ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …
Read More »ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ
ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ ಇಡೀ ಪ್ರಪಂಚಕ್ಕೆ ಮಹಾಮಾರಿಯಾಗಿ ಒಕ್ಕರಿಸಿ ಮಾನವಕುಲಕ್ಕೆ ಕಂಠಕ ತಂದಿರುವ ಕೋವಿಡ್ -19ರ ವಿರುದ್ಧ ವೈದ್ಯಲೋಕ ಸೇರಿದಂತೆ ಪೊಲೀಸ್ ವ್ಯವಸ್ಥೆ, ಸಾಮಾಜಿಕ ಕಾರ್ಯಕರ್ತರು, ಸರಕಾರ, ಅಧಿಕಾರಿಗಳು ಸಮರ ಸಾರಿದ್ದಾರೆ. ಕೊರಾನು ವೈರಾಣು ವಿರುದ್ಧ ಎದುರಿಗೆ ನಿಂತು ಹೋರಾಟ ನಡೆಸುವ ವೈದ್ಯಲೋಕದ ಸಾಹಸ ಅದ್ಭತವಾದದ್ದು. ಅಂಥ ವೈದ್ಯಲೋಕದ ಅನುಪಮ ಸೇವೆಯನ್ನು ಸ್ಮರಿಸಿ ಗೌರವಿಸುವ ಮಹತ್ ಕಾರ್ಯವನ್ನು ವೈರಿಗಳನ್ನು ಸದೆಬಡೆದು ದೇಶಕಾಯುವ ಸೈನಿಕ …
Read More »ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಅವಕಾಶ..
ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ …
Read More »11 ಟೈರ್ ಟ್ಯೂಬ್ನಲ್ಲಿ ಸಾಗಿಸುತ್ತಿದ್ದ 330 ಲೀಟರ್ ಕಳ್ಳಭಟ್ಟಿ ವಶ………
ಚಿಕ್ಕೋಡಿ/ಬೆಳಗಾವಿ: ಕೊರೊನಾದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದ ಕಾರಣ ಕಳ್ಳ ಭಟ್ಟಿ ದಂಧೆಗೆ ಕಡಿವಾಣ ಹಾಕಲು ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ. ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ …
Read More »ಕೋವಿಡ್-೧೯: ಐವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಮೇ 2 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಐವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ-283 ಬಿಡುಗಡೆ ಹೊಂದಿರುತ್ತಾರೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 …
Read More »ಹೊರಗಿನಿಂದ ನಗರಕ್ಕೆ ಯಾರೆ ಬಂದರೆ ಸ್ಥಳಿಯ ಪ್ರಾಧಿಕಾರ, ಪೊಲೀಸ ಇಲಾಖೆಗೆ ಮಾಹಿತಿ ನೀಡಿ : ಪ್ರಕಾಶ ಹೋಳೆಪ್ಪಗೋಳ
ಗೋಕಾಕ:ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಂದ ಯಾರೆ ನಗರಕ್ಕೆ ಬಂದರೆ ಅಂತವರ ಬಗ್ಗೆ ತಾಲೂಕಾ ಆಡಳಿತಕ್ಕೆ ಅಥವಾ ಪೊಲೀಸ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕೆಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಕೋರಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ಹಾಗೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ವೈದ್ಯಕೀಯ ತಪಾಸಣೆಯೊಂದಿಗೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ವಲಸೆ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಹಲವರು ಅನುಮತಿ …
Read More »ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್ಗಳ ವಿತರಣೆ
ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸಿ ಮಾತನಾಡಿದರು. 1992 ರಿಂದ …
Read More »ಹುತಾತ್ಮ ಯೋಧನಿಗೆ ಸೇನಾ ಅಧಿಕಾರಿಗಳು ಸರ್ಕಾರಿ ಗೌರವ ಸಲ್ಲಿಸಿದ್ರು.
ಬೆಳಗಾವಿ: ಅನಾರೋಗ್ಯದಿಂದ ಸಾವನ್ನಪ್ಪಿದ್ದ ಯೋಧನ ಪಾರ್ಥೀವ ಶರೀರವನ್ನ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟಗಿ ಬೆನ್ನೂರು ಗ್ರಾಮದ, ಹುತಾತ್ಮ ಯೋಧ ಸುರೇಶ್ ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಪಾರ್ಥೀವ ಶರೀರವನ್ನ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಯಿತು. ಸಿಆರ್ಪಿಎಫ್ 71 ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸುರೇಶ್ ಪಾರ್ಥೀವ ಶರೀರವನ್ನು ಅಗರ್ತಲಾದಿಂದ ವಿಶೇಷ ವಿಮಾನ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ …
Read More »ಬಾಲಚಂದ್ರ ಜಾರಕಿಹೊಳಿಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದಅಶೋಕ ಪಾಟೀಲ
ಘಟಪ್ರಭಾ : ಅರಭಾವಿ ಕ್ಷೇತ್ರದ ಒಟ್ಟು ೭೬ ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸಿ ಮಾತನಾಡಿದರು. …
Read More »ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ ಕಿಟ್ ವಿತರಿಸಲಾಯಿತು.
ಕಿತ್ತೂರು (ಅಂಬಡಗಟ್ಟಿ): ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಮಾಜ ಸೇವಕ ಹಬೀಬ ಶಿಲ್ಲೇದಾರ ಅವರ ನೇತೃತ್ವದಲ್ಲಿ ಕಿತ್ತೂರ ಮತ ಕ್ಷೇತ್ರದ ಮುಸ್ಲಿಂ ಸಮುದಾಯದವರಿಗೆ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ ಕಿಟ್ ವಿತರಿಸಲಾಯಿತು. ಇಲ್ಲಿನ ಶ್ರೀ ಸತೀಶಣ್ಣಾ ಕಲ್ಯಾಣ ಮಂಟಪದಲ್ಲಿ ಕಿತ್ತೂರು ಮತ ಕ್ಷೇತ್ರದಲ್ಲಿ ರಮಜಾನ ಮಾಸದ ರೋಜಾ ಇದ್ದ ಮುಸ್ಲೀಂ ಸಮುದಾಯದ ಜನರಿಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮುಖಾಂತರ 500 ಹಣ್ಣಿನ ಕಿಟಗಳನ್ನು ನೀಡಲಾಯಿತು. …
Read More »