ಬೆಳಗಾವಿ: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಕುಟುಂಬದಲ್ಲೇ ಟಿಕೆಟ್ಗಾಗಿ ಸ್ಪರ್ಧೆ ಇರುವುದರಿಂದ ಆಯಾ ಕುಟುಂಬದಲ್ಲೇ ಅವಕಾಶ ನೀಡಲಾಗಿದೆ. ಕುಟುಂಬ ರಾಜಕಾರಣ ನಮ್ಮ ಪಕ್ಷದಲ್ಲಿ ಮಾತ್ರವಲ್ಲ, ಎಲ್ಲ ಪಕ್ಷದಲ್ಲೂ, ಪಕ್ಕದ ರಾಜ್ಯದಲ್ಲೂ ಇದೆ. ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಚುನಾವಣೆಗೆ ನಿಲ್ಲಿಸಬೇಕಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಸಮರ್ಥಿಸಿಕೊಂಡರು. ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ನಿರೀಕ್ಷೆಯಂತೆ ಅಭ್ಯರ್ಥಿ ಆಯ್ಕೆಯಾಗಿದೆ. ಹಂತ-ಹಂತದಲ್ಲಿ ಚುನಾವಣೆ ಮಾಡುತ್ತೇವೆ. ಪಕ್ಷದೊಳಗಿನ ಗಲಾಟೆಗಳಿಂದ ನಮ್ಮಲ್ಲಿದ್ದ ಮೂರು …
Read More »ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 8 ಜನ ಆರೋಪಿಗಳ ವಿರುದ್ಧ ಪ್ರಕರಣ
ಬೆಳಗಾವಿ: ದೇಶದ ವಿವಿಧೆಡೆ ನಡೆದ ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 1,400 ಬ್ಯಾಂಕ್ ಖಾತೆಗಳು ಕೆಲಸ ಮಾಡಿರುವ ಬಗ್ಗೆ ಸಂಶಯವಿದ್ದು, ಈ ಸಂಬಂಧಿತ ತನಿಖೆಯ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 8 ಜನ ಆರೋಪಿಗಳ 24 ಮ್ಯೂಲ್ ಅಕೌಂಟ್ಗಳಿಂದ 1,02,66,928ರೂ. ವ್ಯವಹಾರ ನಡೆದಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ನಗರದ ಸಿಸಿಪಿಎಸ್ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಪ್ಪಾಣಿಯ ಶುಭಂ ಲಕ್ಕನ್ನವರ, ಅಮಿತ ಶಿಂಧೆ, ರಾಹುಲ …
Read More »ಟ್ರಾನ್ಸ್ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ-2026ನ್ನು ವಿರೋಧಿಸಿ ನಗರದಲ್ಲಿ ಸೋಮವಾರ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ, ಕೆಲಹೊತ್ತು ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಪ್ರತಿಭಟನಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಪತ್ರ ಸಲ್ಲಿಸಿದರು. ತಿದ್ದುಪಡಿ ಮಸೂದೆ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಗಳ ಗೌರವಕ್ಕೆ ಹಾನಿ ಮಾಡುವಂತಿದೆ. ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಸ್ವಯಂ ನಿರ್ಣಯದ …
Read More »ಸೂಕ್ತ ಸಂಗಾತಿ ಆಯ್ಕೆ ದಾಂಪತ್ಯ ಬುದಕಿಗೆ ಮುಖ್ಯ
ಬೆಳಗಾವಿ: ದಾಂಪತ್ಯ ಜೀವನ ಬುದಕಿಗೆ ಬಹುದೊಡ್ಡದು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಚತುರ್ವಿಧ ಪುರುಷಾರ್ಥಗಳಲ್ಲಿ ಬಹು ಮುಖ್ಯವೆನಿಸಿದೆ. ಇವುಗಳನ್ನು ಈಡೇರಿಸಿಕೊಳ್ಳುವುದು ಜೀವನದ ಕರ್ತವ್ಯವೆನಿಸಿದೆ. ಹಾಗಾಗಿ ಸೂಕ್ತ ಸಂಗಾತಿ ಆಯ್ಕೆ ಬಹು ಮುಖ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರದ ಅಧ್ಯಕ್ಷ ಡಾ.ಎಫ್.ವಿ.ಮಾನ್ವಿ ಹೇಳಿದರು. ನಗರದ ಜೆಎನ್ಎಂಸಿ ಜೀರಿಗೆ ಸಭಾಂಗಣದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರ ಹಾಗೂ ಕೆಎಲ್ಇ …
Read More »ನಿಯಮಬಾಹಿರ ಹಸಿ ಮೆಣಸಿನಕಾಯಿ ಖರೀದಿ ವ್ಯಾಪಾರ ತಡೆಗೆ ಅಗ್ರಹ
ಬೆಳಗಾವಿ: ಜಿಲ್ಲೆಯ ಖಾನಾಪುರ, ಕಿತ್ತೂರ ಮತ್ತು ಬೈಲಹೊಂಗಲ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಕೆಲವು ಖಾಸಗಿ ವ್ಯಾಪಾರಿಗಳು ನಿಯಮಬಾಹಿರವಾಗಿ ಹಸಿ ಮೆಣಸಿನಕಾಯಿ ಖರೀದಿ ವ್ಯಾಪಾರ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಆಗ್ರಹಿಸಿದೆ. ಈ ಸಂಬಂಧ ಮಹಾಸಂಘದಿಂದ ಜಿಲ್ಲಾಧಿಕಾರಿ, ಎಪಿಎಂಸಿ ಕಾರ್ಯದರ್ಶಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಸಿ ಮೆಣಸಿನಕಾಯಿ ಬೆಳೆಯ್ತುತಾರೆ. ಮೊದಲು …
Read More »ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು
ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ಚರ್ಚೆಯ ಪ್ರಮುಖಾಂಶಗಳು: 🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …
Read More »ಛತ್ರಪತಿ ಶಿವಾಜಿ ಜೀವನ ಇಂದಿಗೂ ರಣಾದಾಯಕ
ಬೆಳಗಾವಿ : “ಈ ದೇಶದಲ್ಲಿ ಛತ್ರಪತಿ ಶಿವರಾಯರು ಜನಿಸಿದ ಸಮಯದಲ್ಲಿ ಭಾರತದ ಪರಿಸ್ಥಿತಿ ಅತ್ಯಂತ ಸಂಕಷ್ಟಕರವಾಗಿತ್ತು. ಧರ್ಮವಿರೋಧಿ, ಶಾಸ್ತ್ರವಿರೋಧಿ, ನೀತಿವಿರೋಧಿ ಕಾರ್ಯಗಳನ್ನು ನಡೆಸುತ್ತಿದ್ದ ಅನೇಕರು ಇದ್ದ ಸಂದರ್ಭದಲ್ಲಿ ಶಿವರಾಯರು ಜನಿಸಿದರು. ರಾಜನು ಹೇಗಿರಬೇಕು ಎಂಬುದನ್ನು ಛತ್ರಪತಿ ಶಿವಾಜಿ ಮಹಾರಾಜರ ಜೀವನದಿಂದ ಕಲಿಯಬಹುದು. ಅವರಿಗೆ ಕಳೆದಿದ್ದು ಸುತ್ತಮುತ್ತ ಮೂರುನೂರು ಐವತ್ತು ವರ್ಷಗಳಾದರೂ ಇಂದಿಗೂ ಅವರ ಜೀವನ ಪ್ರೇರಣಾದಾಯಕವಾಗಿದೆ. ಇಂತಹ ನಿರ್ಮಲ ಚರಿತ್ರೆಯ ರಾಜನ ಜೀವನದ ಮೇಲೆ ಈ ಪುಸ್ತಕಗಳನ್ನು ಪ್ರಕಟಿಸುವ ಮೂಲಕ …
Read More »ಬೆಳಗಾವಿ: ಕ್ರಿಕೆಟ್ ಬ್ಯಾಟ್ಗೆ ಜಮಾಯಿಸಿದ್ದ ಹಣದಲ್ಲಿ ಸ್ಮಶಾನಕ್ಕೆ ಸೌದೆ ದಾನ; ಬಾಲಕಿಯ ಅಪ್ರತಿಮ ಮಾನವೀಯತೆಗೆ ಸಲಾಂ!
ಸಾವಿನ ಮನೆಯಲ್ಲೂ ಮಾನವೀಯತೆಯ ಹಣತೆ ಬೆಳಗಿದ ಘಟನೆಯೊಂದು ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ನಡೆದಿದೆ. ತನ್ನ ಆಸೆಯ ಕ್ರಿಕೆಟ್ ಬ್ಯಾಟ್ ಖರೀದಿಸಲು ಕೂಡಿಟ್ಟಿದ್ದ ಹಣವನ್ನು ಸ್ಮಶಾನದ ಕಾರ್ಯಕ್ಕೆ ನೀಡಿ ಪುಟ್ಟ ಬಾಲಕಿ ನಿಧಿ ಪಾಟಿಲ್ ಎಲ್ಲರ ಕಣ್ಣಾಲಿಗಳು ತೇವವಾಗುವಂತೆ ಮಾಡಿದ್ದಾಳೆ. ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅತ್ಯಗತ್ಯವಾಗಿ ಬೇಕಾಗುವ ಬೆರಣಿಗಳನ್ನು ದಾನ ಮಾಡುವ ಮೂಲಕ ಸಮಾಜ ಸೇವಕರು ಗಮನ ಸೆಳೆದಿದ್ದಾರೆ. ಸಮಾಜ ಸೇವಕರಾದ ಗಂಗಾಧರ್ ಪಾಟಿಲ್ ಮತ್ತು ಆಲನ್ …
Read More »ಹೊಸ ಜಾಹೀರಾತು ನೀತಿಗೆ ಸಂಪಾದಕರ ಸಂಘದ ವಿರೋಧ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ
ರಾಜ್ಯ ಸರ್ಕಾರದ ಹೊಸ ‘ಜಾಹೀರಾತು ನೀತಿ-2026’ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಅಸ್ತಿತ್ವಕ್ಕೆ ಮಾರಕವಾಗಿದೆ ಎಂದು ಬೆಳಗಾವಿ ಜಿಲ್ಲಾ ಸಂಪಾದಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿರುವ ಸಂಘವು, ಕಠಿಣ ನಿಯಮಗಳನ್ನು ಕೂಡಲೇ ಸರಳಗೊಳಿಸುವಂತೆ ಆಗ್ರಹಿಸಿದೆ. ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಸಂಪಾದಕರ ಸಂಘದ ನಿಯೋಗ, ಹೊಸ ನೀತಿಯಲ್ಲಿನ ಅವೈಜ್ಞಾನಿಕ ನಿಯಮಗಳ ಬಗ್ಗೆ ಸುದೀರ್ಘ ಚರ್ಚೆ …
Read More »
Laxmi News 24×7