Breaking News

ಬೆಳಗಾವಿ

ಆಸ್ಪತ್ರೆಯಿಂದ ಡಿಸ್ಚಾರ್ಜ್- ಸ್ವಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಪರದಾಟ

ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಮತ್ತು ಆಕೆಯ ತಾಯಿ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶನಿವಾರ ಬಾಣಂತಿಯನ್ನು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆ ಗೋಕಾಕ್ ನಿವಾಸಿ ಗೀತಾ ತನ್ನ ಮಗು, ತಂದೆ ತಾಯಿ ಜೊತೆ ಊರಿಗೆ ತೆರಳಲು ಪರದಾಡುತ್ತಿದ್ದರು. ಕರ್ನಾಟಕ ಲಾಕ್‍ಡೌನ್ ಹಿನ್ನೆಲೆ ಯಾವುದೇ ವಾಹನ ಸಿಗದಿದ್ದಕ್ಕೆ ಬಾಣಂತಿ ತಾಯಿ ಕಣ್ಣೀರು ಹಾಕಿದ್ದರು. ಇಂದು ಸಹ ಯಾವುದೇ ವಾಹನ ಸಿಗದಕ್ಕೆ …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಎಸ್.ಆರ್.ಕಳ್ಳಿಗುದ್ದಿ(16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಲಾಕ್ ಡೌನ್ ಹಿನ್ನೆಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಪೋಷಕರು ಸಮಯವನ್ನು ಹಾಳು ಮಾಡದೆ ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಾರೆ. ಇದರಿಂದ ಮನನೊಂದು ಶನಿವಾರ ರಾತ್ರಿಯೇ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ   ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …

Read More »

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು‌ ಗುರುತಿಸಲಾಗಿದೆ. ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. …

Read More »

ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ‌ ಕಾರ್ಯಾಧ್ಯಕ್ಷ‌ ಮತ್ತು         ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು. ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳ‌ನ್ನು ವಿತರಿಸಲಾಗುವುದು. ಶಾಸಕ‌ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು‌ ಮತ್ತು ಪೊಲಿಸ್ ಸಿಬ್ಬಂದಿಗಳ …

Read More »

ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ

ಬೆಳಗಾವಿ -: ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ, ಬೆಳಗುಂದ ಗ್ರಾಮದಲ್ಲಿ ಮತ್ತು ಬೆಳಗಾವಿ ನಗರದ ಕ್ಯಾಂಪ್ ನ ಕಸಾಯಿಗಲ್ಲಿಯಲ್ಲಿ ಕರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ(ಪಾಸಿಟಿವ್) ಸದರಿ ಗ್ರಾಮ ಮತ್ತು ಕಸಾಯಿಗಲ್ಲಿಯ ಭೌಗೋಳಿಕ ಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶವಾಗುವವರೆಗೆ ನಿಷೇಧಿತ (ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಈ ಮೂರೂ ಪ್ರದೇಶಗಳ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸಂಬಂಧಿಸಿದ ಗ್ರಾಮ ಮತ್ತು ಪ್ರದೇಶದ …

Read More »

ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ದೃಢ ವಿಚಾರ ಪೇಷಂಟ್ ನಂಬರ್ 128 – 20 ವರ್ಷದ ಯುವಕನ ಟ್ರಾವೆಲ್ ಹಿಸ್ಟರಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆ ವಿಚಾರವಾಗಿ ಸೋಂಕು ಪೀಡಿತ ವ್ಯಕ್ತಿ ಸಂಖ್ಯೆ 126ರ ಟ್ರಾವೆಲ್ ಹಿಸ್ಟ್ರಿ ಹೀಗಿದೆ ಮಾರ್ಚ್ 4 ರಂದು ಬೆಳಗಾವಿಯಿಂದ ದೆಹಲಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಪ್ರಯಾಣ. ಮಾರ್ಚ್ 19 ರಂದು ದೆಹಲಿಯಿಂದ ಬೆಳಗಾವಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಆಗಮನ. ನಂತರ ಎಂದಿನಂತೆ ಕಸಾಯಿ ಖಾನೆ ಕೆಲಸದಲ್ಲಿ ಭಾಗಿ. ಕಸಾಯಿಖಾನೆಯಲ್ಲಿ ಕೆಲಸ ಮಾಡಿದ್ದರ ಹಿನ್ನಲೆಯಲ್ಲಿ ಕಸಾಯಿಖಾನೆಯಲ್ಲಿ ಸಂಪರ್ಕಕ್ಕೆ ಬಂದವರಿಗೂ ಜಿಲ್ಲಾಡಳಿತ ತೀವ್ರ ಹುಡುಕಾಟ …

Read More »

ಸಂಪೂರ್ಣ ಬಂದ್ “ಆಡಿಯೋ ತುಣುಕು” ನಕಲಿ ಇಂತಹ ಅನಧಿಕೃತ ಮತ್ತು ಸುಳ್ಳು ಸುದ್ದಿಗಳನ್ನು ನಂಬಿ ಆತಂಕಕ್ಕೆ ಒಳಗಾಗಬಾರದು.

ಸಂಪೂರ್ಣ ಬಂದ್ “ಆಡಿಯೋ ತುಣುಕು” ನಕಲಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸ್ಪಷ್ಟನೆ ಬೆಳಗಾವಿ, ಏ.೪: ಕರೊನಾ ಹಿನ್ನೆಲೆಯಲ್ಲಿ ಶನಿವಾರ(ಏ.೪)ದಿಂದ ಸೋಮವಾರದವರೆಗೆ ದಿನಸಿ, ತರಕಾರಿ ಮಾರಾಟ ಸೇರಿದಂತೆ ಎಲ್ಲವೂ ಸಂಪೂರ್ಣ ಬಂದ್ ಎಂಬ “ನಕಲಿ ಆಡಿಯೋ” ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವ ಪ್ರತಿಯೊಂದು ಕ್ರಮಗಳ ಕುರಿತು ಲಿಖಿತ …

Read More »

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌…

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌… ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಯಮನಾಪು ಮತ್ತು ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ …

Read More »

ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ?

ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ? ಕೊರೋನಾ ಲಾಕ್ ಡೌನ್ ವೇಳೆ ಕೊರೋನಾ ಇಂದು ಮುಂಜಾನೆ 7.30 ಕೆ ಗೋಕಾಕ ನಗರದ ಅಪ್ಪ್ಸರಾ ಹೋಟೆಲ ಹತ್ತಿರ ಪೋಲಿಸ್ ಅಧಿಕಾರಿಯೊಬ್ಬರು ವಿನಾಕಾರಣ ಸಲೀಲ ಝಾಡವಾಲೇ ಎಂಬ ಅಮಾಯಕ ಯುವಕನ ಮೇಲೆ ಲಾಠಿ ಪ್ರಹಾರ ಮಾಡಿ ಆತನ ಕೈ ಬೆರಳು ಮುರಿದಿರುವ ಘಟನೆ ನಡೆದಿದೆ. ದಿನಸಿ ವಸ್ತುಗಳನ್ನು ತರಲು ಅಂಗಡಿಗೆ ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿ …

Read More »