Breaking News

ಬೆಳಗಾವಿ

ಕೆಲವು ಸಲ ನಾನು ಮಾತು ಬಿಟ್ಟಾಗ ಗೌಡರು ಫೋನ್ ಮಾಡಿಯೇ ಮಾಡುತ್ತಿದ್ದರು.: ಅಶೋಕ ಚಂದರಗಿ,

ಟೀಕೆ,ಟಿಪ್ಪಣಿಯನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸುತ್ತಿದ್ದಸಿದ್ದನಗೌಡರು ಉದ್ಯೋಗ ಮಾಡಿಕೊಂಡೇ ಕನ್ನಡ ಹೋರಾಟದಲ್ಲಿ ತೊಡಗಬೇಕೆಂದುಕಟ್ಟು ನಿಟ್ಟಾಗಿಯೇ ಹೇಳುತ್ತಿದ್ದರು! ಬಹುಶಃ ನಾನು ಮತ್ತು ಹಿರಿಯ ಕನ್ನಡ ಹೋರಾಟಗಾರ,ಹಿರಿಯ ಪತ್ರಕರ್ತ ಶ್ರೀ ರಾಘವೇಂದ್ರ ಜೋಶಿಯವರು ಮಾಜಿ ಮಹಾಪೌರ ದಿ.ಸಿದ್ದನಗೌಡ ಪಾಟೀಲರ ವಿರುದ್ಧ ಬರೆದಷ್ಟು,ಜಗಳಾಡಿದಷ್ಟು ಬೇರೆ ಯಾರೂ ಜಗಳಾಡಿರಲಿಕ್ಕಿಲ್ಲ!! 1980 ರಲ್ಲಿ ನಾನು ರಾಮದುರ್ಗದಿಂದ ಬೆಳಗಾವಿಗೆ ಬಂದು ಪತ್ರಿಕೋದ್ಯಮ ಪ್ರವೇಶಿಸಿದಾಗ ಗೌಡರು ಕನ್ನಡ ಹೋರಾಟಗಾರರ ಅಗ್ರಗಣ್ಯ ನಾಯಕರು.1982 ರಲ್ಲಿ ಪತ್ರಕರ್ತರಾಗಿದ್ದುಕೊಂಡೇ ಐತಿಹಾಸಿಕ ಗೋಕಾಕ ಚಳವಳಿಯ ಮೂಲಕ ಕನ್ನಡ ಹೋರಾಟದಲ್ಲಿ …

Read More »

600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ  ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು. ರಾಷ್ಟೀಯ ಹೆದ್ದಾರಿ-04ರ  ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ …

Read More »

ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ

ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ,  ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು. ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು …

Read More »

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ  ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ   ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ

ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು  ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ. ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. …

Read More »

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು. https://www.facebook.com/105350550949710/posts/191905245627573/?sfnsn=wiwspmo&extid=ZCMxTWRDM3OhkFxk&d=n&vh=e   ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ …

Read More »

ಬೆಳಗಾವಿ: 170 ಮಂದಿ ಗುಣಮುಖ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …

Read More »

ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ

ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖವಗುತ್ತಿದ್ದು,  ನದಿ ತೀರದ ಗ್ರಾಮದ ಜನರು  ನಿರಾಳರಾಗಿದ್ದಾರೆ. ಆದ್ರೆ ಈ ಗ್ರಾಮದಲ್ಲಿ ಸಾಂಕ್ರಾಮಿಕ  ರೋಗದ ಭೀತಿ ಎದುರಾಗಿದೆ. ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಖೋಡ, ಖವಟಗೊಪ್ಪ, ಸೇರಿದಂತೆ ಇತರೆ ನದಿ ತೀರದ ಗ್ರಾಮಗಳಲ್ಲಿ  ಸೊಳ್ಳ, …

Read More »

ಸಭೆ ಮುಗಿಯುವವರೆಗೂ ಹೋರಾಟ ಹಿಂಪಡೆಯಿರಿ- ರಾಜೇಂದ್ರ ಸಣ್ಣಕ್ಕಿ ಮನವಿ

ಗೋಕಾಕ:  ಪೀರಣವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ನಾಳೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ  12 ಗಂಟೆಗೆ  ಜಿಲ್ಲಾ ಉಸ್ತುವಾರಿ  ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕುರುಬ ಸಮುದಾಯ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ  ಕುರುಬ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ  ಹೇಳಿದ್ದಾರೆ. ಗೋಕಾಕ ನಗರದಲ್ಲಿ  ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಕುರುಬ ಸಂಘದ ಪದಾಧಿಕಾರಿಗಳ ನೇತೃತ್ವದ ನಿಯೋಗ  ಇಂದು ಜಿಲ್ಲಾ ಉಸ್ತುವಾರಿ ಸಚಿವರನ್ನು …

Read More »

D.C.P.ಸೀಮಾ ಲಾಟ್ಕರ್ ವರ್ಗಾವಣೆ ಬೆಂಗಳೂರಿಗೆ

ಬೆಳಗಾವಿ: ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿ, ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದಲ್ಲಿ ಕೆಲ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇವರು, ಅಹಿತಕರ ಘಟನೆ, ಗಲಭೆಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದರು.

Read More »

ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಬೆಳಗಾವಿ:  ಪೀರನವಾಡಿಯ ವೃತ್ತದಲ್ಲಿ ಕ್ರಾಂತಿವೀರ  ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೊಳಿಸುವಂತೆ ಒತ್ತಾಯಿಸಿ  ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಆಗಮಿಸುವ ಸಾವಿರಾರು ರಾಯಣ್ಣನ ಅಭಿಮಾನಿಗಳು ಸುವರ್ಣಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಲಿದ್ದಾರೆ. ಕನ್ನಡ ಹೋರಾಟಗಾರರು, ರಾಯಣ್ಣ ಅಭಿಮಾನಿಗಳು  ಹಲವು ಬಾರಿ ಪ್ರತಿಭಟನೆ ಕೈಗೊಂಡು ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾಡಳಿತ, ಸಿಎಂ ಅವರಿಗೂ  …

Read More »