ

ಬೆಳಗಾವಿ:  ಪಕ್ಷದಲ್ಲಿ ಬಹಳಷ್ಟು ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಮೊದಲು  ಪಕ್ಷ ಅಧಿಕಾರಕ್ಕೆ ಬರಬೇಕು. ಸದ್ಯ ಪಕ್ಷ ಅಧಿಕಾರಕ್ಕೆ ತರಬೇಕು  ಎಂಬುವುದೇ ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ್ಯಂತ ಪಕ್ಷ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದೇವೆ.  ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ  ಶನಿವಾರ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು,   ಸುವರ್ಣಸೌಧದಲ್ಲಿ  ಪ್ರತಿ ಸಲ ಅಧಿವೇಶನ ನಡೆಯಬೇಕು. …

Read More »

SCP/TSP ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು. ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ …

Read More »

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …

Read More »

ಖಡಕಲಾಟ ಪೊಲೀಸರ್ ಭರ್ಜರಿ ಕಾರ್ಯಾಚರಣೆ 8.61 ಲಕ್ಷ ಮೌಲ್ಯದ ವಸ್ತುಗಳು ವಶ

  ಚಿಕ್ಕೋಡಿ:ರಸ್ತೆ ಬದಿಯಲ್ಲಿರುವ ಹಾಗೂ ಹೊಲ ಮನೆಯ ಹತ್ತಿರ ನಿಲ್ಲಿಸಿದ ಟ್ರಾಕ್ಟರ್ ಟ್ರೇಲರ್‌ಗಳನ್ನು ಹಾಗೂ ಡಿಸ್ಕ ಸಮೇತ 46 ಟಾಯರಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಖಡಕಲಾಟ ಪೋಲಿಸರು ಬಂಧಿಸಿದ್ದಾರೆ.   ಆರೋಪಿತರು ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಮಾರುತಿ ಬಸಪ್ಪಾ ಠೊಣ್ಣೆ (24), ಮಹಾದೇವ ಮುರಾರಿ ಮಾಕಾಳೆ (27), ‌ಬಾಬು ಸಿದ್ದಪ್ಪಾ ಡಾಲೆ (37), ಶಿವಾನಂದ ಮಾರುತಿ ಗಜಬರ (29), ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಸಂಜು ಬಿಷ್ಟಪ್ಪಾ ಅಂಬಡಗಟ್ಟಿ …

Read More »

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ————————– * ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು. * ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖ. * ಜಲಾಶಯಗಳಲ್ಲಿ ಹೂಳು …

Read More »

ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ …

Read More »

ಸಮಾಜ ಸೇವಕ ಆನಂದ ಚೋಪ್ರಾ ಅಕಾಲಿಕ ನಿಧನ ಅವರ ಆತ್ಮಕ್ಕೆ ಶಾಂತಿ ಸಿಗಲಿ : ರಮೇಶ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.       ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ನಾನು ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ …

Read More »

ಕರ್ನಾಟಕ ರಾಜ್ಯದ ಮೊದಲ ಕಿಸಾನ್ ರೈಲು ಬೆಂಗಳೂರಿನಿಂದ ಇಂದು ದೆಹಲಿಗೆ ಸಂಚಾರ; ರೈತರಲ್ಲಿ ಹೊಸ ನೀರಿಕ್ಷೆ..!

ಬೆಳಗಾವಿ : ದೇಶದ ಮೂರನೇ ಕಿಸಾನ್ ರೈಲು ಇಂದು ಬೆಂಗಳೂರಿನಿಂದ ದೆಹಲಿಗೆ ಸಂಚಾರ ನಡೆಸಲಿದೆ. ರೈಲಿನ ಮೂಲಕ ಅಂತರಾಜ್ಯ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಉಪಯೋಗವಾಗಲಿದ್ದು, ರೈತರಲ್ಲಿ ಹೊಸ ನೀರಿಕ್ಷೆಯನ್ನು ಹುಟ್ಟಿಸಿದೆ. ಬೆಂಗಳೂರು ನಿಂದ ದೆಹಲಿಯನ್ನು ತಲುಪಲು ರೈಲು 54 ಗಂಟೆಯ ಸಮಯ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇದೇ ಮೊದಲ ಸಲ ಕಿಸಾನ್ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ಪ್ರತಿ ಶನಿವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಸೋಮವಾರ ರಾತ್ರಿ 11.45ಕ್ಕೆ …

Read More »

ಬೆಳಗಾವಿ: ಖಾಸಗಿಯಿಂದ ಸರ್ಕಾರಿ ಶಾಲೆಗಳತ್ತ ‘ದಾಖಲೆ’

ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ದಾಖಲಿಸಿರುವ ‘ದಾಖಲೆಯ ಬೆಳವಣಿಗೆ’ ನಡೆದಿದೆ. ಈ ಶೈಕ್ಷಣಿಕ ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಸವದತ್ತಿ ಹಾಗೂ ರಾಮದುರ್ಗ ಕ್ಷೇತ್ರಗಳಲ್ಲಿ 1ರಿಂದ 10ನೇ ತರಗತಿವರೆಗೂ ಮಕ್ಕಳು ಖಾಸಗಿಯಿಂದ ಸರ್ಕಾರಿ ಶಾಲೆಗಳತ್ತ ಬಂದಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಡೆದಿರುವ ಅಂಕಿ-ಅಂಶಗಳ ಪ್ರಕಾರ, ಈವರೆಗೆ 954 ಬಾಲಕರು ಮತ್ತು 852 ಬಾಲಕಿಯರು …

Read More »