Breaking News
Home / ಜಿಲ್ಲೆ / ಬೆಳಗಾವಿ (page 51)

ಬೆಳಗಾವಿ

ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’

ಬೆಳಗಾವಿ: ‘ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆ ಮಾಡುವಾಗ, ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟರು.   ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ನಡೆದ ಲಿಂಗಾಯತ ಸಂಘಟನೆಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು‌. …

Read More »

ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಸ್ಮಶಾನ ದಲ್ಲೇ ಚಾಲನೆ‌: ಸತೀಶ ಜಾರಕಿಹೊಳಿ

ಬೆಳಗಾವಿ: ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎ.13ರಿಂದ 20ರ ಮಧ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ. ಇದು ಕೆಟ್ಟದ್ದು ಅಂತ ಯಾರು ಹೇಳುತ್ತಾರೆ. ಇದು ನಮ್ಮ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಬಸವಣ್ಣನವರು, ಡಾ|ಬಾಬಾಸಾಹೇಬ ಅಂಬೇಡ್ಕರ್‌, ಬುದ್ಧ ತೋರಿಸಿದ ದಾರಿಯಲ್ಲಿ ನಡೆಯುತ್ತಿದ್ದೇವೆ. ಮೊದಲಿನಿಂದಲೂ ಈ ಸತ್ಯದ …

Read More »

ಅತ್ತ ಮಾಡಾಳ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆ, ಭಾರಿ ಚರ್ಚೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಸಿಎಂ …

Read More »

SSLC ಪರೀಕ್ಷೆಗೆ910 ವಿದ್ಯಾರ್ಥಿಗಳು ಗೈರು

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು. 536 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು. …

Read More »

ಮೂಡಲಗಿ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಅಪಘಾತಕ್ಕೆ ನವದಂಪತಿ ಬಲಿ

ಮೂಡಲಗಿ :  ಬೆಳಗಾವಿ ಜಿಲ್ಲೆಯ  ಮೂಡಲಗಿ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ತಾಲೂಕಿನ ಹಳ್ಳೂರ ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ವಿವಾಹವಾಗಿ 10 ನೇ ದಿನಕ್ಕೆ ನವ ದಂಪತಿ ಮೃತರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಇಂದ್ರಜೀತ್ ಮೋಹನ ಡಮ್ಮಣಗಿ (27) ಹಾಗೂ ಕಲ್ಯಾಣಿ ಮೋಹನ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ …

Read More »

ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು 3 ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ. ದಂಡಿನ ಮಾರ್ಗ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ಅಥಣಿಯಲ್ಲಿ ಲಕ್ಷಣ ಸವದಿ v/s ರಮೇಶ್‌ ಜಾರಕಿಹೊಳಿ ಫೈಟ್;‌ ಹೈಕಮಾಂಡ್‌ ಹೇಳಿದ್ದಂತೆ ಎಲ್ಲರು ಕೇಳಬೇಕು; ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಣ ಸವದಿ ಮತ್ತು ರಮೇಶ್‌ ಜಾರಕಿಹೊಳಿ ನಡುವೆ ಫೈಟ್‌ ಶುರುವಾಗಿದೆ. ಈ ವಿಚಾರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್‌ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಆದರೆ ಟಿಕೆಟ್‌ ಹಂಚಿಕೆ ಆದ್ಮೇಲೆ ಅಸಮಾಧಾನ ಉಂಟಾಗುವುದು. ಸಹಜ. ಆದರೆ ಇದಲ್ಲವನ್ನೂ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ

ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ.                     ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಮೆರವಣಿಗೆ ಶಿವಸೇನೆ ಕಚೇರಿ ಎದುರಿನಿಂದ ಹಾದು ಹೋಗುತ್ತಿದ್ದ ವೇಳೆ ಕೈಯ್ಯಲ್ಲಿ ಕನ್ನಡ ಬಾವುಟ ಹಿಡಿದಿದ್ದ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದರಿಂದಾಗಿ ಕನ್ನಡಿಗ ಯುವಕನ ಬೆನ್ನು, ಹೊಟ್ಟೆಗೆ ತೀವ್ರ ಗಾಯಗಳಾಗಿವೆ. …

Read More »