Breaking News

ಬೆಳಗಾವಿ

ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ

ಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆಗ ಮುಖ್ಯವಾಗಿ ಶಾಲಾ ಮಕ್ಕಳು ಶಾಲೆಗೆ ಹೋಗುವ ಸಮಯದಲಿ. ಶಾಲೆ ಬಿಡುವ ಸಮಯದಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಕ್ಕೆ ಹೋಗುವಾಗ ಬರುವಾಗ ಭಾರಿ …

Read More »

ಬೆಳಗಾವಿಯಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ: ಯುವ ಸಮಿತಿ ಮಹಿಳಾ ಘಟಕದಿಂದ ಅದ್ದೂರಿ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

ಮಹಿಳಾ ಸಬಲೀಕರಣ ಮತ್ತು ಸಂಘಟನೆಯ ಉದ್ದೇಶದೊಂದಿಗೆ, ಬೆಳಗಾವಿಯ ಕಾವಳೆ ಸಂಕುಲದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ಸಾಧಕ ಮಹಿಳೆಯರಿಗೆ ಗೌರವ ಸಮರ್ಪಣೆ ಹಾಗೂ ಅರಿಶಿನ-ಕುಂಕುಮ ಕಾರ್ಯಕ್ರಮ ಜರುಗಿತು. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ರಾಜಮಾತಾ ಜಿಜಾವು, ಛತ್ರಪತಿ ಶಿವಾಜಿ ಮಹಾರಾಜ್’ರ ಹಾಗೂ ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಪಡೆಯಿತು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ವೇತಾ …

Read More »

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು

ಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ವೀಕೆಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಅಂಡ್ ಅಜ್ಮಿ ಮಿಶಿನ್ ನಾಮಕರಣ ಮಾಡಿ ಬಿಲ್ ಪಾಸ್ ಮಾಡಿರುವ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಹನುಮಂತ ಕಲ್ಲಪ್ಪ ಶೇಖನೂರ್ ಪಂಚಾಯತ್ ಸ್ವರಾಜ್ ಸಮಾಚಾರ್ ಜೊತೆಗೆ ಮಾತನಾಡಿ ಕೇಂದ್ರ ಸರ್ಕಾರ ಯಾರಿಗೂ ಹೇಳದೆ …

Read More »

ಗೂಡಂಗಡಿಗಳ ಸ್ವಚ್ಛತೆಗೆ ಮಹಾಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಖಡಕ್ ಸೂಚನೆ

ಬೆಳಗಾವಿ: ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಪಾಲಿಕೆಯ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಸೂಚನೆ ನೀಡಿದರು‌. ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಕ್ರಮ‌ ಕೈಗೊಳ್ಳಬೇಕು. ಖೋಕಾ ಅಂಗಡಿಯಲ್ಲಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆಯಿಂದ ಮಾಡಬೇಕು ಎಂದರು. ನಗರದಲ್ಲಿರುವ ಬಡಾವಣೆಗಳಲ್ಲಿ …

Read More »

ಕ್ಯಾಂಪ್ ಪ್ರದೇಶದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

ಬೆಳಗಾವಿ ಕ್ಯಾಂಪ್ ಪ್ರದೇಶದ ಜನರ ದಶಕಗಳ ಕನಸು ನನಸಾಗುವ ಕಾಲ ಹತ್ತಿರವಾಗಿದ್ದು, ಶಾಸಕ ಆಸೀಫ್ ಸೇಠ್ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು, ಗುಣಮಟ್ಟದ ಕೆಲಸಕ್ಕೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ನಿವಾಸಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕ್ಯಾಂಪ್ ಪ್ರದೇಶದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. …

Read More »

ಕೋಣದ ಬರ್ತ್‌ಡೇಗೆ 300 ಜನಕ್ಕೆ ಊಟ, 10 ಕೇಜಿ ಕೇಕ್,ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಅಪರೂಪದ ಆಚರಣೆ

ಮನೆ ಮಗನಂತೆ ಬೆಳೆಸಿದ ಕೋಣದ ಒಂದು ವರ್ಷದ ಜನ್ಮದಿನ ಆಚರಿಸುವ ಮೂಲಕ ಚಿಕ್ಕಲವಾಳ ಗ್ರಾಮದ ಯುವಕ ಮಾದರಿಯಾಗಿದ್ದಾನೆ. ಗ್ರಾಮದ ಕೂಲಿಕಾರ ಸಂಜಯ ರಾಮಚಂದ್ರ ಸಠಾಲೆ(30) ಮನೆಯಲ್ಲಿ ಐದು ಎಮ್ಮೆಗಳನ್ನು ಸಾಕಿದ್ದಾರೆ. ಕಬ್ಬು ಕಟಾವು ಹಂಗಾಮಿನಲ್ಲಿ ಕೂಲಿ ಕಾರ್ಮಿಕನಾಗಿ ಕಾರ್ಯ ಮಾಡುವ ಇವರಿಗೆ ಇರುವುದು ಕೇವಲ 10 ಗುಂಟೆ ಜಮೀನು ಮಾತ್ರ. ಬೇರೆಯವರ ಜಮೀನಿನಿಂದ ಎಮ್ಮೆಗಳಿಗೆ ಮೇವು ತಂದು ಸಲಹುತ್ತಾರೆ. ಗುಜರಾತಿನ ಮುರ್ರಾ ಜಾತಿ ಎಮ್ಮೆಗಳನ್ನು ಸಾಕಿರುವ ಇವರು ಒಂದು ಎಮ್ಮೆಗೆ …

Read More »

ರಂಕಾರಿ ಸತ್ಸಂಗ ಮನೆ ಮನೆಗೆ ತಲುಪಿಸಿ – ಜ್ಞಾನ ಪ್ರಚಾರಕ ಮಾರುತಿ ಮೊರೆ.

ನಿರಂಕಾರಿ ಮಂಡಳಿಯ ಸತ್ಸಂಗ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹುಕ್ಕೇರಿ ಸಂತ ನಿರಂಕಾರಿ ಸತ್ಸಂಗ ಮಂಡಳಿ ಜ್ಞಾನ ಪ್ರಚಾರಕ ಮತ್ತು ಸಂಯೋಜಕ ಮಾರುತಿ ಮೊರೆ ಹೇಳಿದರು. ಹುಕ್ಕೇರಿ ನಗರದ ಸಂತ ನಿರಂಕಾರಿ ಮಂಡಳಿಯ ವತಿಯಿಂದ ಮಾತಾ ಸುನಿತಾ ಮೊರೆ ಇವರ ಶ್ರದ್ದಾಂಜಲಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಕರ್ನಾಟಕ ಜೋನಲ್ ಇನ್ ಚಾರ್ಜ ಸುನೀಲ್ ಕುಮಾರ ರಾತ್ರಾಜಿ ಮಾತನಾಡಿ ಮನುಷ್ಯನ ಜಿವಿತಾವಧಿಯಲ್ಲಿ ಇನ್ನೊಬ್ಬರಿಗೆ ಸಹಾಯ ಸಹಕಾರ ಮತ್ತು ಸತ್ಸಂಗ …

Read More »

ಬೆಳಗಾವಿ: ಚೋರ್ಲಾ ಘಾಟ್ 400 ಕೋಟಿ ದರೋಡೆ ಪ್ರಕರಣದ ಆರೋಪಿ ಅರೆಸ್ಟ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋ‌ರ್ ಸಾಳ್ವೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದ ಕಿಶೋ‌ರ್ ಸಾಳ್ವೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸುವಂತೆ ಸೂಚನೆ ໖໖. …

Read More »

ಬುಡಾ ವಿರುದ್ಧ ವಿಜಯಕುಮಾರ್ ಪಾಟೀಲ್ ಆಕ್ರೋಶ: ಫೆ. 28 ರೊಳಗೆ ಲೇಔಟ್ ಬಿಡುಗಡೆಗೆ ಗಡುವು

ಕಳೆದ ಇಪ್ಪತ್ತು ವರ್ಷಗಳಿಂದ ಬುಡಾದಿಂದ ಯಾವುದೇ ಲೇಔಟ್ ನಿರ್ಮಾಣವಾಗಿಲ್ಲ ಎಂದು ವಿಜಯಕುಮಾರ್ ಪಾಟೀಲ ಆರೋಪಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಗುಂಟೆ ದರ ಲಕ್ಷಾಂತರ ರೂಪಾಯಿ ತಗಲುತ್ತಿದ್ದು, ಸಾರ್ವಜನಿಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.ಮಾಸ್ಟರ್ ಪ್ಲಾನ್ ಹೆಸರಿನಲ್ಲಿ ಒಂದೂ ಲೇಔಟ್ ನಿರ್ಮಿಸದೆ ಬುಡಾ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಈ ಸಂಬಂಧ …

Read More »

ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಪ್ರತಿಮೆ ಅನಾವರಣಗೊಳಿಸಿದ ಯುವ ನಟ ವಿನಯ್ ರಾಜ್‍ಕುಮಾರ್

ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್‍ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು. ಪುನೀತ್ …

Read More »