Breaking News
Home / ಜಿಲ್ಲೆ / ಬೆಳಗಾವಿ (page 80)

ಬೆಳಗಾವಿ

ಕನ್ನಡ ಭವನ ರಂಗಮಂದಿರ ಸಿದ್ಧ

ಬೆಳಗಾವಿ: ಗಡಿ ಜಿಲ್ಲೆಯ ಕಲಾವಿದರು, ಸಾಹಿತಿಗಳು, ಪ್ರೇಕ್ಷಕರು ಎರಡು ದಶಕಗಳಿಂದ ಕಾಣುತ್ತಿದ್ದ ಕನಸು ಕೊನೆಗೂ ಕೈಗೂಡಿದೆ. ಸಾರಸ್ವತ ಲೋಕದ ಕೇಂದ್ರವಾಗಿ ಕನ್ನಡ ಭವನ ರಂಗಮಂದಿರ ತಲೆಎತ್ತಿದೆ. ಡಿ.27ರಿಂದ ಸಾಂಸ್ಕೃತಿಕ ವೇದಿಕೆಯಾಗಿ ತೆರೆದುಕೊಳ್ಳಲಿದೆ.   ಕುಂದಾನಗರಿಯ ನೆಹರೂ ನಗರದಲ್ಲಿ ಈ ಭವನ ನಿರ್ಮಿಸಲಾಗಿದೆ. ಶ್ರೀಕೃಷ್ಣದೇವರಾಯ ವೃತ್ತದಿಂದ ತುಸು ಮುಂದಕ್ಕೆ ಹೋಗಿ, ಬಲಕ್ಕೆ ತಿರುಗಿದರೆ ರಾಮದೇವ ಹೋಟೆಲ್‌ ಹಿಂಭಾಗದಲ್ಲಿ ಭವನವಿದೆ. ಹೊರಗಡೆಯಿಂದ ಕಣ್ಹಾಯಿಸಿದರೆ ಹೈಟೆಕ್‌ ಕಟ್ಟಡದಂತೆ ಕಾಣುವ ಈ ಭವನ ಎಲ್ಲ ಆಧುನಿಕ ಸೌಕರ್ಯಗಳನ್ನೂ …

Read More »

ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ‌: ಯತ್ನಾಳ

ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ‌ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿ 29 ರಂದು ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ‌. ಮೀಸಲಾತಿ ಘೋಷಣೆ ಆಗುವ ಭರವಸೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 2ಎ ಸಮಾನವಾದ ಮೀಸಲಾತಿ ಸಿಗುತ್ತದೆ. ತಾಯಿ ಆಣೆ ಮಾಡಿ …

Read More »

ಕನ್ನಡಿಗರಿಗೆ ಉದ್ಯೋಗ: ಖಾಸಗಿ ನಿರ್ಣಯ ಅಂಗೀಕಾರ

ಬೆಳಗಾವಿ: ರಾಜ್ಯದಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಖಾಸಗಿ ನಿರ್ಣಯವನ್ನು ವಿಧಾನಪರಿಷತ್‍ನಲ್ಲಿ ಅಂಗೀರಿಸಲಾಯಿತು.ಕಾಂಗ್ರೆಸ್‍ನ ಯು.ಬಿ. ವೆಂಕಟೇಶ್ ಮಂಡಿಸಿದ ಖಾಸಗಿ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

Read More »

ಫೆಬ್ರವರಿ ತಿಂಗಳಲ್ಲಿ ಬಜೆಟ್ : ಸಿಎಂ ಬಬೊಮ್ಮಾಯಿ

ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ ಈಗಾಗಲೇ ಎರಡು ಬಾರಿ ಹಣಕಾಸಿನ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.   ಅಧಿವೇಶನ ಮುಗಿದ ಬಳಿಕ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.

Read More »

ಜನವರಿ ಮೊದಲ ವಾರ ಸಂಪುಟ ವಿಸ್ತರಣೆ?; ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ತಪ್ಪಿಸುವ ತಂತ್ರ, ಭಿನ್ನರಾಗ ಬದಲಾಯಿಸಿದ ಅತೃಪ್ತರು

ಬೆಳಗಾವಿ: ಕಳಂಕಿತರಾಗಿಯೇ ಮುಂದಿನ ಚುನಾವಣೆ ಎದುರಿಸಲು ಸಿದ್ಧರಿಲ್ಲದವರ ಧ್ವನಿಗೆ ಬಿಜೆಪಿ ವರಿಷ್ಠರು ಓಗೊಟ್ಟಿದ್ದು, ಜನವರಿ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದಾರೆ. ಈ ಕುರಿತು ಸ್ಪಷ್ಟ ಸುಳಿವು ಲಭಿಸಿದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ದನಿಯಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಮೇಶ ಜಾರಕಿಹೊಳಿಗೂ ಭರವಸೆ ಸಿಕ್ಕಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆರೋಪಮುಕ್ತರಾಗಿರುವ ಕಾರಣ ಸಂಪುಟಕ್ಕೆ ಮತ್ತೆ ಸೇರಿಸಿಕೊಂಡು ಕಳಂಕದಿಂದ ಪಾರುಮಾಡಿ ಎನ್ನುವುದು ಈಶ್ವರಪ್ಪ ಹಾಗೂ ಜಾರಕಿಹೊಳಿ ವಾದವಾಗಿದೆ. ಎದುರಾಳಿಗಳ …

Read More »

ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹುರಾಜ್ಯ ಸಹಕಾರಿ ಸಂಘಗಳ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ. …

Read More »

7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ

ಬೆಳಗಾವಿ: ಕೃಷಿ ಭೂಮಿ ಕೃಷಿಯೇತರ ಬಳಕೆಗೆ ಪರಿವರ್ತನೆ 7 ದಿನಗಳಲ್ಲಿ ಕಡ್ಡಾಯವಾಗಿ ಮಾಡಿಕೊಡುವ ಉದ್ದೇಶದ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಮಸೂದೆ ಹಾಗೂ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಉತ್ತೇಜಿಸಿ ಹೆಚ್ಚಿನ ಹೂಡಿಕೆ ತರುವ ಉದ್ದೇಶದ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.   ಸಚಿವ ಮುರುಗೇಶ್‌ ನಿರಾಣಿ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಕರ್ನಾಟಕ …

Read More »

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ; ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.   ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವೇಳೆ …

Read More »

ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯದ‌ ಎಂಆರ್ ಡಬ್ಯೂ, ವಿಆರ್ ಡಬ್ಯೂ, ಯುಆರ್ ಡಬ್ಯೂ ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನವ ಕರ್ನಾಟಕ ವಿಕಲಚೇತನ ಕಾರ್ಯಕರ್ತರ ಸಂಘ ಸುವರ್ಣ ವಿಧಾನಸೌಧದ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು. ಮಹಾರಾಷ್ಟ್ರದ ಮಾದರಿಯಲ್ಲಿ ವಿಕಲಚೇತನರಿಗಾಗಿ ವಿಶೇಷ ಸಚಿವಾಲಯ‌ ಘೋಷಣೆ ಮಾಡಬೇಕು. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದ ಹೊಸ ತಾಪಂ. ಗಳಿಗೆ‌ ಎಂಆರ್ ಡಬ್ಯೂಗಳನ್ನು ಹುದ್ದೆ ಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಹೊಸ ನೇಮಕಾತಿ …

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »