Breaking News
Home / ಜಿಲ್ಲೆ / ಮೈಸೂರ್ (page 3)

ಮೈಸೂರ್

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ. ಅರಮನೆ ಆನೆಗಳು ದಸರಾ …

Read More »

ಮೈಸೂರಿನಲ್ಲಿ ಮತ್ತೆ ‘ಅಂಬಾರಿ’ ಸಂಚಾರ ಆರಂಭ

ಮೈಸೂರು, ಸೆ.1- ಪ್ರವಾಸಿಗರಿಗೆ ಸಂತಸದ ಸುದ್ದಿ. ಪ್ರವಾಸೋದ್ಯಮ ಇಲಾಖೆಯ ಡಬಲ್ ಡೆಕ್ಕರ್ `ಅಂಬಾರಿ’ ಬಸ್‍ನಲ್ಲಿ ಕುಳಿತು ಮೈಸೂರು ನಗರದ ಪ್ರವಾಸಿ ತಾಣಗಳಿಗೊಂದು ಸುತ್ತು ಹೊಡೆಯುವ ಕಾಲ ಮತ್ತೆ ಕೂಡಿ ಬಂದಿದೆ. ಸೆ.4ರಂದು ಬಸ್ ಸಂಚಾರ ಆರಂಭಿಸಲಿದ್ದು, ಮತ್ತೆ ಪ್ರವಾಸೋದ್ಯಮ ಚಿಗುರೊಡೆಯುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಬಸ್ ಧೂಳು ಹಿಡಿದು ನಿಲ್ಲುವಂತಾಗಿತ್ತು. ಇದೀಗ ಧೂಳು ಕೊಡವಿ ಸಂಚಾರಕ್ಕೆ ಎದ್ದು ನಿಂತಿದೆ. ಆಗಸ್ಟ್ ತಿಂಗಳಿನಲ್ಲಿಯೇ ಅಂಬಾರಿ ಬಸ್ ಸಂಚಾರ ಆರಂಭಿಸುವ ಕುರಿತ ಮಾತುಗಳು ಕೇಳಿ ಬಂದಿತ್ತಾದರೂ …

Read More »

ಮೈಸೂರು ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ರೇಪ್ ಪ್ರಕರಣ

ಮೈಸೂರು: ದೆಹಲಿ ನಿರ್ಭಯಾ ಪ್ರಕರಣ ನೆನಪಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸ್ ಟಿಕೆಟೊಂದರ ಸುಳಿವು ಪಡೆದು ಪ್ರಕರಣ ನಡೆದ 87 ಗಂಟೆಯಲ್ಲಿ ತಮಿಳನಾಡಿನ ಐವರು ಆರೋಪಿಗಳನ್ನು ಬಂಧಿಸಿರುವುದು ವಿಶೇಷ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಘಟನೆ ಸಾರ್ವಜನಿಕ ಆಕ್ರೋಶದ ಜತೆಗೆ ರಾಜಕೀಯ ಒತ್ತಡ, ಸಂಘಟನೆಗಳ ಪ್ರತಿಭಟನೆಯಿಂದಲೂ ಪೊಲೀಸರಿಗೆ ತಲೆನೋವು ತಂದಿಟ್ಟಿತ್ತು. …

Read More »

ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …

Read More »

ವಿದ್ಯಾರ್ಥಿನಿ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ : ಆರೋಪಿಗಳಿಗಾಗಿ ಶೋಧ

ಮೈಸೂರು : ಲಲಿತಾದ್ರಿಪುರದಲ್ಲಿ ನಡೆದಿದ್ದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಸ್ಫೋಟಕ‌ ಮಾಹಿತಿ ಬಹಿರಂಗವಾಗಿದೆ.   ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಬಂದಿದ್ದ ಕಾಮುಕರು, ಯುವಕನ ಮೇಲೆ …

Read More »

ಕೆ-ಸೆಟ್‌ ಪರೀಕ್ಷೆ: ದಿನ ನಿಗದಿಗೆ ಪರದಾಟ

ಮೈಸೂರು: ಕೋವಿಡ್‌ ಕಾರಣ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್‌) ಈಗಾಗಲೇ ಎರಡು ಬಾರಿ ಮುಂದೂಡಿರುವ ಮೈಸೂರು ವಿಶ್ವವಿದ್ಯಾಲಯವು ಹೊಸದಾಗಿ ದಿನಾಂಕ ನಿಗದಿ ಮಾಡಲು ಪರದಾಡುತ್ತಿದೆ. ‌ಸುಮಾರು 85 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಮೂರು ತಿಂಗಳಾಗಿದ್ದು, ಪರೀಕ್ಷೆಯ ದಿನಾಂಕ ಪ್ರಕಟಣೆ ಆಗುವುದನ್ನೇ ಕಾಯುತ್ತಿದ್ದಾರೆ. ಈ ನಡುವೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿಗಾಗಿ ಸದ್ಯದಲ್ಲೇ ಅರ್ಜಿ ಆಹ್ವಾನಿಸುವ ಸೂಚನೆಯನ್ನು ರಾಜ್ಯ ಸರ್ಕಾರ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಸೈಕಲ್‌ನಲ್ಲೇ ಕಚೇರಿಗೆ ಹೋಗಿ ಮಾದರಿಯಾದ ಎಸಿಪಿ ಸಂದೇಶ್‌ಕುಮಾರ್‌ ವರ್ಗ

ಮೈಸೂರು: 17 ತಿಂಗಳು ಮೈಸೂರಿನಲ್ಲಿ ಸೇವೆ ಸಲ್ಲಿಸಿ ಜನಸ್ನೇಹಿ ಪೊಲೀಸ್‌ ಎಂದೇ ಖ್ಯಾತರಾಗಿದ್ದ ಸಹಾಯಕ ಪೊಲೀಸ್‌ ಆಯುಕ್ತ (ಸಂಚಾರ) ಎಸ್‌.ಎನ್‌. ಸಂದೇಶ್‌ ಕುಮಾರ್‌ ಅವರು ವರ್ಗಾವಣೆಗೊಂಡಿದ್ದಾರೆ. ಸಂದೇಶ್‌ ಕುಮಾರ್‌ ಅವರು ಶ್ರೀರಂಗಪಟ್ಟಣದ ಉಪ ವಿಭಾಗ, ಮಂಡ್ಯ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಫಿಟ್‌ನೆಸ್‌ ಪ್ರಿಯರಾಗಿದ್ದ ಸಂದೇಶ್‌ ಕುಮಾರ್‌ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲೇ ಹೋಗಿ ಬರುತ್ತಿದ್ದರು. ಪೆಟ್ರೋಲ್‌ ಬೆಲೆ ಏರಿಕೆಯಾಗಿರುವ ಸಮಯದಲ್ಲಿ ಸೈಕಲ್‌ ಬಳಸುವಂತೆ ಯುವ ಜನರಿಗೆ ಅವರು ಸಂದೇಶ ಕೊಟ್ಟರು. ಸಂದೇಶ್‌ …

Read More »

ಮೈಸೂರು: ಪಾರ್ಕ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮೈಸೂರು, ಮಾರ್ಚ್ 9: ಮೈಸೂರು ನಗರದಲ್ಲಿ ಮಂಗಳವಾರ ಅಪರೂಪದ ಹೆರಿಗೆಯಾಗಿದೆ. ಸಿನಿಮೀಯ ಶೈಲಿಯಲ್ಲಿ ತಾಯಿಯೊಬ್ಬಳು ಉದ್ಯಾನದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಮೈಸೂರು ನಗರದ ಹೃದಯ ಭಾಗದಲ್ಲಿರುವ ಪೀಪಲ್ಸ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಕೊಡಗು ಮೂಲದ ಮಹಿಳೆ ಪಾರ್ಕ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ತುಂಬು ಗರ್ಭಿಣಿ ಆಗಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಪಾರ್ಕ್‌ನಲ್ಲಿ ಕುಳಿತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ …

Read More »

‘ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀನಿ’ -ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವುದಾಗಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮಮಂದಿರ ಕಟ್ಟುತ್ತಾರೆ, ಅದರಲ್ಲೇನಿದೆ? ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು …

Read More »