ಬೆಳಗಾವಿ: ಮನಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಕುರಿತು ನಡೆದ ಘಟನೆ ಸತ್ಯವನ್ನು ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ರ್ಯಾಲಿ ನಡೆಸಿ ಶಾಸಕಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಸರ್ಕಾರ ಗಡಿಭಾಗದಲ್ಲಿ ಶಿವಾಜಿ ಮಹಾರಾಜರ ಮೂರ್ತಿ …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು.
ಬೆಳಗಾವಿ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಾದ ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳಲ್ಲಿ ಬಹು ವೆಚ್ಚದಲ್ಲಿ ನಿರ್ಮಿಸಲಾದ ಬೀದಿ ದೀಪ ಗಳಿಗೆ ಕಾರ್ಚಿ ಅವರು ಚಾಲನೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಹಾಗೂ …
Read More »ಬೆಳಗಾವಿ | ನಿಂಬಾಳ್ಕರ್ ಟ್ವೀಟ್ಗೆ ಕರವೇ ಖಂಡನೆ
ಬೆಳಗಾವಿ: ‘ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಮಣಗುತ್ತಿ ಘಟನೆಯ ವಾಸ್ತವ ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಟೀಕಿಸಿದ್ದಾರೆ. ‘ಸಮಗ್ರ ಮಾಹಿತಿ ಪಡೆದು ಟ್ವೀಟ್ ಮಾಡಬೇಕಿತ್ತು. ಆ ಗ್ರಾಮದಲ್ಲಿ ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡಿಗರಿಂದ ಶಿವಾಜಿ ಪ್ರತಿಮೆಗೆ ಅವಮಾನವಾಗಿಲ್ಲ. ಪ್ರತಿಷ್ಠಾಪಿಸಿದರೆ ತೆರವುಗೊಳಿಸಿದ್ದಾರೆ. ಆದಾಗ್ಯೂ ಕರ್ನಾಟಕ ಸರ್ಕಾರ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ …
Read More »ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …
Read More »ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ಈ ಸೋಂಕಿನ ಕಾರಣದಿಂದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Read More »ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು. ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ …
Read More »ಶಿವಸೇನೆ ಷಡ್ಯಂತ್ರಕ್ಕೆ ಗ್ರಾಮಸ್ಥರ ಮಂಗಳಾರತಿ; ಮಣಗುತ್ತಿ ಶಿವಾಜಿ ಮೂರ್ತಿ ವಿವಾದ ಇತ್ಯರ್ಥ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …
Read More »ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಂಬಂಧಿಸಿದ ಪ್ರಕರಣ ವಿವಾದ ಅಂತ್ಯ ಕಂಡಿದೆ.
ಹುಕ್ಕೇರಿ: ಕಳೆದ ಮೂರ್ನಾಲ್ಕು ದಿನಗಳಿಂದ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಂಬಂಧಿಸಿದ ಪ್ರಕರಣ ವಿವಾದ ಅಂತ್ಯ ಕಂಡಿದೆ. ಮಣಗುತ್ತಿ, ಬೆನಕನಹೊಳಿ, ಬೋಳಶ್ಯಾನಟ್ಟಿ, ಸೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಸೋಮವಾರ ಸಭೆ ನಡೆಸಿ, ಮಣಗುತ್ತಿ ಗ್ರಾಮದಲ್ಲಿನ ಲಕ್ಷ್ಮಿ ಟ್ರಸ್ಟ್ ಜಾಗದಲ್ಲಿ ಶಿವಾಜಿ ಮೂರ್ತಿ ಸೇರಿ ಐದು ಪುತ್ಥಳಿ ನಿರ್ಮಾಣಕ್ಕೆ ತಿರ್ಮಾನ ಕೈಗೊಂಡಿದ್ದಾರೆ. ಮಣಗುತ್ತಿ ಗ್ರಾಮದಲ್ಲಿ ಅನಧಿಕೃತವಾಗಿ ಶಿವಾಜಿ ಮೂರ್ತಿ ಸ್ಥಳಾಂತರ ಮಾಡಿ, ತೆರವುಗೊಳಿಸಿದ ಹಿನ್ನೆಲೆ ಗ್ರಾಮದಲ್ಲಿ …
Read More »ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು. ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ. ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ …
Read More »
Laxmi News 24×7