Breaking News

ಬೆಳಗಾವಿ

ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶ್ಯಸ್ತ್ಯ: ಸಚಿವ ಸತೀಶ್‌ ಜಾರಕಿಹೊಳಿ

ಯಮಕನಮರಡಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ, ಜನರಿಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ, ಪಾರದರ್ಶಕವಾಗಿ ದೊರೆಯಲಿ ಎಂಬ ಆಶಯದೊಂದಿಗೆ ಹಂದಿಗನೂರು, ವಸ ವಂಟಮೂರಿ ಗ್ರಾಮದಲ್ಲಿ ಗ್ರಾಪಂ ಕಚೇರಿಯಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಈ ಕಟ್ಟಡಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹಂದಿಗನೂರು, ಹೊಸ ವಂಟಮೂರಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ …

Read More »

ಕೇಂದ್ರ ಬಜೆಟ್‌ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಟೀಕಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ …

Read More »

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು …

Read More »

ಗಣೇಶನ್ ದೇವಸ್ಥಾನ ವಾಸ್ತುಶಾಂತಿ ಹಾಗೂ ಪ್ರಾಣಪ್ರತಿಸ್ಥಾಪನೆ

ಬೆಳಗಾವಿ : ನಗರದ ನ್ಯೂ ಗುಡ್ ಶೆಡ್ ರೋಡ್ 5 ನೇ ಕ್ರಾಸ್ ನಲ್ಲಿರುವ ಶ್ರೀ ಗಣೇಶ್ ಮಂದಿರದ ಜಿಣೋಧಾರ್ ಹಾಗೂ ನೂತನ ಶ್ರೀ ಗಣೇಶ ವಿಗ್ರಹದ ಪ್ರಾಣಪ್ರತಿಸ್ಥಾಪನೆ, ಕಳಸಾರೋಹಣ್ ಫೆಬ್ರುವರಿ 1 ರವಿವಾರ ರಂದು ಸಂಜೆ‌ 3 ಗಂಟೆಗೆ ಗಣೇಶ ವಿಗ್ರಹ ವನ್ನು ನ್ಯೂ ಗುಡ್ ಶೆಡ್ ರೋಡ್ ನ ನಿವಾಸಿಗಳು ಅದ್ದೂರಿಯಾಗಿ ಮಹಿಳೆಯರು ಕಳಶ ಮತ್ತು ಚಿಣ್ಣರ ಹರ್ಷೋಲ್ಲಾಸದೊಮದಿಗೆ ಛತ್ರಪತಿ ಶಿವಾಜಿ ಮಹಾರಾಜ್ ಉದ್ಯಾನದಿಂದ ಗಣೇಶ ದೇವಸ್ಥಾನದ …

Read More »

ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸಾಧನೆಗೈದ ಶೀತಲ ಹಳ್ಳೂರ

ಬೆಳಗಾವಿ : ತಂದೆ ರೈತನಾಗಿ ಜಮೀನಿನಲ್ಲಿ ಉಳುಮೆ ‌ಮಾಡುತ್ತಾ ಬದುಕು ಸಾಗಿಸುವುದರ ಜೊತೆಗೆ ಮಗನನ್ನು ವೈದ್ಯನಾಗಿ ಮಾಡುವ ಕನಸು‌ ಕೊನೆಗೂ ನನಸಾಗಿದೆ. ತಂದೆಯ ಆಸೆಯಂತೆ ವೈದ್ಯಕೀಯ ಸ್ನಾತಕೋತ್ತರ ಪದವಿ ಪೂರೈಸಿ 260 ನೇ ರ್ಯಾಂಕ್ ನೊಂದಿಗೆ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್ ಪಡೆದುಕೊಳ್ಳುವಲ್ಲಿ ಯುವಕ ಯಶಸ್ವಿಯಾಗಿದ್ದಾನೆ. ‌ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಶೀತಲ ಅಪ್ಪಾಸಾಹೇಬ್ ಹಳ್ಳೂರ ಸಧ್ಯ ವೈದ್ಯಕೀಯ ರಂಗವನ್ನು ಯಶಸ್ವಿಯಾಗಿ ಪೂರೈಸಿ ಗ್ರಾಮದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇನಾOಗೋವನಕೊಪ್ಪ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ನಂದಗಡದ  ಶ್ರೀಮಠದಲ್ಲಿ ಗೋ ಶಾಲೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗೆ ಮನವಿ

ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು ಶ್ರೀ ಮಠದಲ್ಲಿ ಗೋ ಶಾಲೆ ನಿರ್ಮಾಣ ಮಾಡಿ ಅಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಮನವಿ ಸಲ್ಲಿಕೆ ಮಾಡಿದರು ಈ ಸಂದರ್ಭದಲ್ಲಿ ಶ್ರೀ ಚನ್ನವಿರೇಶ್ವರ ಜಾತ್ರಾ ಮಹೋತ್ಸವದ ಅಧ್ಯಕ್ಷರಾದ ಮಹಾಂತೇಶ ವಾಲಿ ,ಮೋರೇಶ್ವರ ಮುನವಳ್ಳಿ, ಪ್ರಕಾಶ್ ಗುಡಿ,ರವಿ ಕಾಡಗಿ,ಅಪ್ಪಯ್ಯ ಕೊಡೋಳ್ಳಿ,ರಾಜು ಜ್ಯೋಡಂಗಿ, ಸೇರಿದಂತೆ ಶ್ರೀ ಮಠದ ಭಕ್ತರು …

Read More »

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆ

ಬೆಳಗಾವಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯನ್ನು ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲ ನಡೆಸಲಾಯಿತು. ಸಭೆಯಲ್ಲಿ ಪಂಚಿ ಗ್ಯಾರಂಟಿಗಳ ಅನುಷ್ಠಾನದ ಕುರಿತಾಗಿ ಪ್ರಗತಿ ಪರಿಶೀಲನೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳಲ್ಲಿ ಸಮಸ್ಯೆಗಳ ಕುರಿತು ಚರ್ಚೆ ಮಾಡಲಾಯಿತು, ಅನ್ನಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ, ಯುವ ನದಿ ,ಶಕ್ತಿ ಯೋಜನೆ, ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು ಅನ್ನಭಾಗ್ಯ ಯೋಜನೆ ಆಹಾರ ಇಲಾಖೆ ಅಕ್ಕಿ ವಿತರಣೆ ವಾಗುತ್ತಿದ್ದು ಫಲಾನವಿಗಳು ಇದನ್ನು …

Read More »

ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪಿಗೆ 30 ವರ್ಷ ಜೈಲುಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಗೂ ಶಿಕ್ಷೆಯಾಗಿದೆ. ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಇದೀಗ ಈ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ಅತ್ಯಾಚಾರಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 2 ಲಕ್ಷ ರೂ. ದಂಡ ವಿಧಿಸಿ ಪೋಕ್ಸೊ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಜೂನ್ 2020 ರಲ್ಲಿ ಎಪಿಎಂಸಿ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಆರೋಪಿ ಕಂಗ್ರಾಳಿ ಕೆ.ಎಚ್‌.ನಿವಾಸಿ ನಾಗೇಶ ಕರೆಪ್ಪ ಲಮಾಣಿ(20) …

Read More »

‘ವಿಬಿಜಿ ರಾಮಜೀ’ ತಿರಸ್ಕರಿಸಿ ಮನರೇಗಾ ಉಳಿಸಿ: ಬೆಳಗಾವಿಯಲ್ಲಿ ಕೂಲಿ ಕಾರ್ಮಿಕರ ಬೃಹತ್ ಪ್ರತಿಭಟನೆ

ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯಂದು ವಿಬಿಜಿ ರಾಮಜೀ ತಿರಸ್ಕರಿಸಿ ಮನರೇಗಾ ಉಳಿಸಿ ಹೋರಾಟವನ್ನು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆಸಲಾಯಿತು. ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯಂದು ವಿಬಿಜಿ ರಾಮಜೀ ತಿರಸ್ಕರಿಸಿ ಮನರೇಗಾ ಉಳಿಸಿ ಹೋರಾಟವನ್ನು ಬೆಳಗಾವಿಯ ತಾಲೂಕಾ ಪಂಚಾಯಿತಿ ಕಾರ್ಯಾಲಯದ ಎದುರು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆಸಲಾಯಿತು. ಹೊಸ ವಿಬಿಜಿ ರಾಮಜೀ ಯೋಜನೆಯೂ ಕಾರ್ಮಿಕ ಕೆಲಸದ ಹಕ್ಕುಗಳನ್ನು ಕಿತ್ತುಕೊಂಡಿದೆ. ಫಾರ್ಮ ನಂ. 6ರಡಿ 10 ದಿನಗಳಲ್ಲಿ ಕೆಲಸ ನೀಡಬೇಕು …

Read More »