ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ. ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ. ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …
Read More »ಕೊರೊನಾ ಅನ್ಲಾಕ್ 3 – ಯಾವುದು ಲಾಕ್? ಯಾವುದು ಅನ್ಲಾಕ್?
ನವದೆಹಲಿ: ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ವೇಳೆಯೇ ದೇಶದಲ್ಲಿ ಅನ್ಲಾಕ್ 2.0 ಮುಗಿಯುವ ಹಂತಕ್ಕೆ ಬಂದಿದೆ. ಜೂನ್ನಲ್ಲಿ ಶುರುವಾದ ಅನ್ಲಾಕ್ ಪ್ರಕ್ರಿಯೆಯ 2ನೇ ಹಂತ ಮುಗಿಯಲು ಇನ್ನೈದು ದಿನ ಬಾಕಿ ಇದೆ. ಆಗಸ್ಟ್ ಒಂದರಿಂದ 3ನೇ ಹಂತದ ಅನ್ಲಾಕ್ ನಿಯಮ ಜಾರಿಗೆ ಬರಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಇದರಲ್ಲಿ ಕರ್ನಾಟಕದ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಸೋಂಕು ಹೆಚ್ಚಳವಾಗ್ತಿದ್ರೂ ಆಗಸ್ಟ್ನಿಂದ ಮತ್ತಷ್ಟು ವಿನಾಯಿತಿ ನೀಡುವ ಸಾಧ್ಯತೆಗಳಿವೆ. …
Read More »ಆಸ್ಪತ್ರೆಯಲ್ಲಿ OXYGEN ಸಿಲಿಂಡರ್,ಸೈನಿಟೈಸರ್ ಟಕ್ಕರ್ ಭುಗಿಲೆದ್ದ ಬೆಂಕಿ
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಬದಲಾವಣೆ ಮಾಡುವ ಸಂಧರ್ಭದಲ್ಲಿ ಸಿಲಿಂಡರ್ ಗ್ಯಾಸ್ ಮತ್ತು ಸೈನಿಟೈಸರ್ ಮಿಲನವಾಗಿ ಆಕಸ್ಮಿಕವಾಗಿ ಭುಗಿಲೆದ್ದ ಬೆಂಕಿಗೆ ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಎಮರ್ಜನ್ಸೀ ವಾರ್ಡಿನಲ್ಲಿ ಸಿಲಿಂಡರ್ ಬದಲಾವಣೆ ಮಾಡುವಾಗ ಗ್ಯಾಸ್ ಲೀಕ್ ಆಗಿದೆ ,ಲೀಕ್ ಗ್ಯಾಸ್ ಮತ್ತು ಸೈನಿಟೈಸರ್ ಮಿಕ್ಸ್ ಆಗಿ ಬೆಂಕಿ ಕಾಣಿಸಿಕೊಂಡಿದೆ.ಅದೇ ವಾರ್ಡಿನಲ್ಲಿದ್ದ ಓರ್ವ ನರ್ಸ ಮತ್ತು ಡಾಕ್ಟರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಘಟನೆ ನಡೆಯುತ್ತಿದ್ದಂತೆಯೇ ಸಿಲಿಂಡರ್ ಸ್ಪೋಟವಾಗಿದೆ …
Read More »ಬೆಳಗಾವಿ ಸುವರ್ಣ ಸೌಧ ಕೋವಿಡ ಕೆರ ಸೆಂಟರ್ ಮಾಡ್ತಾರಾ..?
ಬೆಳಗಾವಿ: ಅತಿದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿದಿನ ನೂರಾರು ಸೋಂಕಿತರು ಬೆಳಗಾವಿ ಪತ್ತೆಯಾಗುತ್ತಿದ್ದಾರೆ ಸರ್ಕಾರ,ವಸತಿ ಶಾಲೆ,ಹಾಸ್ಟೇಲ್ ಗಳಲ್ಲಿ ಬೆಡ್ ವ್ಯೆವಸ್ಥೆ ಮಾಡುವದರ ಬದಲಾಗಿ ಬೆಳಗಾವಿಯ ಸುವರ್ಣ ಸೌಧವನ್ನು ತಾತ್ಕಾಲಿಕವಾಗಿ ಕೋವೀಡ್ ಕೇರ್ ಸೆಂಟರ್ ಮಾಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹನುಮಣ್ಣವರ ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಆಸ್ಪತ್ರೆ ಹೊರತು ಪಡಿಸಿ ಬೇರೆ ಕಡೆಗೆ ಕೋವೀಡ್ ಕೇರ್ ಸೆಂಟರ್ ತೆರೆಯಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರಾರು ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಒಂದೇ ಸ್ಥಳದಲ್ಲಿ ಚಿಕಿತ್ಸೆಯ ವ್ಯೆವಸ್ಥೆ …
Read More »ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ
ಬೆಳಗಾವಿ : ಕೊರೊನಾ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಕುಂದಾನಗರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಸರ್ಕಾರಿ, ಖಾಸಗಿ ಸಾರಿಗೆ ವ್ಯವಸ್ಥೆ ಸ್ತಬ್ಧವಾಗಿದೆ. ಇನ್ನು ಅನಾವಶ್ಯಕತವಾಗಿ ತಿರುಗಾಡುವವರನ್ನು ತಡೆದು ಪೊಲೀಸರು ಬುದ್ದಿವಾತ್ತಿದ್ದಾರೆ.. ನಗರದ ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಎಪಿಎಂಸಿ ಮಾರ್ಕೇಟ್, ಖಡೇಬಜಾರ, ಬಸ್ ನಿಲ್ದಾಣಗಳಲ್ಲಿ ಸಂಪೂರ್ಣ ಸ್ಥಬ್ಧವಾಗಿವೆ. ಅಗತ್ಯ ಸೇವೆ ಹೊರತು ಪಡೆಸಿ …
Read More »ಪ್ರತಿದಿನ ಒಂದೊಂದು ವಿವಾದದಲ್ಲಿ ಬೆಳಗಾವಿ B.I.M.S.ಆಸ್ಪತ್ರೆಉಪಯೋಗಿಸಿದ ಪಿಪಿಟಿ ಕಿಟ್ ಬೇಕಾಬಿಟ್ಟಿ ಬಿಸಾಡಿದ ದೃಶ್ಯ
ಬೆಳಗಾವಿ: ಕೊರೊನಾ ಚಿಕಿತ್ಸೆಗೆ ಉಪಯೋಗಿಸಿದ ಪಿಪಿಟಿ ಕಿಟ್ ಸೇರಿದಂತೆ ಮೆಡಿಕಲ್ ವೆಸ್ಟ್ ನ್ನು ಬೇಕಾಬಿಟ್ಟಿ ಬಿಸಾಡಿದ ದೃಶ್ಯ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಹಿಂಬಾಗ ಕಂಡು ಬಂದಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ಕಶದ ಡಬ್ಬಿಯಲ್ಲಿ ರಾಶಿ ರಾಶಿ ಮೆಡಿ ವೆಸ್ಟ್ ವಸ್ತುಗಳನ್ನು ಬೀಸಾಡಲಾಗಿದೆ. ಕೊರೊನಾ ಮೆಡಿಕಲ್ ವೇಸ್ಟ್ ಸಾರ್ವಜನಿಕವಾಗಿ ಬೀಸಾಕದೇ ನಾಶಪಡಿಸಬೇಕೆಂಬ ನಿಯಮವಿದೆ. ಆದ್ರೆ ಅದನ್ನು ಗಾಳಿಗೆ ತೂರಿದ ಬಿಮ್ಸ್ ಸಿಬ್ಬಂದಿ, ಪಿಪಿಇ ಕಿಟ್, ಹ್ಯಾಂಡ್ ಗ್ಲೌಸ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಬಿಸಾಕಿದ್ದಾರೆ. …
Read More »ಏರುತ್ತಲೇ ಇದೆ ಡೀಸೆಲ್ ಬೆಲೆ..
ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ …
Read More »ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ
ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆಯಂಬುಲೆನ್ಸ್ …
Read More »ಅಥಣಿ: ಕೇಂದ್ರದ ಹಣ ಲೂಟಿ ಹೊಡೆಯುವ ಯತ್ನ; ಆರೋಪ
ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್ ನೀಡಿದರೆ, ಮರುದಿನವೇ ನೆಗೆಟಿವ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …
Read More »