Breaking News

ಬೆಳಗಾವಿ

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ ನದಿಯಲ್ಲಿ ಕಣ್ಮರೆಯಾದ ಯುವಕನಿಗಾಗಿ ಅಗ್ನಿಶಾಮಕ ಹಾಗೂ ಪೊಲೀಸರ ಹುಡುಕಾಟ. ಸಾಗರ ಮಾರುತಿ ಗೌಳಿ(೧೬) ನದಿಯಲ್ಲಿ ಕಣ್ಮರೆಯಾಗಿರೋ ಯುವಕ. ಗೋಕಾಕನ ಮಾರ್ಕಂಡೇಯ ನದಿಯಲ್ಲಿ ನಡೆದ ಘಟನೆ. ನಿನ್ನೆ ಮಧ್ಯಾಹ್ನ ನದಿಗೆ ಆಯತಪ್ಪಿ ಬಿದ್ದಿರುವ ಯುವಕ. ನಿನ್ನೆಯಿಂದ ಸತತವಾಗಿ ಯುವಕನಿಗಾಗಿ ಕುಡುಕಾಟ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂಧಿ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Read More »

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದ ವಿಜಯೇಂದ್ರ

ಬೆಳಗಾವಿ: ‘ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಡಾ ಹಗರಣದ ಕಾರ್ಮೋಡ ಮುಖ್ಯಮಂತ್ರಿ ಕುರ್ಚಿ ಆವರಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವರು, ತಮಗೆ ಬೆಂಬಲ ಕೋರಿ ರಹಸ್ಯ ಸಭೆ ನಡೆಸುತ್ತಿದ್ದಾರೆ’ ಎಂದರು. ‘ವಿಜಯೇಂದ್ರ ಅವರನ್ನು ಬಿಜೆಪಿ …

Read More »

ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ

ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಅದರ ವಸೂಲಾತಿಗಾಗಿ ಸಾಂಬ್ರಾ ಗ್ರಾಮ ಪಂಚಾಯಿತಿ ನೋಟಿಸ್‌ ಜಾರಿಗೊಳಿಸಿದೆ. ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನ ನಡದಿವೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರಂತರವಾಗಿ ಸಭೆ ನಡೆಸಿ, ಇದಕ್ಕೆ ಪೂರಕವಾಗಿ ಮೂಲಸೌಕರ್ಯ ಸಿದ್ಧಪಡಿಸುತ್ತಿದ್ದಾರೆ. ಹೊಸ ಟರ್ಮಿನಲ್‌ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿ ಆರಂಭಗೊಂಡಿವೆ. ಆದರೆ, ವಿಮಾನ ನಿಲ್ದಾಣದವರು ಕಳೆದ ಏಳು …

Read More »

‘ಕೆರೆಗಳ ಅಭಿವೃದ್ಧಿ ಶ್ರೇಷ್ಠ ಕೆಲಸ’

ಬೆಳಗಾವಿ: ‘ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು.   ‘ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು …

Read More »

ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಇಲ್ಲಿನ ರುಕ್ಮಿಣಿ ನಗರದ ನಿವಾಸಿ ಚಂದ್ರು ಮೋಹನ ಹರಿಜನ (26) ಶಿಕ್ಷೆಗೆ ಒಳಗಾದವ. ಮದುವೆ ಆಗುವುದಾಗಿ ನಂಬಿಸಿ, 2019ರ ಜನವರಿ 14ರಂದು ಬಾಲಕಿ ಒಡವೆಗಳನ್ನು ಬ್ಯಾಂಕಿನಲ್ಲಿ ಒತ್ತೆ ಇರಿಸಿ ಹಣ ಪಡೆದಿದ್ದ. ನಂತರ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಅಪಹರಿಸಿಕೊಂಡು ಹೋಗಿ, ನಿರಂತರವಾಗಿ …

Read More »

ಆಟೊದವರ ಸಮಸ್ಯೆಗಳೇನು?

ಆಟೊದವರ ಸಮಸ್ಯೆಗಳೇನು? * ನಗರದಲ್ಲಿ ಎಲ್ಲ ಕಡೆಯೂ ‘ಶೇರಿಂಗ್‌’ ವ್ಯವಸ್ಥೆಗೆ ಜನ ಮುಗಿಬೀಳುತ್ತಾರೆ. ಮೀಟರ್‌ ಅಳವಡಿಸುವ ಮುನ್ನ ಶೇರಿಂಗ್‌ ವ್ಯವಸ್ಥೆ ಬಂದ್ ಮಾಡಿಸಬೇಕು. * ಗ್ರಾಮೀಣ ಪ್ರದೇಶಕ್ಕೆ ಪರವಾನಗಿ ‍ಪಡೆದವರೂ ನಗರದಲ್ಲಿ ಓಡಿಸುತ್ತಾರೆ. ನಗರದ ‍ಪರವಾನಗಿ ಇದ್ದವರು ಏನು ಮಾಡಬೇಕು? * ಕನಿಷ್ಠ ದೂರದ ದರವನ್ನು ₹30 ಮಾಡಲಾಗಿದೆ. ಇದು ಏಳು ವರ್ಷಗಳ ಹಿಂದಿನ ದರ. ಕನಿಷ್ಠ ದರವನ್ನೂ ಹೆಚ್ಚಿಸಬೇಕು. * ಮೀಟರ್‌ಗಳ ದುರಸ್ತಿ ಮಾಡುವವರು ಒಬ್ಬರೂ ಬೆಳಗಾವಿಯಲ್ಲಿ ಇಲ್ಲ. …

Read More »

ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅ‍‍‍‍ಪರಾಧಿಗೆ ಇಲ್ಲಿನ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ತಿಗಡೊಳ್ಳಿ ಗ್ರಾಮದ ಗಂಗಪ್ಪ ಕಲ್ಲಪ್ಪ ಕೋಲಕಾರ ಶಿಕ್ಷೆಗೆ ಒಳಗಾದವ. ಬಾಲಕಿಯನ್ನು ಪುಸಲಾಯಿಸಿ, ಪ್ರೀತಿಸುತ್ತೆನೆ- ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. 2017ರ ಸೆಪ್ಟೆಂಬರ್‌ನಲ್ಲಿ ಬೈಕ್‌ ಮೇಲೆ ಅಪಹರಿಸಿಕೊಂಡು ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಬಿಲ್ಡಿಂಗ್‌ವೊಂದರಲ್ಲಿ ಇರಿಸಿದ್ದ. ಅಲ್ಲಿಯೇ …

Read More »

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ

ಬೆಳಗಾವಿ: ಹಳೆ‌ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ‌ ದಡ್ಡಿ, ಬಸವಣ್ಣಿ ಸಿದ್ದಪ್ಪ …

Read More »

ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ

ಖಾನಾಪುರ: ‘ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮೆಲ್ಲ ಮೇಲಿದೆ. ಪ್ರಪಂಚ ನಮ್ಮ ವನ್ಯಸಂಪತ್ತು ಮತ್ತು ವನ್ಯಜೀವಿಗಳ ಮೇಲೆ ಅವಲಂಬಿಸಿದೆ’ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು. ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ತಾಲ್ಲೂಕಿನ ಶಿರೋಲಿಯಿಂದ ಹೆಮ್ಮಡಗಾ ವರೆಗೆ ಭಾನುವಾರ ನಡೆದ 7 ಕಿ.ಮೀ. ಕಾಲ್ನಡಿಗೆ ಜಾಥಾ‌ದಲ್ಲಿ ಅವರು ಮಾತನಾಡಿದರು. ‘ಅರಣ್ಯಗಳು ಪ್ರಕೃತಿಯನ್ನು ಶ್ರೀಮಂತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವನ್ಯಜೀವಿಗಳು ಅರಣ್ಯದ …

Read More »

ಕುಂದಾನಗರಿಯಲ್ಲಿ ‘ದಾಂಡಿಯಾ’ ಸಂಭ್ರಮ

ಬೆಳಗಾವಿ: ಗಣೇಶೋತ್ಸವ ಮುಗಿದ ಬೆನ್ನಲ್ಲೆ, ನವರಾತ್ರಿ ಸಂಭ್ರಮದತ್ತ ಕುಂದಾನಗರಿ ಹೊರಳಿದೆ. ವಿದ್ಯುದ್ದೀಪಗಳ ಅಲಂಕಾರದಿಂದ ಝಗಮಗಿಸುತ್ತಿರುವ ವಿವಿಧ ಬಡಾವಣೆಗಳಲ್ಲಿ ಪ್ರತಿದಿನ ಸಂಜೆ ನಡೆಯುತ್ತಿರುವ ದಾಂಡಿಯಾ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆಯುತ್ತಿವೆ.   ಪರಿವರ್ತನ ಪರಿವಾರದ ನೇತೃತ್ವದಲ್ಲಿ ಇಲ್ಲಿನ ರಾಣಿ ಚನ್ನಮ್ಮ ನಗರದಲ್ಲಿ ಮತ್ತು ಸುರೇಶ ಯಾದವ ಫೌಂಡೇಷನ್‌ ನೇತೃತ್ವದಲ್ಲಿ ರಾಮತೀರ್ಥ ನಗರದಲ್ಲಿ ದಾಂಡಿಯಾ ಉತ್ಸವ ಆಯೋಜಿಸಲಾಗಿದೆ. ಇದರೊಂದಿಗೆ ಸದಾಶಿವ ನಗರ, ಟಿಳಕವಾಡಿಯ ಮಿಲೇನಿಯಂ ಉದ್ಯಾನ, ಕೋಟೆ ಕೆರೆ ಬಳಿ ಪ್ರೆಸಿಡೆನ್ಸಿಯಲ್‌ ಕ್ಲಬ್‌, …

Read More »