Breaking News

ಬೆಳಗಾವಿ

ಕೊರೊನಾ ಸೋಂಕಿತರಿಗಾಗಿ 110 ವೆಂಟಿಲೆಟರ್ :ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ

ಬೆಳಗಾವಿ: ಕೊರೊನಾ ಸೋಂಕಿತರ ಆಕ್ಸಿಜನ್ ಕೊರತೆಯಿಂದ ಸಾವೀಗಿಡಾಗುತ್ತಿರುವುದರಿಂದ ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿದ್ದು, ಜನರ ಮೆಚ್ಚುಗೆ ವ್ಯಕ್ತ ವಾಗುತ್ತಿದೆ. ನಗರದಲ್ಲಿ ಕೊರೊನಾ ಸೋಂಕಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಪಿ., ಶುಗರ್ ಕಾಯಿಲೆಯಿಂದ ಬಳಲುತ್ತಿರುವ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿದ್ದು, ಇದರಿಂದ ಸಮಸ್ಯೆ ಅರಿತ  ರಾಜು ಸೇಠ ವಿಶೇಷವಾದ ಸೌಲಭ್ಯವನ್ನು ಒದಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಅಂಜುಮನ್ ಹಾಲ್ ನಲ್ಲಿ 110 …

Read More »

ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’  ಎಂಬ  ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ‌ ಸಲಹೆ

ಬೆಳಗಾವಿ:  ಬೆಳಗಾವಿಯಲ್ಲಿ  ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು,  ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’  ಎಂಬ  ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ‌ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು  ಮಂತ್ರಿಗಳು ಎಷ್ಟು ಸಭೆ ನಡೆಸಬೇಕಾಗಿತ್ತೋ ಅಷ್ಟು ಮಾಡಿಲ್ಲ, ಜನರಿಗೆ ಸ್ಪಂದಿಸಿಲ್ಲ.  ಬಹಳಷ್ಟು ಮಂತ್ರಿಗಳು ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ. ತಮ್ಮ ಕ್ಷೇತ್ರಕ್ಕೂ ಬಂದಿಲ್ಲ, ತಮ್ಮ ಜಿಲ್ಲೆಗೂ ಬಂದಿಲ್ಲ ಇದೆಲ್ಲಾ ಜನರಿಗೂ ಗೊತ್ತು, ಜನ ತೀರ್ಮಾನ …

Read More »

ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ:ಸತೀಶ್ ಜಾರಕಿಹೊಳಿ‌

ಬೆಳಗಾವಿ:  ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್ ಜಾರಕಿಹೊಳಿ‌ ಹೇಳಿದರು. ಕೋವಿಡ್ ನಿರ್ವಹಣೆಗೆ ಕಾಂಗ್ರೆಸ್ ಕೊಡುಗೆ ಶುನ್ಯ ಎಂಬ ಸಚಿವ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಕೊಡುಗೆ ಏನಿದೆ ಎಂಬುದಕ್ಕೆ ಉದಾಹರಣೆ ನಾನೂ ಸೇರಿ ನಮ್ಮ ಶಾಸಕರೇ ಇದ್ದಾರೆ. ಕೆಪಿಸಿಸಿ ಕೊವಿಡ ನಿರ್ವಹಣೆಯಲ್ಲಿ ತೊಡಗಿಕೊಂಡಿದೆ. ಇದೆಲ್ಲ ಅವರು ಹೇಳುವುದು ಅವಶ್ಯಕತೆಯಿಲ್ಲ. …

Read More »

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ …

Read More »

ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!

ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ …

Read More »

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …

Read More »

ಕಳೆದ 24 ಗಂಟೆಗಳಿಂದ ನೀರು ಬರದೇ ರೋಗಿಗಳು ಪರದಾಟ:ಬೆಳಗಾವಿ ಬಿಮ್ಸ್ ರೋಗಿಗಳು

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗಾರವಾಗಿದ್ದು, ಕಳೆದ 24 ಗಂಟೆಗಳಿಂದ ನೀರು ಬರದೇ ರೋಗಿಗಳು ಪರದಾಡುತ್ತಿದ್ದಾರೆ. ರೋಗಿಗಳು ಶೌಚಕ್ಕೂ ಹೋಗಲಾರದೇ ನರಕ ಯಾತನೆ ಅನುಭವಿಸುಂತಾಗಿದೆ. ಸರಿ ಸುಮಾರು 40 ಕ್ಕೂ ಹೆಚ್ಚು ಗರ್ಭಿಣಿಯರು ಕೊರೊನಾ ಸೋಂಕಿನಿಂದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಸೇರಿ ಎರಡು ವಾರಗಳು ಕಳೆದುಹೊಗಿವೆ. ಆದರೆ ಈಗ ಸಿಬ್ಬಂದಿ ಇವರನ್ನು ಡಿಸ್ಚಾರ್ಜ ಮಾಡಲು ಮುಂದಾಗಿದ್ದಾತೆ. ನಿಮ್ಮ ಹತ್ತು ದಿನದ ಚಿಕಿತ್ಸೆ ಅವಧಿ ಮುಗಿದಿದ್ದು, ನಿಮ್ಮನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು …

Read More »

ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.

ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು  ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು. ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ  ನೆರೆವೇರಿಸಿದರು. ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು …

Read More »

ಕೊವಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ ಬೆಳಗಾವಿ ಆಸ್ಪತ್ರೆಯಲ್ಲಿ ಆರಂಭ

ಬೆಳಗಾವಿ, ಜುಲೈ 30: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಕೇಂದ್ರಗಳಲ್ಲಿ ಒಂದಾದ ಬೆಳಗಾವಿ ಮೂಲದ ಜೀವನ್ ರೇಖಾ ಆಸ್ಪತ್ರೆಯಲ್ಲಿ ಬಿಬಿವಿ 152 ಕೋವಿಡ್ -19 ಲಸಿಕೆ ಅಥವಾ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆಯಾದ ಕೊವಾಕ್ಸಿನ್‌ನ ಕ್ಲಿನಿಕಲ್ ಪರೀಕ್ಷೆಗಳು ಈಗಾಗಲೇ ಏಮ್ಸ್ ಸೇರಿದಂತೆ 12 ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ಜೀವನ್ ರೇಖಾ ನಿರ್ದೇಶಕ ಟಿ.ಎನ್.ಐ.ಇ ಅವರೊಂದಿಗೆ ಮಾತನಾಡಿದ ಡಾ.ಅಮಿತ್ ಭಾಟೆ, …

Read More »

ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ‌.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …

Read More »