Breaking News

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇ……………

ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ  ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ. ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..

ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ …

Read More »

ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ

ಬೆಳಗಾವಿ: ಸಾಮಾನ್ಯವಾಗಿ ಎಲ್ಲರಲ್ಲೂ ತಾನೊಂದು ದೊಡ್ಡ ಮನೆ ಕಟ್ಟಬೇಕೆಂಬ ಕನಸು ಇದ್ದೇ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ ಕ್ಯಾಮರಾ ಶೈಲಿಯ ಮನೆ ನಿರ್ಮಾಣ ಮಾಡುವ ಮೂಲಕ ಜನರ ಗಮನಸೆಳೆದಿದ್ದಾರೆ. ಹೌದು. ರವಿ ಹೊಂಗಲ್ ಅವರಿಗೆ ಬಾಲ್ಯದಿಂದಲೇ ಫೋಟೋಗ್ರಫಿ ಅಂದ್ರೆ ಪಂಚಪ್ರಾಣ. ಹೀಗಾಗಿ ಅವರು ಚಿಕ್ಕಂದಿನಿಂದಲೇ ಹತ್ತಿರದ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೆಲವೊಂದು ಫೋಟೋಗಳನ್ನು ತೆಗೆಯುವ ಹವ್ಯಾಸ ಬೆಳೆಸಿಕೊಂಡಿದ್ದರು. ರವಿ ಅವರಿಗಿದ್ದ …

Read More »

ಚಿಕ್ಕೋಡಿ -ಸದಲಗಾಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು  4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.

ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು  4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಶಾಸಕ ಗಣೇಶ ಹುಕ್ಕೇರಿ ಅವರ ವಿನೂತನವಾದ ಯೋಜನೆ ಇದಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂತಹ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿಯೇ ಶಾಸಕರೊಬ್ಬರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಇದಾಗಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆರೈಕೆ ಮಾಡಲು ಕೇರ್ …

Read More »

ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ‌ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ‌ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್‌ ಪುತ್ರಿ ಪ್ರಿಯಾಂಕಾ …

Read More »

ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿ ಐತಿಹಾಸ ಹೆಜ್ಜೆ

ಬೆಳಗಾವಿ:  ಸ್ಮಶಾನವೂ ಕೂಡ ಒಳ್ಳೆಯ ಜಾಗ ಎಂದು ಜನರಿಗೆ ಸಂದೇಶ ನೀಡುವ  ನಿಟ್ಟಿನಲ್ಲಿ  ವಿನೂತನ ಕಾರ್ಯಕ್ರಮವನ್ನು ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ  ಹೇಳಿದರು. ಇಲ್ಲಿನ  ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ರಾಜ್ಯದ ಹಲವು ಮಠಾಧೀಶರ ನೇತೃತ್ವದಲ್ಲಿ  ಸೋಮವಾರ   ನಡೆದ  ನೂತನ ಕಾರು ಚಾಲನಾ ಸಮಾರಂಭದ ಬಳಿಕ  ಮಾತನಾಡಿದರು. ದೇವಸ್ಥಾನಕ್ಕೆ ಮತ್ತು  ಸ್ಮಶಾನದ ಜಾಗಕ್ಕೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಎಲ್ಲವೂ …

Read More »

ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ

ಬೆಳಗಾವಿ :ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗ ಹಾಗೂ ಆನಂದಪೂರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆನಂದಪೂರ-ಹತ್ತರಗಿ ಸೋಮವಾರ ದಿನಾಂಕ:13-07-2020 ರಂದು ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಆದ ವಿನಾಯಕ ಹಳ್ಳಿ ಮತ್ತು ಗೌಸ ಐನಾಪೂರಿ ಪಾದಯಾತ್ರೆಗೆ ಚಾಲನೆ ನೀಡಿ …

Read More »

ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….

ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …

Read More »