Breaking News
Home / ಜಿಲ್ಲೆ / ಮೈಸೂರ್ (page 9)

ಮೈಸೂರ್

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು DC ಎತ್ತಂಗಡಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು. ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ …

Read More »

ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.:ಕಾಂಗ್ರೆಸ್ ನಿಂದ ಆರೋಪ

ಮೈಸೂರು:  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ,  ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.  ಇದಕ್ಕಾಗಿ 31 ಜನರ ಗುಂಪು ಕಟ್ಟಿಕೊಂಡಿದ್ದಾರೆ. ಈ 31 ಜನರ ಚಲನವಲನಗಳನ್ನು ಗಮನಿಸಿದ್ದೇದ್ದು, ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಜಯೇಂದ್ರ ಅವರು ವರ್ಗಾವಣೆ  ದಂಧೆಯಲ್ಲಿ ಕೋಟಿಗಟ್ಟಲೆ …

Read More »

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …

Read More »

ನಾಳೆಯಿಂದ ನಾವು ಕೆಲಸಕ್ಕೆ ಬರುವುದಿಲ್ಲ ಎಂದು ಮೈಸೂರು ಆರೋಗ್ಯ ಇಲಾಖೆ ವೈದ್ಯರು ಸುಧಾಕರ್‌ಗೆ ಎಚ್ಚರಿಕೆ

ಮೈಸೂರು: ಆತ್ಮಹತ್ಯೆ ಮಾಡಿಕೊಂಡ ನಂಜನಗೂಡಿನ ಟಿಹೆಚ್‍ಒ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಮಹಿಳಾ ವೈದ್ಯೆಯೊಬ್ಬರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಆರೋಗ್ಯಾಧಿಕಾರಿ ನಾಗೇಂದ್ರ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಅವರ ಅಂತಿಮ ದರ್ಶನ …

Read More »

ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆ

ಮೈಸೂರು: ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಹತ್ಯೆಯಾದ ಮಹಿಳೆಯನ್ನು ಬೆಟ್ಟದಪುರ ಗ್ರಾಮದ ಗಂಗಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿಗಳು ಗಂಗಮ್ಮರನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕಾವೇರಿ ನದಿಗೆ ಎಸೆದಿದ್ದಾರೆ. ಮೃತ ಗಂಗಮ್ಮಗೆ ಮಕ್ಕಳಿಲ್ಲ. ಗಂಡ ಸತ್ತು ಹೋಗಿದ್ದಾರೆ. ಆಗಸ್ಟ್ 7 ರಿಂದ ಗಂಗಮ್ಮ ನಾಪತ್ತೆಯಾಗಿದ್ದರು. ಕೊಲೆ ಆರೋಪಿಗಳು ಮದ್ಯದ ಅಮಲಿನಲ್ಲಿ ಹತ್ಯೆ ಬಗ್ಗೆ ಮಾತನಾಡಿದ್ದಾರೆ. ವಿಚಾರ ತಿಳಿದು …

Read More »

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ:ವಿಶ್ವನಾಥ್ ಆರೋಪಿ

ಮೈಸೂರು:  ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ ಅಂತಾ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ. ಡಿಜೆ ಹಳ್ಳಿ ಗಲಭೆ ವಿಚಾರವಾಗಿ  ಮಾತನಾಡಿದ ಅವರು, ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ.  . ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ …

Read More »

ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್​

ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್​ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ.   ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್​ …

Read More »

ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ : ಮದ್ಯ ಸಿಗದೇ ಚಡಪಡಿಸಿದ ಪಾನಪ್ರಿಯರು..!

ಮೈಸೂರು, – ನಗರದಾದ್ಯಂತ ಇಂದು ರಾಮಮಂದಿರಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಅಯೋಧ್ಯೆಯಲ್ಲಿ ಇಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬೆಳಗ್ಗೆ 9 ರಿಂದಲೇ ದೇವಾಲಯಗಳಲ್ಲಿ ಶ್ರೀರಾಮಮಂದಿರ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ನಗರದ ಬಹುತೇಕ ನಾಗರಿಕರು ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ ಶ್ರೀರಾಮನಿಗೆ ಪೂಜೆ ಸಲ್ಲಿಸಿದ್ದಾರೆ. ವಿಶೇಷವಾಗಿ ಇಂದು ನಗರದಲ್ಲಿರುವ ಸೀತಾ ವಿಲಾಸ ರಸ್ತೆಯಲ್ಲಿರುವ ರಾಮಮಂದಿರ ಸರಸ್ವತಿಪುರ, ಜಯನಗರದ ರಾಮಮಂದಿರಗಳು …

Read More »

ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್

ಮೈಸೂರು: ದಿನ ದಿನಕ್ಕೂ ಕೊರೊನಾ ಪ್ರಕರಣಗಳ ಸಂಖ್ಯೆ ಇಡೀ ಮೈಸೂರೇ ಬೆಚ್ಚುವಂತೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ. ಒಂದು ವಾರದಲ್ಲಿ 45 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಭಾನುವಾರದವರೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,867 ಇಷ್ಟು ವೇಗವಾಗಿ ಸೋಂಕು ಹರಡುತ್ತಿರುವುದು ಇಡೀ ಮೈಸೂರನ್ನು ಆತಂಕಕ್ಕೆ ಒಳಗಾಗಿಸಿದೆ. ಮೈಸೂರಿನ ಪ್ರತಿಷ್ಠಿತ ಜೆ.ಕೆ. ಟೈರ್ಸ್ ಕಂಪನಿಯ …

Read More »

ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬನ ಕಿತಾಪತಿ

ಮೈಸೂರು: ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬ ಕಿತಾಪತಿ ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳ ಬಡಾವಣೆಯಲ್ಲಿ ನಡೆದಿದೆ. ಕೊರೊನಾ ತಪಾಸಣೆಗೆ ಬಂದ ವ್ಯಕ್ತಿಯೋರ್ವ ಪರೀಕ್ಷೆ ವೇಳೆ ತನ್ನ ನಂಬರ್ ಬದಲಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಅವರ ನಂಬರ್ ಅನ್ನು ಜಿಲ್ಲಾಡಳಿತಕ್ಕೆ ಕೊಟ್ಟು ಯಾಮಾರಿಸಿದ್ದಾನೆ. ಇದಾದ ಬಳಿಕ ಆ ವ್ಯಕ್ತಿಯ ಕೊರೊನಾ ವರದಿ ಬಂದಿದ್ದು, ಆತನಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೊರೊನಾ ದೃಢಪಟ್ಟ ವ್ಯಕ್ತಿ ನೀಡಿದ ನಂಬರ್ …

Read More »