ಬೆಳಗಾವಿ – ಕೊರೋನಾ ಸೋಂಕು ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇಂದು ಒಂದೇ ದಿನ 14 ಪಾಸಿಟಿವ್ ಪ್ರಕರಣ ಬಂದಿದೆ. ಹಿರೇಬಾಗೇವಾಡಿ ಎನ್ನುವ ಒಂದೇ ಊರಲ್ಲಿ 36 ಪ್ರಕರಣ ದೃಢಪಟ್ಟಿದೆ. ಕುಡಚಿ ಮತ್ತು ಸಂಕೇಶ್ವರ ಪಟ್ಟಣವೂ ನಲುಗಿಹೋಗಿದೆ. ಬೆಳಗಾವಿ ನಗರವನ್ನೂ ಸೋಂಕು ಕಂಗೆಡಿಸಿದೆ. ಇಂದಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ 69 ಜನರಿಗೆ ಪಾಸಿಟಿವ್ ಬಂದಿದೆ. ವಿಶೇಷವೆಂದರೆ ಇವೆಲ್ಲವೂ ತಬ್ಲಿಘಿಗಳ ನಿಜಾಮುದ್ದೀನ್ ನಂಟಿನಿಂದಲೇ ಬಂದಿದ್ದು. ತಬ್ಲಿಘಿ ನಂಟು ಹೊರತಾದ …
Read More »ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನ……….
ಅಥಣಿ- ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿತರನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಶಿರೂರ -ಖಿಳೆಗಾಂವ ಮಧ್ಯದ ಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾಗ ಅಥಣಿ ತಹಸೀಲ್ದಾರ್ ಮತ್ತು ಅವರ ಚಾಲಕ ಅನಿಲ್ ಮಲ್ಲಪ್ಪ ಗಸ್ತಿ ಹಾಗೂ ಆರ್.ವಿ. ಖಲಾಟೆ ಅವರೊಂದಿಗೆ ದಾಳಿ ಕೈಗೊಂಡಾಗ ತಹಸೀಲ್ದಾರ್ ಮತ್ತು ಅವರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಒತ್ತಾಯಪೂರ್ವಕವಾಗಿ ಟ್ರ್ಯಾಕ್ಟರನ್ನು ತೆಗೆದುಕೊಂಡು …
Read More »ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ.
ಗೋಕಾಕ: ಮುಸ್ಲಿಂ ಸಮುದಾಯದ ಪವಿತ್ರ ರಮಜಾನ್ ತಿಂಗಳಿನ ರೋಜಾವನ್ನು ಯುವಕರು ವೃದ್ಧರು ಸೇರಿ ಬಾಲಕರೂ ಪಾಲನೆ ಮಾಡುವುದು ಸಾಮಾನ್ಯವಾಗಿದೆ. ನಗರದ ಹಾಜಿ ಆರೀಪ್ ಪೀರಜಾದೆ ಅವರ ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ. ರಾಹುಲ್ ಸತೀಶ್ ಜಾರಕಿಹೊಳಿಯವರು ಈ ಮಗುವಿಗೆ ರಮಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಇಂತಹ ಬಿಸಿಲಿನಲ್ಲೂ ಅರಾಪತ್ ಪೀರಜಾದೆ ಇಡೀ ದಿನ ನೀರು ತಿಂಡಿ ಇಲ್ಲದೆ ಅಲ್ಲಾಹನ ಕೃಪೆಗಾಗಿ ಉಪವಾಸ ವೃತ …
Read More »ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.
ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ. ದೇಶಾದ್ಯಂತ ಮಹಾಮಾರಿ ಕೊರೋನ ಸೋಂಕು ಹರಡಿರುವ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಿರಾಶ್ರಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳು ತೊಂದರೆ ಗೀಡಾಗಿದ್ದರಿಂದ ದಿನ ಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವಂತಾಗಿದೆ. ನೆರವಿಗೆ ನಿಂತ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ …
Read More »ಕೋವಿಡ್-೧೯: ಇಬ್ಬರು ಮಹಿಳೆಯರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ(ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಕ್ರಮವಾಗಿ ಏ.1 ಹಾಗೂ ಮಾ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ …
Read More »ಬೆಳಗಾವಿ ಇಂದು ಬೆಳಗಾವಿ ಯಲ್ಲಿ ಮತ್ತೆ 14ಪಾಸಿಟಿವ್
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೋರೊನಾ ಸೋಂಕು *ಗಡಿನಾಡು ಬೆಳಗಾವಿ ಹೆಬ್ಬಾಗಿಲಲ್ಲಿ ಕೋರೊನಾ ಮೃದಂಗ* *ಬೆಳಗಾವಿಯಲ್ಲಿ ಇಂದು ಇಂದು ಒಂದೇ ದಿನ ಪತ್ತೆಯಾದ 14 ಕೋರೊನಾ ಪ್ರಕರಣ* ಕುಂದಾನಗರಿಗೆ ಮತ್ತೆ ಕಂಟಕವಾದ ಕಿಲ್ಲರ್ ಕೋರೊನಾ ವೈರಸ್ *ಬೆಳಗಾವಿ ಜಿಲ್ಲೆಯಲ್ಲಿ ಹತೋಟಿಗೆ ಬರುತ್ತಿಲ್ಲ ಕೋರೊನಾ* *ಹಿರೇಬಾಗೇವಾಡಿಯಲ್ಲಿ 11 ಹಾಗೂ ಸಂಕೇಶ್ವರದಲ್ಲಿ 3 ಕೋರೊನಾ ಪಾಸಿಟಿವ್ ಕೇಸ್* .
Read More »ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ …
Read More »ಕೋವಿಡ್-೧೯: ಮತ್ತೇ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಏ.೨೯(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ೨೫ ವರ್ಷದ ವ್ಯಕ್ತಿ(ಪಿ-೨೨೬)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೧೨ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೫ ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ …
Read More »ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ
ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ. ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. …
Read More »ಡೊಣ್ಣೆ ಮೆಣಸಿನಕಾಯಿ ಹಾನಿ ಲಕ್ಷಾಂತರ ರೊ ನಷ್ಟ ಸರ್ಕಾರ ನೀಡುತ್ತಾ ಸಹಾಯ ದನ ?…..
ಚಿಕ್ಕೋಡಿ:೧೫ ಲಕ್ಷ ರೂ ಹಾನಿ. ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ನೀರು ತರಿಸಿದ ಡೊಣ್ಣ ಮೆಣಸಿನಕಾಯಿ ತರಕಾರಿ ಬೆಳೆ ಒಂದು ಕಡೆ ಕೊರೊನಾ ಭೀತಿ ಮತ್ತೊಂದು ಕಡೆ ನೆತ್ತಿ ಸುಡುವ ಬೀರು ಬಿಸಲಿನ ಬೇಗೆ ಇಂತಹ ಸಂದೀಗ್ಧ ಪರಿಸ್ಥಿತಿಯಲ್ಲಿ ಜಮೀನಿನಲ್ಲಿ ಹುಲಸಾಗಿ ಬೆಳೆದ ಡೊಣ್ಣೆ ಮೆಣಸಿನಕಾಯಿ ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ಕಣ್ಣಿರು ತರಿಸುತ್ತಿದೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ವ್ಯಾಪ್ತಿಯ ಡೋಣವಾಡ ಗ್ರಾಮದ ಸಿದ್ದಗೌಡ ಪಾಟೀಲ ಎಂಬ ರೈತ ತನ್ನ …
Read More »