Breaking News
Home / ಜಿಲ್ಲೆ / ಮೈಸೂರ್ (page 10)

ಮೈಸೂರ್

ಕನ್ನಡದ ಹಿರಿಯ ಕಲಾವಿದೆ ಬಿ.ಶಾಂತಮ್ಮ (95) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಮೈಸೂರು: ಕನ್ನಡದ ಹಿರಿಯ ಕಲಾವಿದೆ ಬಿ.ಶಾಂತಮ್ಮ (95) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಸುಮಾರು 5.45ಕ್ಕೆ ಶಾಂತಮ್ಮ ನಿಧನರಾಗಿದ್ದಾರೆ. ಸುಮಾರು 160ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶಾಂತಮ್ಮ ಅವರು ಮೂಲತಃ ಚೆನ್ನೈ ನಿವಾಸಿ. ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾ ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದಾರೆ. ನಾಲ್ಕು ಗಂಡು ಮಕ್ಕಳು ಮತ್ತು ಇಬ್ಬರು ಪುತ್ರಿಯರಿದ್ದರು ಶಾಂತಮ್ಮ ಪ್ರತ್ಯೇಕವಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಪುತ್ರಿ ಸುಮಾ ತಾಯಿಯನ್ನು ಮೈಸೂರಿನಲ್ಲಿ ತಮ್ಮ …

Read More »

ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ: ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ. ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುವುದು ಇಲ್ಲವೇ ಬೀದಿಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಯಾವುದೇ …

Read More »

ನಿಷೇದಾಜ್ಞೆ ಇದ್ದರುಚಾಮುಂಡಿ ಬೆಟ್ಟ ಏರಿದ ಶೋಭಾ ಕರಂದಾ ಜ್ಲೆ

ಮೈಸೂರು: ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ …

Read More »

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…………………

ಮೈಸೂರು: ಕತ್ತು ಕೊಯ್ದುಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರು ಜುಲೈ 9 ರಂದು ಆತ್ಮತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಮರ್ಸ್ ವಿಭಾಗದಲ್ಲಿ ಕ್ಲಾಸ್‍ಮೇಟ್ಸ್ ಆಗಿದ್ದರು. ಕಾಲೇಜಿನಲ್ಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ. ಆದರೆ ಇಬ್ಬರ ಮದುವೆಗೆ ಜಾತಿ ಅಡ್ಡಿಯಾಗಿತ್ತು. ಅಲ್ಲದೆ ಇವರಿಬ್ಬರು ಅಪ್ರಾಪ್ತರು ಅನ್ನೋ ಹಿನ್ನೆಲೆ ಕೂಡ ಇತ್ತು. …

Read More »

ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ

ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್‍ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …

Read More »

ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ

ಮೈಸೂರು : ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಕಾರಣ ಕತ್ತು ಕುಯ್ದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ …

Read More »

ಕ್ರಿಕೆಟ್ ನಂತೆ ಕೊರೊನಾಕೇಸ್ ದಿನಕ್ಕೆ ಎಷ್ಟುಎಂಬಬೆಟ್ಟಿಂಗ್………..

ಮೈಸೂರು:  ರಾಜ್ಯದ ಕೇಲವು ಜಿಲ್ಲೆಗಳಲ್ಲಿ  ಕ್ರಿಕೆಟ್ ನಂತೆ ಕೊರೊನಾ ಕೇಸ್ ದಿನಕ್ಕೆ ಎಷ್ಟು ದಾಖಲಾಗುತ್ತೆವೆ ಎಂಬ ಬಗ್ಗೆ ಜನ ಈಗ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಕೊರೊನಾ ಸೋಂಕಿತರ ಪ್ರಕರಣಗಳ ದಾಖಲಾಗುವ ಎಂಬ ಬಗ್ಗೆ ಬರ್ಜರಿಯಾಗಿ ಬೆಟ್ಟಿಂಗ್ ದಂಧೆ ನಡೆದಿದೆ. ಇಂದು ರಾಜ್ಯದಲ್ಲಿ ಎಷ್ಟು ಕೊರೊನಾ ಕೇಸ್ ದಾಖಲಾಗಲಿವೆ ಎಂಬ ಬಗ್ಗೆ ಮಧ್ಯ ವಯಸ್ಕರರು ಟೀ ಅಂಗಡಿಗಳ ಮುಂದೆ ನಿಂತು ಬೆಟ್ಟಿಂಗ್ ದಂಧೆ ನಡೆಸಿದ್ದಾರೆ. ಇನ್ನು ಕೆಲವೆಡೆ  ಟೀ ಅಂಗಡಿಗಳ ಮುಂದೆ ನಿಂತು …

Read More »

ಮೂರು ದಿನ ಮೈಸೂರು ಅರಮನೆ ಪ್ರವಾಸಿಗರಿಗೆ ಬಂದ್

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಮೈಸೂರು ಅರಮನೆಗೂ ಕೊರೊನಾ ಭೀತಿ ಕಾಡುತ್ತಿದೆ. ಮೂರು ದಿನ ಅರಮನೆಯನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದೆ. ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಇವತ್ತು ಒಂದು ದಿನ ಅರಮನೆ ಆವರಣ ಸ್ಯಾನಿಟೈಸ್‍ಗಾಗಿ ನಿರ್ಬಂಧ …

Read More »

ಸಿದ್ದರಾಮಯ್ಯನವ್ರೇ ಖುದ್ದಾಗಿ ಸಿಎಂ ಅವ್ರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಅವರೇ ಖುದ್ದಾಗಿ ಸಿಎಂ ಅವರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ. ಖುದ್ದಾಗಿ ಸ್ವತಃ ಸಿಎಂ ದಾಖಲೆ ಕೊಡುವುದಕ್ಕಿಂತ ಒಳ್ಳೆಯ ಅವಕಾಶ ಇದ್ಯಾ?. ಈ ಅವಕಾಶ ಬಳಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ಮಾಡಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನ ಪ್ರಧಾನಿಗೆ ಹೋಲಿಕೆ …

Read More »

ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೌದು. ಮೈಸೂರಿನಲ್ಲಿ ತಾಲೂಕುಗಳೀಗೂ ಮಾಹಾಮಾರಿ ವ್ಯಾಪಿಸಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್‍ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಾ.ರಾ ಮಹೇಶ್‍ಗೆ ಆತಂಕ ಹೆಚ್ಚಾಗಿದೆ. ಸಾ.ರಾ ಮಹೇಶ್ ಅವರು ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್‍ಡೌನ್ ಪ್ರದೇಶಗಳಿಗೆ ಭೇಟಿ …

Read More »