ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು. ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. …
Read More »ದಲಿತ ಕಾಲೋನಿಗೆ ರಸ್ತೆ ಇಲ್ಲದೇ ರಾತ್ರಿಯಿಂದ ಧರಣಿ ಕುಳಿತ ಜನ
ಗದಗ, ಡಿಸೆಂಬರ್ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ(road)ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Read More »ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡುವ ಮೂಲಕ ಗೋಕಾಕದಲ್ಲಿ 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
ಗೋಕಾಕ : 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಲಾಗುತ್ತಿದೆ, ಭಾರತೀಯ ಕಾಂಗ್ರೇಸ್ ಪಕ್ಷವು ತನ್ನದೆ ಆದಂತಹ ಇತಿಹಾಸವನ್ನು ಹೊಂದಿದೆ ಭಾರತದ ಆಡಳಿತದಲ್ಲಿ ಈ ರಾಷ್ಟ್ರೀಯ ಕಾಂಗ್ರೇಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್ಗಳಿಗೆ ಕಲ್ಲೆಸೆತ
ಬೆಳಗಾವಿ, ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು. ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್ ಮೇಲೆ ಕಲ್ಲೆಸಿದಿದ್ದು, ಬಸ್ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. …
Read More »ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ.
ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಿಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು. ಶ್ರೀ ಚಂದ್ರಶೇಖರ …
Read More »ಅಥರ್ವ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ …
Read More »ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ
ಬೆಳಗಾವಿ: ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡಿಸೆಂಬರ್ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಯುವಕ ಪುಣೆ ಮೂಲದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಮನೆಗೆ ಬಂದಿದ್ದ. ಮನೆಗೆ ಬರುತ್ತಿದ್ದಂತೆ ಯುವತಿಯ ಕಡೆಯವರು ಯುವಕನನ್ನು ಹುಡುಕಿ ಮನೆಗೆ …
Read More »ನರ್ಸರಿ ಶಾಲೆ ಉದ್ಗಾಟಿಸಿದ ಶ್ರೀ ಮತಿ ಅಂಬಿಕಾ ಹಾಗೂ ಸುವರ್ಣಜಾರಕಿಹೊಳಿ ಅವರು
ಗೋಕಾಕ ನಗರದ ಝೆನ್ ಪಾರ್ಕ್ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ವಾಯ್ಸ್ ಚೇರಮನ್ ರಾದ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಮಾತನಾಡಿ ಮಕ್ಕಳಿಗೆ ಪೋಷಕರು ತಮ್ಮ ಸಮಯವನ್ನು ನೀಡಬೇಕು, ಅವರೊಂದಿಗೆ ಸ್ನೇಹಿತರಂತೆ ಮಕ್ಕಳ ಭಾವನೆಗಳಿಗೆ ಸ್ಪಂದಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಚಿಕ್ಕ …
Read More »ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪ ಚರ್ಚೆಗೆ ಬನ್ನಿ: ಶಾಸಕ ಹಲಗೇಕರ್ಗೆ ನಿಂಬಾಳ್ಕರ್ ಸವಾಲು
ಬೆಳಗಾವಿ: ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪದಲ್ಲಿ ರಾಜಕೀಯ ಏನೂ ಇಲ್ಲ. ಈಗ ಚುನಾವಣೆ ಮುಗಿದಿದ್ದು, ನೀವು ದಾಖಲೆ ಸಮೇತ ಬಹಿರಂಗ ಚರ್ಚೆ ಬರುವಂತೆ ಶಾಸಕ ವಿಠ್ಠಲ ಹಲಗೇಕರ್ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸವಾಲ್ ಹಾಕಿದ್ದಾರೆ. ಖಾನಾಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಹಿತಿ ಹಕ್ಕಿನಡಿ ಯಾವುದೇ ದಾಖಲೆ ಕೊಡ್ತಿಲ್ಲ. ಕಳೆದ 6 ವರ್ಷಗಳಿಂದ ಬೆನ್ನು ಬಿದ್ದ ಮೇಲೆ ನಿವೃತ್ತ ನ್ಯಾಯಾಧೀಶ ಎಸ್.ಪಿ.ವಸ್ತ್ರದ ಅವರ ನೇತೃತ್ವದಲ್ಲಿ ತನಿಖೆ …
Read More »