ನೀವು ಪ್ಲಾಸ್ಟಿಕ್ ನಿಂದ, ಜಿಪ್ಸಮ್ (Plaster of Paris) ನಿಂದ, ಅಥವಾ ಬೇರೆ ಯಾವುದೋ ಕೆಮಿಕಲ್ಲಿನಿಂದ ಮಾಡಿದ ಗಣಪತಿಯನ್ನು ಪೂಜೆ ಮಾಡುವುದಾದರೆ, ಮಾಡುವದೇ ಬೇಡ. ಪರಿಸರ ರಕ್ಷಣೆ ಮಾಡಿದ ಮಹಾಪುಣ್ಯ ಬರುತ್ತದೆ ನಿಮಗೆ, ಆ ರೀತಿಯ ವಿಕಾರದ ಗಣಪತಿಗಳನ್ನು ಪೂಜೆ ಮಾಡದೇ ಇದ್ದರೆ. ಮುಂದಿನ ಜನಾಂಗಕ್ಕೆ ಉಸಿರು ಹಸಿರನ್ನು ಉಳಿಸಿಕೊಡುವದು ಸಾಮಾನ್ಯ ಪುಣ್ಯದ ಮಾತೇ? ಖಂಡಿತ ಅಲ್ಲ. ಹೀಗಾಗಿ ನೀವು ವಿಕೃತ ಗಣಪತಿಯ ಪೂಜೆ ಮಾಡುವದನ್ನು ಬಿಡುವುದರಿಂದ ದೊಡ್ಡ ಸಮಾಜಸೇವೆಯನ್ನು …
Read More »ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಬೆಳಗಾವಿ: ಕೋವಿಡ್ ನಿರ್ವಹಣೆಯಲ್ಲಿ ವಿಫಲ ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ …
Read More »ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿರುವ ತನಿಖಾಧಿಕಾರಿಗಳು
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಸುಮಾರು 2,063 ಪುಟಗಳ ದೋಷಾರೋಪ ಪಟ್ಟಿಯನ್ನು ಬೆಳಗಾವಿ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಚಲನಚಿತ್ರ ನಿರ್ದೇಶಕ ಆನಂದ ಅಪ್ಪುಗೋಳ್ ನೇತೃತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಗ್ರಾಹಕರಿಂದ ₹281.14 …
Read More »ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ
ಗೋಕಾಕ: ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣದಲ್ಲಿ ಕಡಿತವಾಗಿರುವದರಿಂದ ಘಟಪ್ರಭಾ ನದಿಯ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ. ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು. …
Read More »ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ:
ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …
Read More »ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ …
Read More »ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!
ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …
Read More »ನೆರೆ ಹಾಗೂ ಅತಿವೃಷ್ಟಿಯ ಪರಿಣಾಮ, 43,300 ಹೆಕ್ಟೇರ್ ಬೆಳೆ ‘ಆಹುತಿ’
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಮಂಗಳವಾರದವರೆಗೆ 43,300 ಹೆಕ್ಟೇರ್ ಬೆಳೆಗಳು ಮುಳುಗಿವೆ. 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಮಲಪ್ರಭಾ ನದಿಗಳಲ್ಲಿ ಮಹಾಪೂರ ಉಂಟಾಗಿದೆ. ತೀರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ನೀರು ವ್ಯಾಪಿಸಿದೆ. ಇದರೊಂದಿಗೆ ಬೆಳಗಾವಿ ತಾಲ್ಲೂಕಿನಲ್ಲಿ ಬಳ್ಳಾರಿ ನಾಲಾ ಪ್ರವಾಹವೂ ಉಂಟಾಗಿದೆ. ಇದರಿಂದಲೂ ಸಾವಿರಾರು ಎಕರೆ ವಿವಿಧ ಬೆಳೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಮುಂದುವರಿದಿದ್ದು, ಬೆಳೆಗಳ ಹಾನಿ …
Read More »ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Read More »ಗೋಕಾಕ್ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ
ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …
Read More »
Laxmi News 24×7