ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ …
Read More »ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ …
Read More »ಚಿಕ್ಕೋಡಿ ಕೆ ಎಲ್ ಇ ಕಾಲೇಜಿಗೆ ನಾವೀನ್ಯ ಪ್ರಯೋಗಾಲಯ ರಚನೆಗೆ 1.25 ಕೋಟಿ ರೂಪಾಯಿ ಅನುದಾನ
ಚಿಕ್ಕೋಡಿಯ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿನೋದ ಬಿರಾದರ (ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಹಾಗೂ ಇಲೆಕ್ಟ್ರಾನಿಕ್ಸ್ ಆಯ್ಯಂಡ್ ಕಮ್ಯುನಿಕೆಶನ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜಯ ಪುಜಾರಿ (ಕೊ-ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಇವರು ಪ್ರಸ್ತಾಪಿಸಿದ ಇಂಟೆಲಿಜೆನ್ಸ್ ಸಿಸ್ಟಮ್ ಆಯ್ಯಂಡ್ ಕಾಗ್ನಿಟಿವ್ ಕಂಪ್ಯೂಟಿಂಗ್ ವಿಷಯದ ನಾವೀನ್ಯ ಪ್ರಯೋಗಾಲಯ ರಚನೆಗೆ ಸಲ್ಲಿಸಿದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ-ಬಿಟಿ ವಿಭಾಗವು ಲಿಪ್ ಯೋಜನೆಯಡಿ 1.25 ಕೋಟಿ ರೂಪಾಯಿ ಅನುದಾನವನ್ನು …
Read More »ತರಳಬಾಳು ಹುಣ್ಣಿಮೆ ವೇದಿಕೆ | ದೂಷಣೆ ಬಿಟ್ಟು ಒಂದಾಗಿ: ಶ್ರೀಗಳ ತಾಕೀತು.
ಭದ್ರಾವತಿ (ಶಿವಮೊಗ್ಗ): ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವು ‘ದಾವಣಗೆರೆ ರಾಜಕಾರಣ’ದ ರಾಜಿ ಪಂಚಾಯಿತಿಗೆ ವೇದಿಕೆ ಆಗಿ ಮಾರ್ಪಟ್ಟಿತ್ತು. ದೀರ್ಘ ಕಾಲದಿಂದ ಪರಸ್ಪರ ರಾಜಕೀಯ ಹಗೆತನ ಸಾಧಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ.ಹರೀಶ್ ಅವರಿಗೆ ‘ರಾಜಕೀಯ ಸಭ್ಯತೆ’ಯ ಪಾಠ ಹೇಳಿದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಅವರ ನಡುವಿನ ಜಗಳ ಪರಿಹರಿಸಿ ವೇದಿಕೆಯಲ್ಲಿಯೇ ರಾಜಿ ಮಾಡಿಸಿದರು. ಮಲ್ಲಿಕಾರ್ಜುನ್ ಹಾಗೂ ಸಿದ್ದೇಶ್ವರ …
Read More »ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ
ಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆಗ ಮುಖ್ಯವಾಗಿ ಶಾಲಾ ಮಕ್ಕಳು ಶಾಲೆಗೆ ಹೋಗುವ ಸಮಯದಲಿ. ಶಾಲೆ ಬಿಡುವ ಸಮಯದಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಕ್ಕೆ ಹೋಗುವಾಗ ಬರುವಾಗ ಭಾರಿ …
Read More »ಬೆಳಗಾವಿಯಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ: ಯುವ ಸಮಿತಿ ಮಹಿಳಾ ಘಟಕದಿಂದ ಅದ್ದೂರಿ ‘ಅರಿಶಿನ-ಕುಂಕುಮ’ ಕಾರ್ಯಕ್ರಮ
ಮಹಿಳಾ ಸಬಲೀಕರಣ ಮತ್ತು ಸಂಘಟನೆಯ ಉದ್ದೇಶದೊಂದಿಗೆ, ಬೆಳಗಾವಿಯ ಕಾವಳೆ ಸಂಕುಲದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ಸಾಧಕ ಮಹಿಳೆಯರಿಗೆ ಗೌರವ ಸಮರ್ಪಣೆ ಹಾಗೂ ಅರಿಶಿನ-ಕುಂಕುಮ ಕಾರ್ಯಕ್ರಮ ಜರುಗಿತು. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ರಾಜಮಾತಾ ಜಿಜಾವು, ಛತ್ರಪತಿ ಶಿವಾಜಿ ಮಹಾರಾಜ್’ರ ಹಾಗೂ ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಪಡೆಯಿತು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ವೇತಾ …
Read More »ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು
ಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ವೀಕೆಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಅಂಡ್ ಅಜ್ಮಿ ಮಿಶಿನ್ ನಾಮಕರಣ ಮಾಡಿ ಬಿಲ್ ಪಾಸ್ ಮಾಡಿರುವ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಹನುಮಂತ ಕಲ್ಲಪ್ಪ ಶೇಖನೂರ್ ಪಂಚಾಯತ್ ಸ್ವರಾಜ್ ಸಮಾಚಾರ್ ಜೊತೆಗೆ ಮಾತನಾಡಿ ಕೇಂದ್ರ ಸರ್ಕಾರ ಯಾರಿಗೂ ಹೇಳದೆ …
Read More »ಗೂಡಂಗಡಿಗಳ ಸ್ವಚ್ಛತೆಗೆ ಮಹಾಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಖಡಕ್ ಸೂಚನೆ
ಬೆಳಗಾವಿ: ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಪಾಲಿಕೆಯ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಸೂಚನೆ ನೀಡಿದರು. ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಬೇಕು. ಖೋಕಾ ಅಂಗಡಿಯಲ್ಲಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆಯಿಂದ ಮಾಡಬೇಕು ಎಂದರು. ನಗರದಲ್ಲಿರುವ ಬಡಾವಣೆಗಳಲ್ಲಿ …
Read More »ಕ್ಯಾಂಪ್ ಪ್ರದೇಶದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್
ಬೆಳಗಾವಿ ಕ್ಯಾಂಪ್ ಪ್ರದೇಶದ ಜನರ ದಶಕಗಳ ಕನಸು ನನಸಾಗುವ ಕಾಲ ಹತ್ತಿರವಾಗಿದ್ದು, ಶಾಸಕ ಆಸೀಫ್ ಸೇಠ್ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು, ಗುಣಮಟ್ಟದ ಕೆಲಸಕ್ಕೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ನಿವಾಸಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕ್ಯಾಂಪ್ ಪ್ರದೇಶದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. …
Read More »ಕೋಣದ ಬರ್ತ್ಡೇಗೆ 300 ಜನಕ್ಕೆ ಊಟ, 10 ಕೇಜಿ ಕೇಕ್,ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಅಪರೂಪದ ಆಚರಣೆ
ಮನೆ ಮಗನಂತೆ ಬೆಳೆಸಿದ ಕೋಣದ ಒಂದು ವರ್ಷದ ಜನ್ಮದಿನ ಆಚರಿಸುವ ಮೂಲಕ ಚಿಕ್ಕಲವಾಳ ಗ್ರಾಮದ ಯುವಕ ಮಾದರಿಯಾಗಿದ್ದಾನೆ. ಗ್ರಾಮದ ಕೂಲಿಕಾರ ಸಂಜಯ ರಾಮಚಂದ್ರ ಸಠಾಲೆ(30) ಮನೆಯಲ್ಲಿ ಐದು ಎಮ್ಮೆಗಳನ್ನು ಸಾಕಿದ್ದಾರೆ. ಕಬ್ಬು ಕಟಾವು ಹಂಗಾಮಿನಲ್ಲಿ ಕೂಲಿ ಕಾರ್ಮಿಕನಾಗಿ ಕಾರ್ಯ ಮಾಡುವ ಇವರಿಗೆ ಇರುವುದು ಕೇವಲ 10 ಗುಂಟೆ ಜಮೀನು ಮಾತ್ರ. ಬೇರೆಯವರ ಜಮೀನಿನಿಂದ ಎಮ್ಮೆಗಳಿಗೆ ಮೇವು ತಂದು ಸಲಹುತ್ತಾರೆ. ಗುಜರಾತಿನ ಮುರ್ರಾ ಜಾತಿ ಎಮ್ಮೆಗಳನ್ನು ಸಾಕಿರುವ ಇವರು ಒಂದು ಎಮ್ಮೆಗೆ …
Read More »
Laxmi News 24×7